Homeಕರ್ನಾಟಕಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

- Advertisement -
- Advertisement -

ಸ್ವಯಂ ಸೇವಾ ಸಂಸ್ಥೆಯಾದ ‘ಟ್ರುಥ್ ಪ್ರೊ ಫೌಂಡೇಶನ್‌ ಇಂಡಿಯಾ’ ಮೂಲಕ ಕಳೆದ ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರತಿಧ್ವನಿ.ಕಾಂ ಸುದ್ದಿ ಪೋರ್ಟಲ್‌ ಅನ್ನು ಫೇಸ್‌ಬುಕ್ ಶುಕ್ರವಾರದಂದು ಏಕಾಏಕಿ ತಡೆ ಹಿಡಿದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಪ್ರತಿಧ್ವನಿ.ಕಾಂ, “ಪ್ರತಿಧ್ವನಿ ವಿರುದ್ಧ ಷಢ್ಯಂತ್ರ ರೂಪಿಸಿದ್ದು, ಕಳೆದ ಕೆಲವು ತಿಂಗಳಿಂದ ಪ್ರತಿಧ್ವನಿಯ ಧ್ವನಿ ಅಡಗಿಸಲು ಕಾಣದ ಕೈಗಳು ನಡೆಸುತ್ತಿರುವ ಪ್ರಯತ್ನ ಇದಾಗಿದೆ” ಎಂದು ಹೇಳಿದೆ.

ಫೇಸ್‌ಬುಕ್ ಪ್ರತಿಧ್ವನಿ ವೆಬ್‌ಸೈಟ್‌‌ನ ಎಲ್ಲಾ ಸುದ್ದಿಗಳನ್ನು ವೆಬ್‌ಸೈಟ್‌ನ ಪೇಜ್‌ನಿಂದ ಈಗಾಗಲೆ ಡಿಲೀಟ್‌ ಮಾಡಿದೆ. ಅಷ್ಟೆ ಅಲ್ಲದೆ, ವೆಬ್‌ಸೈಟ್‌ನ ಸುದ್ದಿಗಳನ್ನು ಹಂಚಿಕೊಂಡಿದ್ದ ಇತರ ವ್ಯಕ್ತಿಗಳ ಪೋಸ್ಟ್‌ಗಳನ್ನೂ ಅದು ತೆಗೆದು ಹಾಕಿದೆ. ಜೊತೆಗೆ ಪ್ರತಿಧ್ವನಿ ವೆಬ್‌ಸೈಟ್‌ನ ಯಾವುದೇ ಹೊಸ ಸುದ್ದಿಗಳನ್ನೂ ಹಂಚಲು ಕೂಡಾ ಫೇಸ್‌ಬುಕ್ ಅನುಮತಿ ನೀಡುತ್ತಿಲ್ಲ ಎಂದು ಪ್ರತಿಧ್ವನಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಎರಡು ತಿಂಗಳಿಂದ ನಮ್ಮ ಅಧಿಕೃತ ಮೇಲ್ ಐಡಿ ಹ್ಯಾಕ್ ಮಾಡಿ ನಮ್ಮ ಡೇಟಾವನ್ನು ಕದಿಯಲಾಯ್ತು. ಇದರಿಂದಾಗಿ ಸಂಸ್ಥೆಯಲ್ಲಿ ಬಳಸಲಾಗುವ ಎಲ್ಲಾ ಕಂಪ್ಯೂಟರ್ ಜೊತೆಗೆ ಸಿಬ್ಬಂದಿಯ ಮೊಬೈಲ್‌ಗಳು ಸಹ ಸಂಪೂರ್ಣ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದ್ದವು. ಕೆಲವು ಮೊಬೈಲ್ ಆನ್ ಆದರೂ ಅದರಲ್ಲಿದ್ದ ಡೇಟಾ ಕಾಣೆಯಾಗಿದ್ದವು” ಎಂದು ಪ್ರತಿಧ್ವನಿ ತಂಡ ಹೇಳಿದೆ.

