Homeಮುಖಪುಟಬಿಜೆಪಿಯೊಂದಿಗೆ ಸ್ನೇಹ ವಿವಾದ: ಕಾಂಗ್ರೆಸ್‌ ಪತ್ರಕ್ಕೆ ಫೇಸ್‌ಬುಕ್ ಪ್ರತಿಕ್ರಿಯೆ

ಬಿಜೆಪಿಯೊಂದಿಗೆ ಸ್ನೇಹ ವಿವಾದ: ಕಾಂಗ್ರೆಸ್‌ ಪತ್ರಕ್ಕೆ ಫೇಸ್‌ಬುಕ್ ಪ್ರತಿಕ್ರಿಯೆ

- Advertisement -
- Advertisement -

ಅಮೇರಿಕಾದ ವಾಲ್‌ ಸ್ಟ್ರೀಟ್ ಜರ್ನಲ್ ಫೇಸ್‌ಬುಕ್ ಇಂಡಿಯಾ ಬಿಜೆಪಿ ಪರವಾಗಿದೆ ಎಂದು ಆರೋಪಿಸಿದ ನಂತರ ಭಾರತದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಬರೆದಿದ್ದ ಎರಡು ಪತ್ರಗಳಿಗೆ ಕಂಪನಿಯು ಉತ್ತರ ನೀಡಿದೆ.

ಫೇಸ್‌ಬುಕ್‌ನ ಪಬ್ಲಿಕ್ ಪಾಲಿಸಿ ಡೈರೆಕ್ಟರ್ ನೀಲ್ ಪಾಟ್ಸ್, “ಕಾಂಗ್ರೆಸ್ ಪಕ್ಷದ ಪರವಾಗಿ ನೀವು ಎತ್ತಿದ ವಿಚಾರಗಳನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಆದರೆ ಭಾರತದಲ್ಲಿ ಫೇಸ್‌ಬುಕ್‍ನ ಉನ್ನತ ಸಿಬ್ಬಂದಿ ಎದುರಿಸುತ್ತಿರುವ ಆರೋಪಗಳ ಕುರಿತಂತೆ ಉನ್ನತ ಮಟ್ಟದ ತನಿಖೆಯನ್ನು ಸಮಯಮಿತಿಯೊಳಗೆ ನಡೆಸಬೇಕೆಂಬ ಕಾಂಗ್ರೆಸ್ ಆಗ್ರಹವನ್ನು ಹಾಗೂ ವಾಲ್ ಸ್ಟ್ರೀಟ್ ಜರ್ನಲ್ ವರದಿಯನ್ನಾಧರಿಸಿ ಫೇಸ್ ಬುಕ್ ಇಂಡಿಯಾದ ಪಬ್ಲಿಕ್ ಪಾಲಿಸಿ ಡೈರೆಕ್ಟರ್ ಅಂಖಿ ದಾಸ್ ಅವರ ವಿರುದ್ಧ  ಮಾಡಿದ ಆರೋಪಗಳ ಬಗ್ಗೆ ಫೇಸ್‌ಬುಕ್ ಪತ್ರದಲ್ಲಿ ಉಲ್ಲೇಖ ಮಾಡಿಲ್ಲ.

ಫೇಸ್‌ಬುಕ್ ನಿಷ್ಪಕ್ಷಪಾತಿ ಎಂದು ಮತ್ತೆ ಪುನುಚ್ಚರಿಸಿರುವ ಫೇಸ್‌ಬುಕ್, ಜನರು ತಮ್ಮ ಅಭಿಪ್ರಾಯಗಳನ್ನು ಸ್ವತಂತ್ರವಾಗಿ ವ್ಯಕ್ತಪಡಿಸಲು ತಮ್ಮ ಸಂಸ್ಥೆಯ ವೇದಿಕೆಗಳು ಅವಕಾಶ ಒದಗಿಸುತ್ತವೆ ಎಂದಿದ್ದಾರೆ.

“ತಾರತಮ್ಯ ಕುರಿತಾದ ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಹಾಗೂ ದ್ವೇಷ ಮತ್ತು ನಿಂದನೆಯ ಎಲ್ಲಾ ವಿಧಗಳನ್ನು ಖಂಡಿಸುತ್ತೇವೆ. ಸಾರ್ವಜನಿಕ ವ್ಯಕ್ತಿಗಳ ದ್ವೇಷಪೂರಿತ ಪೋಸ್ಟ್‌ಗಳ ಕುರಿತಂತೆ ನಮ್ಮ ನೀತಿಯಂತೆ ಅಂತಹ ಪೋಸ್ಟ್ ಗಳನ್ನು ನಾವು ತೆಗೆದುಹಾಕುತ್ತೇವೆ ಮತ್ತು ಮುಂದೆಯೂ ನಮ್ಮ ವೇದಿಕೆಗಳಲ್ಲಿ ಸಾರ್ವಜನಿಕ ವ್ಯಕ್ತಿಗಳ ದ್ವೇಷಪೂರಿತ ಹೇಳಿಕೆಗಳನ್ನು ತೆಗೆದು ಹಾಕುತ್ತೇವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ತೆಲಂಗಾಣದ ಬಿಜೆಪಿ ಶಾಸಕನನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...