Homeಕರ್ನಾಟಕಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

- Advertisement -
- Advertisement -

ಸ್ವಯಂ ಸೇವಾ ಸಂಸ್ಥೆಯಾದ ‘ಟ್ರುಥ್ ಪ್ರೊ ಫೌಂಡೇಶನ್‌ ಇಂಡಿಯಾ’ ಮೂಲಕ ಕಳೆದ ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರತಿಧ್ವನಿ.ಕಾಂ ಸುದ್ದಿ ಪೋರ್ಟಲ್‌ ಅನ್ನು ಫೇಸ್‌ಬುಕ್ ಶುಕ್ರವಾರದಂದು ಏಕಾಏಕಿ ತಡೆ ಹಿಡಿದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಪ್ರತಿಧ್ವನಿ.ಕಾಂ, “ಪ್ರತಿಧ್ವನಿ ವಿರುದ್ಧ ಷಢ್ಯಂತ್ರ ರೂಪಿಸಿದ್ದು, ಕಳೆದ ಕೆಲವು ತಿಂಗಳಿಂದ ಪ್ರತಿಧ್ವನಿಯ ಧ್ವನಿ ಅಡಗಿಸಲು ಕಾಣದ ಕೈಗಳು ನಡೆಸುತ್ತಿರುವ ಪ್ರಯತ್ನ ಇದಾಗಿದೆ” ಎಂದು ಹೇಳಿದೆ.

ಫೇಸ್‌ಬುಕ್ ಪ್ರತಿಧ್ವನಿ ವೆಬ್‌ಸೈಟ್‌‌ನ ಎಲ್ಲಾ ಸುದ್ದಿಗಳನ್ನು ವೆಬ್‌ಸೈಟ್‌ನ ಪೇಜ್‌ನಿಂದ ಈಗಾಗಲೆ ಡಿಲೀಟ್‌ ಮಾಡಿದೆ. ಅಷ್ಟೆ ಅಲ್ಲದೆ, ವೆಬ್‌ಸೈಟ್‌ನ ಸುದ್ದಿಗಳನ್ನು ಹಂಚಿಕೊಂಡಿದ್ದ ಇತರ ವ್ಯಕ್ತಿಗಳ ಪೋಸ್ಟ್‌ಗಳನ್ನೂ ಅದು ತೆಗೆದು ಹಾಕಿದೆ. ಜೊತೆಗೆ ಪ್ರತಿಧ್ವನಿ ವೆಬ್‌ಸೈಟ್‌ನ ಯಾವುದೇ ಹೊಸ ಸುದ್ದಿಗಳನ್ನೂ ಹಂಚಲು ಕೂಡಾ ಫೇಸ್‌ಬುಕ್ ಅನುಮತಿ ನೀಡುತ್ತಿಲ್ಲ ಎಂದು ಪ್ರತಿಧ್ವನಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಎರಡು ತಿಂಗಳಿಂದ ನಮ್ಮ ಅಧಿಕೃತ ಮೇಲ್ ಐಡಿ ಹ್ಯಾಕ್ ಮಾಡಿ ನಮ್ಮ ಡೇಟಾವನ್ನು ಕದಿಯಲಾಯ್ತು. ಇದರಿಂದಾಗಿ ಸಂಸ್ಥೆಯಲ್ಲಿ ಬಳಸಲಾಗುವ ಎಲ್ಲಾ ಕಂಪ್ಯೂಟರ್ ಜೊತೆಗೆ ಸಿಬ್ಬಂದಿಯ ಮೊಬೈಲ್‌ಗಳು ಸಹ ಸಂಪೂರ್ಣ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದ್ದವು. ಕೆಲವು ಮೊಬೈಲ್ ಆನ್ ಆದರೂ ಅದರಲ್ಲಿದ್ದ ಡೇಟಾ ಕಾಣೆಯಾಗಿದ್ದವು” ಎಂದು ಪ್ರತಿಧ್ವನಿ ತಂಡ ಹೇಳಿದೆ.

