Homeಕರ್ನಾಟಕಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

- Advertisement -
- Advertisement -

ಸ್ವಯಂ ಸೇವಾ ಸಂಸ್ಥೆಯಾದ ‘ಟ್ರುಥ್ ಪ್ರೊ ಫೌಂಡೇಶನ್‌ ಇಂಡಿಯಾ’ ಮೂಲಕ ಕಳೆದ ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರತಿಧ್ವನಿ.ಕಾಂ ಸುದ್ದಿ ಪೋರ್ಟಲ್‌ ಅನ್ನು ಫೇಸ್‌ಬುಕ್ ಶುಕ್ರವಾರದಂದು ಏಕಾಏಕಿ ತಡೆ ಹಿಡಿದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಪ್ರತಿಧ್ವನಿ.ಕಾಂ, “ಪ್ರತಿಧ್ವನಿ ವಿರುದ್ಧ ಷಢ್ಯಂತ್ರ ರೂಪಿಸಿದ್ದು, ಕಳೆದ ಕೆಲವು ತಿಂಗಳಿಂದ ಪ್ರತಿಧ್ವನಿಯ ಧ್ವನಿ ಅಡಗಿಸಲು ಕಾಣದ ಕೈಗಳು ನಡೆಸುತ್ತಿರುವ ಪ್ರಯತ್ನ ಇದಾಗಿದೆ” ಎಂದು ಹೇಳಿದೆ.

ಫೇಸ್‌ಬುಕ್ ಪ್ರತಿಧ್ವನಿ ವೆಬ್‌ಸೈಟ್‌‌ನ ಎಲ್ಲಾ ಸುದ್ದಿಗಳನ್ನು ವೆಬ್‌ಸೈಟ್‌ನ ಪೇಜ್‌ನಿಂದ ಈಗಾಗಲೆ ಡಿಲೀಟ್‌ ಮಾಡಿದೆ. ಅಷ್ಟೆ ಅಲ್ಲದೆ, ವೆಬ್‌ಸೈಟ್‌ನ ಸುದ್ದಿಗಳನ್ನು ಹಂಚಿಕೊಂಡಿದ್ದ ಇತರ ವ್ಯಕ್ತಿಗಳ ಪೋಸ್ಟ್‌ಗಳನ್ನೂ ಅದು ತೆಗೆದು ಹಾಕಿದೆ. ಜೊತೆಗೆ ಪ್ರತಿಧ್ವನಿ ವೆಬ್‌ಸೈಟ್‌ನ ಯಾವುದೇ ಹೊಸ ಸುದ್ದಿಗಳನ್ನೂ ಹಂಚಲು ಕೂಡಾ ಫೇಸ್‌ಬುಕ್ ಅನುಮತಿ ನೀಡುತ್ತಿಲ್ಲ ಎಂದು ಪ್ರತಿಧ್ವನಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಎರಡು ತಿಂಗಳಿಂದ ನಮ್ಮ ಅಧಿಕೃತ ಮೇಲ್ ಐಡಿ ಹ್ಯಾಕ್ ಮಾಡಿ ನಮ್ಮ ಡೇಟಾವನ್ನು ಕದಿಯಲಾಯ್ತು. ಇದರಿಂದಾಗಿ ಸಂಸ್ಥೆಯಲ್ಲಿ ಬಳಸಲಾಗುವ ಎಲ್ಲಾ ಕಂಪ್ಯೂಟರ್ ಜೊತೆಗೆ ಸಿಬ್ಬಂದಿಯ ಮೊಬೈಲ್‌ಗಳು ಸಹ ಸಂಪೂರ್ಣ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದ್ದವು. ಕೆಲವು ಮೊಬೈಲ್ ಆನ್ ಆದರೂ ಅದರಲ್ಲಿದ್ದ ಡೇಟಾ ಕಾಣೆಯಾಗಿದ್ದವು” ಎಂದು ಪ್ರತಿಧ್ವನಿ ತಂಡ ಹೇಳಿದೆ.

