Homeಕರ್ನಾಟಕಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

- Advertisement -
- Advertisement -

ಸ್ವಯಂ ಸೇವಾ ಸಂಸ್ಥೆಯಾದ ‘ಟ್ರುಥ್ ಪ್ರೊ ಫೌಂಡೇಶನ್‌ ಇಂಡಿಯಾ’ ಮೂಲಕ ಕಳೆದ ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರತಿಧ್ವನಿ.ಕಾಂ ಸುದ್ದಿ ಪೋರ್ಟಲ್‌ ಅನ್ನು ಫೇಸ್‌ಬುಕ್ ಶುಕ್ರವಾರದಂದು ಏಕಾಏಕಿ ತಡೆ ಹಿಡಿದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಪ್ರತಿಧ್ವನಿ.ಕಾಂ, “ಪ್ರತಿಧ್ವನಿ ವಿರುದ್ಧ ಷಢ್ಯಂತ್ರ ರೂಪಿಸಿದ್ದು, ಕಳೆದ ಕೆಲವು ತಿಂಗಳಿಂದ ಪ್ರತಿಧ್ವನಿಯ ಧ್ವನಿ ಅಡಗಿಸಲು ಕಾಣದ ಕೈಗಳು ನಡೆಸುತ್ತಿರುವ ಪ್ರಯತ್ನ ಇದಾಗಿದೆ” ಎಂದು ಹೇಳಿದೆ.

ಫೇಸ್‌ಬುಕ್ ಪ್ರತಿಧ್ವನಿ ವೆಬ್‌ಸೈಟ್‌‌ನ ಎಲ್ಲಾ ಸುದ್ದಿಗಳನ್ನು ವೆಬ್‌ಸೈಟ್‌ನ ಪೇಜ್‌ನಿಂದ ಈಗಾಗಲೆ ಡಿಲೀಟ್‌ ಮಾಡಿದೆ. ಅಷ್ಟೆ ಅಲ್ಲದೆ, ವೆಬ್‌ಸೈಟ್‌ನ ಸುದ್ದಿಗಳನ್ನು ಹಂಚಿಕೊಂಡಿದ್ದ ಇತರ ವ್ಯಕ್ತಿಗಳ ಪೋಸ್ಟ್‌ಗಳನ್ನೂ ಅದು ತೆಗೆದು ಹಾಕಿದೆ. ಜೊತೆಗೆ ಪ್ರತಿಧ್ವನಿ ವೆಬ್‌ಸೈಟ್‌ನ ಯಾವುದೇ ಹೊಸ ಸುದ್ದಿಗಳನ್ನೂ ಹಂಚಲು ಕೂಡಾ ಫೇಸ್‌ಬುಕ್ ಅನುಮತಿ ನೀಡುತ್ತಿಲ್ಲ ಎಂದು ಪ್ರತಿಧ್ವನಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಎರಡು ತಿಂಗಳಿಂದ ನಮ್ಮ ಅಧಿಕೃತ ಮೇಲ್ ಐಡಿ ಹ್ಯಾಕ್ ಮಾಡಿ ನಮ್ಮ ಡೇಟಾವನ್ನು ಕದಿಯಲಾಯ್ತು. ಇದರಿಂದಾಗಿ ಸಂಸ್ಥೆಯಲ್ಲಿ ಬಳಸಲಾಗುವ ಎಲ್ಲಾ ಕಂಪ್ಯೂಟರ್ ಜೊತೆಗೆ ಸಿಬ್ಬಂದಿಯ ಮೊಬೈಲ್‌ಗಳು ಸಹ ಸಂಪೂರ್ಣ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದ್ದವು. ಕೆಲವು ಮೊಬೈಲ್ ಆನ್ ಆದರೂ ಅದರಲ್ಲಿದ್ದ ಡೇಟಾ ಕಾಣೆಯಾಗಿದ್ದವು” ಎಂದು ಪ್ರತಿಧ್ವನಿ ತಂಡ ಹೇಳಿದೆ.