“ಸೈಬರ್ ಪೊಲೀಸರಿಗೆ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ತಾಂತ್ರಿಕ ವರ್ಗದವರ ಸಹಾಯದಿಂದ ಎಲ್ಲವನ್ನು ಮತ್ತೊಮ್ಮೆ ರೀಸೆಟ್ ಮಾಡಿ ಕೆಲಸ ಆರಂಭಿಸಿದರೆ, ಯೂಟ್ಯೂಬ್ ಬ್ಲಾಕ್ ಮಾಡಲಾಯಿತು. ಕಳೆದ ಸೋಮವಾರವಷ್ಟೇ ಈ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆದರೆ ಈಗ ಫೇಸ್ ಬುಕ್ ಸಮಸ್ಯೆ ಕಾಡಲಾರಂಭಿಸಿದೆ. ಈಗ ನಮ್ಮ ವೆಬ್‌ಸೈಟ್ ಲಿಂಕ್ ಅನ್ನು ಫೇಸ್‌‌‌ಬುಕ್‌ನಿಂದ ಬ್ಲಾಕ್‌‌ ಮಾಡಲಾಗಿದೆ” ಎಂದು ತಂಡವೂ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಧ್ವನಿ ಸಂಸ್ಥಾಪಕರಾದ ಶಿವಕುಮಾರ್‌ ಸಿದ್ದಪ್ಪ,“ವೆಬ್‌ಸೈಟ್‌ನ ಯಾವುದೇ ಕಂಟೆಂಟ್‌ ಅನ್ನು ಫೇಸ್‌ಬುಕ್‌ಗೆ ಹಂಚಲು ಬಿಡುತ್ತಿಲ್ಲ. ಕೆಲವೊಂದು ವಿಡಿಯೊಗಳನ್ನು ಕೂಡಾ ತೆಗೆದು ಹಾಕಿದ್ದಾರೆ. ನಮ್ಮನ್ನು ದೂರ ಇಡಲು ಬೇಕಾಗಿ ಉದ್ದೇಶಪೂರ್ವಕವಾಗಿ ಫೇಸ್‌ಬುಕ್ ಇದನ್ನು ಮಾಡುತ್ತಿದೆ. ಈ ಹಿಂದೆ ನಿಯಮ ಉಲ್ಲಂಘನೆ ಆದರೆ ನೋಟಿಸ್ ನೀಡುತ್ತಿದ್ದರು. ಆದರೆ ಈಗ ಏಕಾಏಕಿ ಎಲ್ಲವನ್ನೂ ತೆಗೆದಿದ್ದಾರೆ. ನಮ್ಮ ಹೆಚ್ಚಿನ ಓದುಗರು ಫೇಸ್‌ಬುಕ್‌ ಮೂಲಕವೇ ಬರುತ್ತಾರೆ. ಅಲ್ಲಿ ನಮ್ಮನ್ನು ತಡೆಹಿಡಿದು ಅವರಿಗೆ ತಲುಪದಂತೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಈ ತೊಂದರೆಯ ಬಗ್ಗೆ ನಮ್ಮ ತಾಂತ್ರಿತ ತಂಡ ಫೇಸ್‌ಬುಕ್‌ಗೆ ದೂರು ನೀಡಿದ್ದಾರೆ. ಅವರು ರಿವೀವ್ ಮಾಡಲು 48 ಗಂಟೆ ಕೇಳಿದ್ದಾರೆ. ಇಲ್ಲಿಯೆ ನೋಡಿ, ಅವರಿಗೆ ರಿವೀವ್ ಮಾಡಲು 48 ಗಂಟೆಗಳು ಬೇಕು. ಆದರೆ ತೆಗೆದು ಹಾಕಲು ಯಾವುದೇ ಸಮಯ ನೀಡಿಲ್ಲ. ಅದೂ ಕೂಡಾ ಯಾವುದೇ ನೋಟಿಸ್ ನೀಡದೆ ಎಲ್ಲವನ್ನೂ ತೆಗೆದು ಹಾಕಿದ್ದಾರೆ. ಅವರು ರಿವೀವ್‌ ಮಾಡಲು 48 ಗಂಟೆಗಳು ತೆಗೆದುಕೊಂಡ ಹಾಗೆ ನಮಗೆ ಕೂಡಾ ಒಂದು ಅವಕಾಶ ನೀಡಬೇಕಿತ್ತಲ್ಲವೆ. ಎಲ್ಲಾ ನಿಯಮಗಳನ್ನು ಮೀರಿ ಬರೆಯುವ ಎಷ್ಟೊ ವೆಬ್‌ಸೈಟ್‌ಗಳು ಫೇಸ್‌ಬುಕ್‌ನಲ್ಲಿ ಹಲವಾರು ಇವೆ. ಸರ್ಕಾರದ ಪರವಾಗಿ ಬರೆಯುವ ಅವುಗಳನ್ನು ಫೇಸ್‌ಬುಕ್‌ ಏನು ಮಾಡುವುದೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಫೇಸ್‌ಬುಕ್ ಪ್ರತಿನಿಧಿಗಳಿಗೆ ಸಂಪರ್ಕಿಸಿತ್ತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣವೇ ಅದನ್ನು ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...