Homeಕರ್ನಾಟಕಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

- Advertisement -
- Advertisement -

ಸ್ವಯಂ ಸೇವಾ ಸಂಸ್ಥೆಯಾದ ‘ಟ್ರುಥ್ ಪ್ರೊ ಫೌಂಡೇಶನ್‌ ಇಂಡಿಯಾ’ ಮೂಲಕ ಕಳೆದ ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರತಿಧ್ವನಿ.ಕಾಂ ಸುದ್ದಿ ಪೋರ್ಟಲ್‌ ಅನ್ನು ಫೇಸ್‌ಬುಕ್ ಶುಕ್ರವಾರದಂದು ಏಕಾಏಕಿ ತಡೆ ಹಿಡಿದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಪ್ರತಿಧ್ವನಿ.ಕಾಂ, “ಪ್ರತಿಧ್ವನಿ ವಿರುದ್ಧ ಷಢ್ಯಂತ್ರ ರೂಪಿಸಿದ್ದು, ಕಳೆದ ಕೆಲವು ತಿಂಗಳಿಂದ ಪ್ರತಿಧ್ವನಿಯ ಧ್ವನಿ ಅಡಗಿಸಲು ಕಾಣದ ಕೈಗಳು ನಡೆಸುತ್ತಿರುವ ಪ್ರಯತ್ನ ಇದಾಗಿದೆ” ಎಂದು ಹೇಳಿದೆ.

ಫೇಸ್‌ಬುಕ್ ಪ್ರತಿಧ್ವನಿ ವೆಬ್‌ಸೈಟ್‌‌ನ ಎಲ್ಲಾ ಸುದ್ದಿಗಳನ್ನು ವೆಬ್‌ಸೈಟ್‌ನ ಪೇಜ್‌ನಿಂದ ಈಗಾಗಲೆ ಡಿಲೀಟ್‌ ಮಾಡಿದೆ. ಅಷ್ಟೆ ಅಲ್ಲದೆ, ವೆಬ್‌ಸೈಟ್‌ನ ಸುದ್ದಿಗಳನ್ನು ಹಂಚಿಕೊಂಡಿದ್ದ ಇತರ ವ್ಯಕ್ತಿಗಳ ಪೋಸ್ಟ್‌ಗಳನ್ನೂ ಅದು ತೆಗೆದು ಹಾಕಿದೆ. ಜೊತೆಗೆ ಪ್ರತಿಧ್ವನಿ ವೆಬ್‌ಸೈಟ್‌ನ ಯಾವುದೇ ಹೊಸ ಸುದ್ದಿಗಳನ್ನೂ ಹಂಚಲು ಕೂಡಾ ಫೇಸ್‌ಬುಕ್ ಅನುಮತಿ ನೀಡುತ್ತಿಲ್ಲ ಎಂದು ಪ್ರತಿಧ್ವನಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಎರಡು ತಿಂಗಳಿಂದ ನಮ್ಮ ಅಧಿಕೃತ ಮೇಲ್ ಐಡಿ ಹ್ಯಾಕ್ ಮಾಡಿ ನಮ್ಮ ಡೇಟಾವನ್ನು ಕದಿಯಲಾಯ್ತು. ಇದರಿಂದಾಗಿ ಸಂಸ್ಥೆಯಲ್ಲಿ ಬಳಸಲಾಗುವ ಎಲ್ಲಾ ಕಂಪ್ಯೂಟರ್ ಜೊತೆಗೆ ಸಿಬ್ಬಂದಿಯ ಮೊಬೈಲ್‌ಗಳು ಸಹ ಸಂಪೂರ್ಣ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದ್ದವು. ಕೆಲವು ಮೊಬೈಲ್ ಆನ್ ಆದರೂ ಅದರಲ್ಲಿದ್ದ ಡೇಟಾ ಕಾಣೆಯಾಗಿದ್ದವು” ಎಂದು ಪ್ರತಿಧ್ವನಿ ತಂಡ ಹೇಳಿದೆ.