“ಸೈಬರ್ ಪೊಲೀಸರಿಗೆ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ತಾಂತ್ರಿಕ ವರ್ಗದವರ ಸಹಾಯದಿಂದ ಎಲ್ಲವನ್ನು ಮತ್ತೊಮ್ಮೆ ರೀಸೆಟ್ ಮಾಡಿ ಕೆಲಸ ಆರಂಭಿಸಿದರೆ, ಯೂಟ್ಯೂಬ್ ಬ್ಲಾಕ್ ಮಾಡಲಾಯಿತು. ಕಳೆದ ಸೋಮವಾರವಷ್ಟೇ ಈ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆದರೆ ಈಗ ಫೇಸ್ ಬುಕ್ ಸಮಸ್ಯೆ ಕಾಡಲಾರಂಭಿಸಿದೆ. ಈಗ ನಮ್ಮ ವೆಬ್‌ಸೈಟ್ ಲಿಂಕ್ ಅನ್ನು ಫೇಸ್‌‌‌ಬುಕ್‌ನಿಂದ ಬ್ಲಾಕ್‌‌ ಮಾಡಲಾಗಿದೆ” ಎಂದು ತಂಡವೂ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಧ್ವನಿ ಸಂಸ್ಥಾಪಕರಾದ ಶಿವಕುಮಾರ್‌ ಸಿದ್ದಪ್ಪ,“ವೆಬ್‌ಸೈಟ್‌ನ ಯಾವುದೇ ಕಂಟೆಂಟ್‌ ಅನ್ನು ಫೇಸ್‌ಬುಕ್‌ಗೆ ಹಂಚಲು ಬಿಡುತ್ತಿಲ್ಲ. ಕೆಲವೊಂದು ವಿಡಿಯೊಗಳನ್ನು ಕೂಡಾ ತೆಗೆದು ಹಾಕಿದ್ದಾರೆ. ನಮ್ಮನ್ನು ದೂರ ಇಡಲು ಬೇಕಾಗಿ ಉದ್ದೇಶಪೂರ್ವಕವಾಗಿ ಫೇಸ್‌ಬುಕ್ ಇದನ್ನು ಮಾಡುತ್ತಿದೆ. ಈ ಹಿಂದೆ ನಿಯಮ ಉಲ್ಲಂಘನೆ ಆದರೆ ನೋಟಿಸ್ ನೀಡುತ್ತಿದ್ದರು. ಆದರೆ ಈಗ ಏಕಾಏಕಿ ಎಲ್ಲವನ್ನೂ ತೆಗೆದಿದ್ದಾರೆ. ನಮ್ಮ ಹೆಚ್ಚಿನ ಓದುಗರು ಫೇಸ್‌ಬುಕ್‌ ಮೂಲಕವೇ ಬರುತ್ತಾರೆ. ಅಲ್ಲಿ ನಮ್ಮನ್ನು ತಡೆಹಿಡಿದು ಅವರಿಗೆ ತಲುಪದಂತೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಈ ತೊಂದರೆಯ ಬಗ್ಗೆ ನಮ್ಮ ತಾಂತ್ರಿತ ತಂಡ ಫೇಸ್‌ಬುಕ್‌ಗೆ ದೂರು ನೀಡಿದ್ದಾರೆ. ಅವರು ರಿವೀವ್ ಮಾಡಲು 48 ಗಂಟೆ ಕೇಳಿದ್ದಾರೆ. ಇಲ್ಲಿಯೆ ನೋಡಿ, ಅವರಿಗೆ ರಿವೀವ್ ಮಾಡಲು 48 ಗಂಟೆಗಳು ಬೇಕು. ಆದರೆ ತೆಗೆದು ಹಾಕಲು ಯಾವುದೇ ಸಮಯ ನೀಡಿಲ್ಲ. ಅದೂ ಕೂಡಾ ಯಾವುದೇ ನೋಟಿಸ್ ನೀಡದೆ ಎಲ್ಲವನ್ನೂ ತೆಗೆದು ಹಾಕಿದ್ದಾರೆ. ಅವರು ರಿವೀವ್‌ ಮಾಡಲು 48 ಗಂಟೆಗಳು ತೆಗೆದುಕೊಂಡ ಹಾಗೆ ನಮಗೆ ಕೂಡಾ ಒಂದು ಅವಕಾಶ ನೀಡಬೇಕಿತ್ತಲ್ಲವೆ. ಎಲ್ಲಾ ನಿಯಮಗಳನ್ನು ಮೀರಿ ಬರೆಯುವ ಎಷ್ಟೊ ವೆಬ್‌ಸೈಟ್‌ಗಳು ಫೇಸ್‌ಬುಕ್‌ನಲ್ಲಿ ಹಲವಾರು ಇವೆ. ಸರ್ಕಾರದ ಪರವಾಗಿ ಬರೆಯುವ ಅವುಗಳನ್ನು ಫೇಸ್‌ಬುಕ್‌ ಏನು ಮಾಡುವುದೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಫೇಸ್‌ಬುಕ್ ಪ್ರತಿನಿಧಿಗಳಿಗೆ ಸಂಪರ್ಕಿಸಿತ್ತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣವೇ ಅದನ್ನು ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...