Homeಕರ್ನಾಟಕಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

- Advertisement -
- Advertisement -

ಸ್ವಯಂ ಸೇವಾ ಸಂಸ್ಥೆಯಾದ ‘ಟ್ರುಥ್ ಪ್ರೊ ಫೌಂಡೇಶನ್‌ ಇಂಡಿಯಾ’ ಮೂಲಕ ಕಳೆದ ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರತಿಧ್ವನಿ.ಕಾಂ ಸುದ್ದಿ ಪೋರ್ಟಲ್‌ ಅನ್ನು ಫೇಸ್‌ಬುಕ್ ಶುಕ್ರವಾರದಂದು ಏಕಾಏಕಿ ತಡೆ ಹಿಡಿದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಪ್ರತಿಧ್ವನಿ.ಕಾಂ, “ಪ್ರತಿಧ್ವನಿ ವಿರುದ್ಧ ಷಢ್ಯಂತ್ರ ರೂಪಿಸಿದ್ದು, ಕಳೆದ ಕೆಲವು ತಿಂಗಳಿಂದ ಪ್ರತಿಧ್ವನಿಯ ಧ್ವನಿ ಅಡಗಿಸಲು ಕಾಣದ ಕೈಗಳು ನಡೆಸುತ್ತಿರುವ ಪ್ರಯತ್ನ ಇದಾಗಿದೆ” ಎಂದು ಹೇಳಿದೆ.

ಫೇಸ್‌ಬುಕ್ ಪ್ರತಿಧ್ವನಿ ವೆಬ್‌ಸೈಟ್‌‌ನ ಎಲ್ಲಾ ಸುದ್ದಿಗಳನ್ನು ವೆಬ್‌ಸೈಟ್‌ನ ಪೇಜ್‌ನಿಂದ ಈಗಾಗಲೆ ಡಿಲೀಟ್‌ ಮಾಡಿದೆ. ಅಷ್ಟೆ ಅಲ್ಲದೆ, ವೆಬ್‌ಸೈಟ್‌ನ ಸುದ್ದಿಗಳನ್ನು ಹಂಚಿಕೊಂಡಿದ್ದ ಇತರ ವ್ಯಕ್ತಿಗಳ ಪೋಸ್ಟ್‌ಗಳನ್ನೂ ಅದು ತೆಗೆದು ಹಾಕಿದೆ. ಜೊತೆಗೆ ಪ್ರತಿಧ್ವನಿ ವೆಬ್‌ಸೈಟ್‌ನ ಯಾವುದೇ ಹೊಸ ಸುದ್ದಿಗಳನ್ನೂ ಹಂಚಲು ಕೂಡಾ ಫೇಸ್‌ಬುಕ್ ಅನುಮತಿ ನೀಡುತ್ತಿಲ್ಲ ಎಂದು ಪ್ರತಿಧ್ವನಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಎರಡು ತಿಂಗಳಿಂದ ನಮ್ಮ ಅಧಿಕೃತ ಮೇಲ್ ಐಡಿ ಹ್ಯಾಕ್ ಮಾಡಿ ನಮ್ಮ ಡೇಟಾವನ್ನು ಕದಿಯಲಾಯ್ತು. ಇದರಿಂದಾಗಿ ಸಂಸ್ಥೆಯಲ್ಲಿ ಬಳಸಲಾಗುವ ಎಲ್ಲಾ ಕಂಪ್ಯೂಟರ್ ಜೊತೆಗೆ ಸಿಬ್ಬಂದಿಯ ಮೊಬೈಲ್‌ಗಳು ಸಹ ಸಂಪೂರ್ಣ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದ್ದವು. ಕೆಲವು ಮೊಬೈಲ್ ಆನ್ ಆದರೂ ಅದರಲ್ಲಿದ್ದ ಡೇಟಾ ಕಾಣೆಯಾಗಿದ್ದವು” ಎಂದು ಪ್ರತಿಧ್ವನಿ ತಂಡ ಹೇಳಿದೆ.