“ಸೈಬರ್ ಪೊಲೀಸರಿಗೆ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ತಾಂತ್ರಿಕ ವರ್ಗದವರ ಸಹಾಯದಿಂದ ಎಲ್ಲವನ್ನು ಮತ್ತೊಮ್ಮೆ ರೀಸೆಟ್ ಮಾಡಿ ಕೆಲಸ ಆರಂಭಿಸಿದರೆ, ಯೂಟ್ಯೂಬ್ ಬ್ಲಾಕ್ ಮಾಡಲಾಯಿತು. ಕಳೆದ ಸೋಮವಾರವಷ್ಟೇ ಈ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆದರೆ ಈಗ ಫೇಸ್ ಬುಕ್ ಸಮಸ್ಯೆ ಕಾಡಲಾರಂಭಿಸಿದೆ. ಈಗ ನಮ್ಮ ವೆಬ್‌ಸೈಟ್ ಲಿಂಕ್ ಅನ್ನು ಫೇಸ್‌‌‌ಬುಕ್‌ನಿಂದ ಬ್ಲಾಕ್‌‌ ಮಾಡಲಾಗಿದೆ” ಎಂದು ತಂಡವೂ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಧ್ವನಿ ಸಂಸ್ಥಾಪಕರಾದ ಶಿವಕುಮಾರ್‌ ಸಿದ್ದಪ್ಪ,“ವೆಬ್‌ಸೈಟ್‌ನ ಯಾವುದೇ ಕಂಟೆಂಟ್‌ ಅನ್ನು ಫೇಸ್‌ಬುಕ್‌ಗೆ ಹಂಚಲು ಬಿಡುತ್ತಿಲ್ಲ. ಕೆಲವೊಂದು ವಿಡಿಯೊಗಳನ್ನು ಕೂಡಾ ತೆಗೆದು ಹಾಕಿದ್ದಾರೆ. ನಮ್ಮನ್ನು ದೂರ ಇಡಲು ಬೇಕಾಗಿ ಉದ್ದೇಶಪೂರ್ವಕವಾಗಿ ಫೇಸ್‌ಬುಕ್ ಇದನ್ನು ಮಾಡುತ್ತಿದೆ. ಈ ಹಿಂದೆ ನಿಯಮ ಉಲ್ಲಂಘನೆ ಆದರೆ ನೋಟಿಸ್ ನೀಡುತ್ತಿದ್ದರು. ಆದರೆ ಈಗ ಏಕಾಏಕಿ ಎಲ್ಲವನ್ನೂ ತೆಗೆದಿದ್ದಾರೆ. ನಮ್ಮ ಹೆಚ್ಚಿನ ಓದುಗರು ಫೇಸ್‌ಬುಕ್‌ ಮೂಲಕವೇ ಬರುತ್ತಾರೆ. ಅಲ್ಲಿ ನಮ್ಮನ್ನು ತಡೆಹಿಡಿದು ಅವರಿಗೆ ತಲುಪದಂತೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಈ ತೊಂದರೆಯ ಬಗ್ಗೆ ನಮ್ಮ ತಾಂತ್ರಿತ ತಂಡ ಫೇಸ್‌ಬುಕ್‌ಗೆ ದೂರು ನೀಡಿದ್ದಾರೆ. ಅವರು ರಿವೀವ್ ಮಾಡಲು 48 ಗಂಟೆ ಕೇಳಿದ್ದಾರೆ. ಇಲ್ಲಿಯೆ ನೋಡಿ, ಅವರಿಗೆ ರಿವೀವ್ ಮಾಡಲು 48 ಗಂಟೆಗಳು ಬೇಕು. ಆದರೆ ತೆಗೆದು ಹಾಕಲು ಯಾವುದೇ ಸಮಯ ನೀಡಿಲ್ಲ. ಅದೂ ಕೂಡಾ ಯಾವುದೇ ನೋಟಿಸ್ ನೀಡದೆ ಎಲ್ಲವನ್ನೂ ತೆಗೆದು ಹಾಕಿದ್ದಾರೆ. ಅವರು ರಿವೀವ್‌ ಮಾಡಲು 48 ಗಂಟೆಗಳು ತೆಗೆದುಕೊಂಡ ಹಾಗೆ ನಮಗೆ ಕೂಡಾ ಒಂದು ಅವಕಾಶ ನೀಡಬೇಕಿತ್ತಲ್ಲವೆ. ಎಲ್ಲಾ ನಿಯಮಗಳನ್ನು ಮೀರಿ ಬರೆಯುವ ಎಷ್ಟೊ ವೆಬ್‌ಸೈಟ್‌ಗಳು ಫೇಸ್‌ಬುಕ್‌ನಲ್ಲಿ ಹಲವಾರು ಇವೆ. ಸರ್ಕಾರದ ಪರವಾಗಿ ಬರೆಯುವ ಅವುಗಳನ್ನು ಫೇಸ್‌ಬುಕ್‌ ಏನು ಮಾಡುವುದೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಫೇಸ್‌ಬುಕ್ ಪ್ರತಿನಿಧಿಗಳಿಗೆ ಸಂಪರ್ಕಿಸಿತ್ತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣವೇ ಅದನ್ನು ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...