“ಸೈಬರ್ ಪೊಲೀಸರಿಗೆ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ತಾಂತ್ರಿಕ ವರ್ಗದವರ ಸಹಾಯದಿಂದ ಎಲ್ಲವನ್ನು ಮತ್ತೊಮ್ಮೆ ರೀಸೆಟ್ ಮಾಡಿ ಕೆಲಸ ಆರಂಭಿಸಿದರೆ, ಯೂಟ್ಯೂಬ್ ಬ್ಲಾಕ್ ಮಾಡಲಾಯಿತು. ಕಳೆದ ಸೋಮವಾರವಷ್ಟೇ ಈ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆದರೆ ಈಗ ಫೇಸ್ ಬುಕ್ ಸಮಸ್ಯೆ ಕಾಡಲಾರಂಭಿಸಿದೆ. ಈಗ ನಮ್ಮ ವೆಬ್‌ಸೈಟ್ ಲಿಂಕ್ ಅನ್ನು ಫೇಸ್‌‌‌ಬುಕ್‌ನಿಂದ ಬ್ಲಾಕ್‌‌ ಮಾಡಲಾಗಿದೆ” ಎಂದು ತಂಡವೂ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಧ್ವನಿ ಸಂಸ್ಥಾಪಕರಾದ ಶಿವಕುಮಾರ್‌ ಸಿದ್ದಪ್ಪ,“ವೆಬ್‌ಸೈಟ್‌ನ ಯಾವುದೇ ಕಂಟೆಂಟ್‌ ಅನ್ನು ಫೇಸ್‌ಬುಕ್‌ಗೆ ಹಂಚಲು ಬಿಡುತ್ತಿಲ್ಲ. ಕೆಲವೊಂದು ವಿಡಿಯೊಗಳನ್ನು ಕೂಡಾ ತೆಗೆದು ಹಾಕಿದ್ದಾರೆ. ನಮ್ಮನ್ನು ದೂರ ಇಡಲು ಬೇಕಾಗಿ ಉದ್ದೇಶಪೂರ್ವಕವಾಗಿ ಫೇಸ್‌ಬುಕ್ ಇದನ್ನು ಮಾಡುತ್ತಿದೆ. ಈ ಹಿಂದೆ ನಿಯಮ ಉಲ್ಲಂಘನೆ ಆದರೆ ನೋಟಿಸ್ ನೀಡುತ್ತಿದ್ದರು. ಆದರೆ ಈಗ ಏಕಾಏಕಿ ಎಲ್ಲವನ್ನೂ ತೆಗೆದಿದ್ದಾರೆ. ನಮ್ಮ ಹೆಚ್ಚಿನ ಓದುಗರು ಫೇಸ್‌ಬುಕ್‌ ಮೂಲಕವೇ ಬರುತ್ತಾರೆ. ಅಲ್ಲಿ ನಮ್ಮನ್ನು ತಡೆಹಿಡಿದು ಅವರಿಗೆ ತಲುಪದಂತೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಈ ತೊಂದರೆಯ ಬಗ್ಗೆ ನಮ್ಮ ತಾಂತ್ರಿತ ತಂಡ ಫೇಸ್‌ಬುಕ್‌ಗೆ ದೂರು ನೀಡಿದ್ದಾರೆ. ಅವರು ರಿವೀವ್ ಮಾಡಲು 48 ಗಂಟೆ ಕೇಳಿದ್ದಾರೆ. ಇಲ್ಲಿಯೆ ನೋಡಿ, ಅವರಿಗೆ ರಿವೀವ್ ಮಾಡಲು 48 ಗಂಟೆಗಳು ಬೇಕು. ಆದರೆ ತೆಗೆದು ಹಾಕಲು ಯಾವುದೇ ಸಮಯ ನೀಡಿಲ್ಲ. ಅದೂ ಕೂಡಾ ಯಾವುದೇ ನೋಟಿಸ್ ನೀಡದೆ ಎಲ್ಲವನ್ನೂ ತೆಗೆದು ಹಾಕಿದ್ದಾರೆ. ಅವರು ರಿವೀವ್‌ ಮಾಡಲು 48 ಗಂಟೆಗಳು ತೆಗೆದುಕೊಂಡ ಹಾಗೆ ನಮಗೆ ಕೂಡಾ ಒಂದು ಅವಕಾಶ ನೀಡಬೇಕಿತ್ತಲ್ಲವೆ. ಎಲ್ಲಾ ನಿಯಮಗಳನ್ನು ಮೀರಿ ಬರೆಯುವ ಎಷ್ಟೊ ವೆಬ್‌ಸೈಟ್‌ಗಳು ಫೇಸ್‌ಬುಕ್‌ನಲ್ಲಿ ಹಲವಾರು ಇವೆ. ಸರ್ಕಾರದ ಪರವಾಗಿ ಬರೆಯುವ ಅವುಗಳನ್ನು ಫೇಸ್‌ಬುಕ್‌ ಏನು ಮಾಡುವುದೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಫೇಸ್‌ಬುಕ್ ಪ್ರತಿನಿಧಿಗಳಿಗೆ ಸಂಪರ್ಕಿಸಿತ್ತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣವೇ ಅದನ್ನು ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...