“ಸೈಬರ್ ಪೊಲೀಸರಿಗೆ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ತಾಂತ್ರಿಕ ವರ್ಗದವರ ಸಹಾಯದಿಂದ ಎಲ್ಲವನ್ನು ಮತ್ತೊಮ್ಮೆ ರೀಸೆಟ್ ಮಾಡಿ ಕೆಲಸ ಆರಂಭಿಸಿದರೆ, ಯೂಟ್ಯೂಬ್ ಬ್ಲಾಕ್ ಮಾಡಲಾಯಿತು. ಕಳೆದ ಸೋಮವಾರವಷ್ಟೇ ಈ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆದರೆ ಈಗ ಫೇಸ್ ಬುಕ್ ಸಮಸ್ಯೆ ಕಾಡಲಾರಂಭಿಸಿದೆ. ಈಗ ನಮ್ಮ ವೆಬ್‌ಸೈಟ್ ಲಿಂಕ್ ಅನ್ನು ಫೇಸ್‌‌‌ಬುಕ್‌ನಿಂದ ಬ್ಲಾಕ್‌‌ ಮಾಡಲಾಗಿದೆ” ಎಂದು ತಂಡವೂ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಧ್ವನಿ ಸಂಸ್ಥಾಪಕರಾದ ಶಿವಕುಮಾರ್‌ ಸಿದ್ದಪ್ಪ,“ವೆಬ್‌ಸೈಟ್‌ನ ಯಾವುದೇ ಕಂಟೆಂಟ್‌ ಅನ್ನು ಫೇಸ್‌ಬುಕ್‌ಗೆ ಹಂಚಲು ಬಿಡುತ್ತಿಲ್ಲ. ಕೆಲವೊಂದು ವಿಡಿಯೊಗಳನ್ನು ಕೂಡಾ ತೆಗೆದು ಹಾಕಿದ್ದಾರೆ. ನಮ್ಮನ್ನು ದೂರ ಇಡಲು ಬೇಕಾಗಿ ಉದ್ದೇಶಪೂರ್ವಕವಾಗಿ ಫೇಸ್‌ಬುಕ್ ಇದನ್ನು ಮಾಡುತ್ತಿದೆ. ಈ ಹಿಂದೆ ನಿಯಮ ಉಲ್ಲಂಘನೆ ಆದರೆ ನೋಟಿಸ್ ನೀಡುತ್ತಿದ್ದರು. ಆದರೆ ಈಗ ಏಕಾಏಕಿ ಎಲ್ಲವನ್ನೂ ತೆಗೆದಿದ್ದಾರೆ. ನಮ್ಮ ಹೆಚ್ಚಿನ ಓದುಗರು ಫೇಸ್‌ಬುಕ್‌ ಮೂಲಕವೇ ಬರುತ್ತಾರೆ. ಅಲ್ಲಿ ನಮ್ಮನ್ನು ತಡೆಹಿಡಿದು ಅವರಿಗೆ ತಲುಪದಂತೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಈ ತೊಂದರೆಯ ಬಗ್ಗೆ ನಮ್ಮ ತಾಂತ್ರಿತ ತಂಡ ಫೇಸ್‌ಬುಕ್‌ಗೆ ದೂರು ನೀಡಿದ್ದಾರೆ. ಅವರು ರಿವೀವ್ ಮಾಡಲು 48 ಗಂಟೆ ಕೇಳಿದ್ದಾರೆ. ಇಲ್ಲಿಯೆ ನೋಡಿ, ಅವರಿಗೆ ರಿವೀವ್ ಮಾಡಲು 48 ಗಂಟೆಗಳು ಬೇಕು. ಆದರೆ ತೆಗೆದು ಹಾಕಲು ಯಾವುದೇ ಸಮಯ ನೀಡಿಲ್ಲ. ಅದೂ ಕೂಡಾ ಯಾವುದೇ ನೋಟಿಸ್ ನೀಡದೆ ಎಲ್ಲವನ್ನೂ ತೆಗೆದು ಹಾಕಿದ್ದಾರೆ. ಅವರು ರಿವೀವ್‌ ಮಾಡಲು 48 ಗಂಟೆಗಳು ತೆಗೆದುಕೊಂಡ ಹಾಗೆ ನಮಗೆ ಕೂಡಾ ಒಂದು ಅವಕಾಶ ನೀಡಬೇಕಿತ್ತಲ್ಲವೆ. ಎಲ್ಲಾ ನಿಯಮಗಳನ್ನು ಮೀರಿ ಬರೆಯುವ ಎಷ್ಟೊ ವೆಬ್‌ಸೈಟ್‌ಗಳು ಫೇಸ್‌ಬುಕ್‌ನಲ್ಲಿ ಹಲವಾರು ಇವೆ. ಸರ್ಕಾರದ ಪರವಾಗಿ ಬರೆಯುವ ಅವುಗಳನ್ನು ಫೇಸ್‌ಬುಕ್‌ ಏನು ಮಾಡುವುದೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಫೇಸ್‌ಬುಕ್ ಪ್ರತಿನಿಧಿಗಳಿಗೆ ಸಂಪರ್ಕಿಸಿತ್ತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣವೇ ಅದನ್ನು ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...