“ಸೈಬರ್ ಪೊಲೀಸರಿಗೆ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ತಾಂತ್ರಿಕ ವರ್ಗದವರ ಸಹಾಯದಿಂದ ಎಲ್ಲವನ್ನು ಮತ್ತೊಮ್ಮೆ ರೀಸೆಟ್ ಮಾಡಿ ಕೆಲಸ ಆರಂಭಿಸಿದರೆ, ಯೂಟ್ಯೂಬ್ ಬ್ಲಾಕ್ ಮಾಡಲಾಯಿತು. ಕಳೆದ ಸೋಮವಾರವಷ್ಟೇ ಈ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆದರೆ ಈಗ ಫೇಸ್ ಬುಕ್ ಸಮಸ್ಯೆ ಕಾಡಲಾರಂಭಿಸಿದೆ. ಈಗ ನಮ್ಮ ವೆಬ್‌ಸೈಟ್ ಲಿಂಕ್ ಅನ್ನು ಫೇಸ್‌‌‌ಬುಕ್‌ನಿಂದ ಬ್ಲಾಕ್‌‌ ಮಾಡಲಾಗಿದೆ” ಎಂದು ತಂಡವೂ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಧ್ವನಿ ಸಂಸ್ಥಾಪಕರಾದ ಶಿವಕುಮಾರ್‌ ಸಿದ್ದಪ್ಪ,“ವೆಬ್‌ಸೈಟ್‌ನ ಯಾವುದೇ ಕಂಟೆಂಟ್‌ ಅನ್ನು ಫೇಸ್‌ಬುಕ್‌ಗೆ ಹಂಚಲು ಬಿಡುತ್ತಿಲ್ಲ. ಕೆಲವೊಂದು ವಿಡಿಯೊಗಳನ್ನು ಕೂಡಾ ತೆಗೆದು ಹಾಕಿದ್ದಾರೆ. ನಮ್ಮನ್ನು ದೂರ ಇಡಲು ಬೇಕಾಗಿ ಉದ್ದೇಶಪೂರ್ವಕವಾಗಿ ಫೇಸ್‌ಬುಕ್ ಇದನ್ನು ಮಾಡುತ್ತಿದೆ. ಈ ಹಿಂದೆ ನಿಯಮ ಉಲ್ಲಂಘನೆ ಆದರೆ ನೋಟಿಸ್ ನೀಡುತ್ತಿದ್ದರು. ಆದರೆ ಈಗ ಏಕಾಏಕಿ ಎಲ್ಲವನ್ನೂ ತೆಗೆದಿದ್ದಾರೆ. ನಮ್ಮ ಹೆಚ್ಚಿನ ಓದುಗರು ಫೇಸ್‌ಬುಕ್‌ ಮೂಲಕವೇ ಬರುತ್ತಾರೆ. ಅಲ್ಲಿ ನಮ್ಮನ್ನು ತಡೆಹಿಡಿದು ಅವರಿಗೆ ತಲುಪದಂತೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಈ ತೊಂದರೆಯ ಬಗ್ಗೆ ನಮ್ಮ ತಾಂತ್ರಿತ ತಂಡ ಫೇಸ್‌ಬುಕ್‌ಗೆ ದೂರು ನೀಡಿದ್ದಾರೆ. ಅವರು ರಿವೀವ್ ಮಾಡಲು 48 ಗಂಟೆ ಕೇಳಿದ್ದಾರೆ. ಇಲ್ಲಿಯೆ ನೋಡಿ, ಅವರಿಗೆ ರಿವೀವ್ ಮಾಡಲು 48 ಗಂಟೆಗಳು ಬೇಕು. ಆದರೆ ತೆಗೆದು ಹಾಕಲು ಯಾವುದೇ ಸಮಯ ನೀಡಿಲ್ಲ. ಅದೂ ಕೂಡಾ ಯಾವುದೇ ನೋಟಿಸ್ ನೀಡದೆ ಎಲ್ಲವನ್ನೂ ತೆಗೆದು ಹಾಕಿದ್ದಾರೆ. ಅವರು ರಿವೀವ್‌ ಮಾಡಲು 48 ಗಂಟೆಗಳು ತೆಗೆದುಕೊಂಡ ಹಾಗೆ ನಮಗೆ ಕೂಡಾ ಒಂದು ಅವಕಾಶ ನೀಡಬೇಕಿತ್ತಲ್ಲವೆ. ಎಲ್ಲಾ ನಿಯಮಗಳನ್ನು ಮೀರಿ ಬರೆಯುವ ಎಷ್ಟೊ ವೆಬ್‌ಸೈಟ್‌ಗಳು ಫೇಸ್‌ಬುಕ್‌ನಲ್ಲಿ ಹಲವಾರು ಇವೆ. ಸರ್ಕಾರದ ಪರವಾಗಿ ಬರೆಯುವ ಅವುಗಳನ್ನು ಫೇಸ್‌ಬುಕ್‌ ಏನು ಮಾಡುವುದೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಫೇಸ್‌ಬುಕ್ ಪ್ರತಿನಿಧಿಗಳಿಗೆ ಸಂಪರ್ಕಿಸಿತ್ತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣವೇ ಅದನ್ನು ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...