Homeಮುಖಪುಟಫೇಸ್‌ಬುಕ್ - ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಫೇಸ್‌ಬುಕ್ – ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದ್ದಾರೆ.

- Advertisement -
- Advertisement -

ಫೇಸ್‌ಬುಕ್ – ಬಿಜೆಪಿ ನಂಟು ಕುರಿತು ಅಮೆರಿಕ ಪತ್ರಿಕೆ ವಾಲ್‌ಸ್ಟ್ರೀಟ್‌ ಜರ್ನಲ್ ವರದಿಯಿಂದಾಗಿ ಭುಗಿಲೆದ್ದಿರುವ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಕುರಿತು ಫೇಸ್‌ಬುಕ್ ಅನ್ನು ಪ್ರಶ್ನಿಸುತ್ತೇವೆ ಎಂದು ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿ ತರೂರ್ ಹೇಳಿಕೆ ಹಿನ್ನೆಲೆಯಲ್ಲಿ ತರೂರ್ ವಿರುದ್ಧ ಸ್ಪೀಕರ್ ದೂರು ನೀಡಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮುಂದಾಗಿದ್ದಾರೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದರೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೀವ್ರವಾಗಿ ವಿರೋಧಿಸಿದ್ದಾರೆ. ಹಾಗೆ ಮಾಡಲು ಅವರಿಗೆ ಅಧಿಕಾರವಿಲ್ಲ ಎಂದು ದುಬೆ ವಾದಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರ ಅಭಿಪ್ರಾಯ ಪಡೆಯದೇ ಏಕಪಕ್ಷಿಯವಾಗಿ ಫೇಸ್‌ಬುಕ್ ಅನ್ನು ಪ್ರಶ್ನಿಸುವ ನಿರ್ಣಯ ಘೋಷಿಸಿದ ಶಶಿ ತರೂರ್ ವಿರುದ್ಧ ಲೋಕಸಭಾ ಸ್ವೀಕರ್ ಓಂ ಬಿರ್ಲಾರವರಿಗೆ ಪತ್ರ ಬರೆಯುವುದಾಗಿ ದುಬೆ ತಿಳಿಸಿದ್ದಾರೆ.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ. ಅವರು ಪ್ರತಿನಿತ್ಯ ಸುಳ್ಳು ಸುದ್ದಿಗಳು ಮತ್ತು ದ್ವೇಷಭಾಷಣವನ್ನು ಹರಡುವ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಕೊನೆಗೂ ಅಮೆರಿಕ ಮೂಲದ ಪತ್ರಿಕೆಯೊಂದು ಫೇಸ್‌ಬುಕ್‌ ಬಗೆಗಿನ ಸತ್ಯವನ್ನು ಹೊರತೆಗೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದರು.

ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಮತ್ತು ಸಾಮಾಜಿಕ / ಆನ್‌ಲೈನ್ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಗಟ್ಟುವುದರ ಸಾಕ್ಷಿಯಾಗಿ ಸಮಿತಿಯು ಪರಿಗಣಿಸಲ್ಪಡುತ್ತದೆ ಎಂದು ಶಶಿ ತರೂರ್ ತಿಳಿಸಿದ್ದರು.

ಇದಕ್ಕೆ ಪ್ರತಿಯಾಗಿ “ಸಂಸದೀಯ ಸಮಿತಿಯನ್ನು ತಮ್ಮ ಪಕ್ಷದ ನಾಯಕರ ಅಹಂಕಾರವನ್ನು ಪೂರೈಸಲು ರಾಜಕೀಯ ವೇದಿಕೆಯನ್ನಾಗಿ ಮಾಡಬಾರದು. ಸಮಿತಿ ಸದಸ್ಯರು ಮತ್ತು ಸ್ಪೀಕರ್‌ ರವರ ಅನುಮತಿ ಇಲ್ಲದೇ ಏನನ್ನು ಮಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರ ಕಾರ್ಯಸೂಚಿಯನ್ನು ಜಾರಿಗೊಳಿಸುವುದನ್ನು ನಿಲ್ಲಿಸಿ” ಎಂದು ಸಮಿತಿ ಸದಸ್ಯ ದುಬೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಮೊಹುವ ಮೊಯಿತ್ರಾ “ನಾನು ಕೂಡ ಸಮಿತಿಯ ಸದಸ್ಯೆ. ಅಜೆಂಡಾವನ್ನು ವರ್ಷದ ಆರಂಭದಲ್ಲಿಯೇ ಚರ್ಚಿಸಿ ಸ್ಪೀಕರ್‌ರವರ ಒಪ್ಪಿಗೆ ಪಡೆಯಲಾಗಿದೆ. ಅದನ್ನು ಯಾವಾಗ ಜಾರಿಗೊಳಿಸಬೇಕು ಎಂಬ ಅಧಿಕಾರ ಸಮಿತಿ ಅಧ್ಯಕ್ಷರಿಗಿರುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಫೇಸ್‌ಬುಕ್ ಹಿತಾಸಕ್ತಿ ಕಾಪಾಡಲು ಹೇಗೆ ಬಿಜೆಪಿ ಮೇಲಕ್ಕೆ, ಕೆಳಕ್ಕೆ ಜಿಗಿಯುತ್ತದೆ ಅಲ್ಲವೇ ಎಂದು ಮೊಯಿತ್ರಾ ಟೀಕಿಸಿದ್ದಾರೆ.

ಮೊಹುವ ಮೊಯಿತ್ರಾರವರು ಹೇಳಿರುವುದು ಸರಿ ಇದೆ. ಅಧ್ಯಕ್ಷರ ನಿರ್ಧಾರವನ್ನು ವಿರೋಧಿಸುವ ಮೂಲಕ ಸಮಿತಿಯ ಕಾರ್ಯನಿರ್ವಹಣೆಗೆ ದುಬೆ ಅಪಖ್ಯಾತಿ ತಂದಿದ್ದಾರೆ. ಅವರು ಸಾರ್ವಜನಿಕರ ಒಳಿತಿಗಾಗಿ ಸಮಿತಿ ಕೆಲಸ ಮಾಡಬಾರದು ಎಂದು ಹೇಳುತ್ತಿದ್ದಾರೆಯೆ? ಎಂದು ತರೂರ್ ವ್ಯಂಗ್ಯವಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸಹಿ ಮಾಡಿದ ಆದೇಶದ ಮೂಲಕ ಸಾಕ್ಷಿಯನ್ನು ಕರೆಸಿಕೊಳ್ಳಬಹುದು ಮತ್ತು ಸಮಿತಿಯ ಬಳಕೆಗೆ ಅಗತ್ಯವಾದ ದಾಖಲೆಗಳನ್ನು ತಯಾರಿಸಬೇಕು ಎಂದು ದುಬೆ ಪ್ರತಿ ಉತ್ತರ ನೀಡಿದ್ದಾರೆ.

ಇದಕ್ಕೆ ಶಶಿ ತರೂರ್ ನಿಮ್ಮ ಮಾಹಿತಿಗಾಗಿ ಧನ್ಯವಾದಗಳು. ಸಮಿತಿಯ ಅಧ್ಯಕ್ಷರ ಕಾರ್ಯನಿರ್ವಹಣೆಗೆ ಯಾರು ಚ್ಯುತಿ ತಂದರು ಎಂಬುದನ್ನು ಕಾಲ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...