Homeಮುಖಪುಟಫೇಸ್‌ಬುಕ್ - ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಫೇಸ್‌ಬುಕ್ – ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದ್ದಾರೆ.

- Advertisement -
- Advertisement -

ಫೇಸ್‌ಬುಕ್ – ಬಿಜೆಪಿ ನಂಟು ಕುರಿತು ಅಮೆರಿಕ ಪತ್ರಿಕೆ ವಾಲ್‌ಸ್ಟ್ರೀಟ್‌ ಜರ್ನಲ್ ವರದಿಯಿಂದಾಗಿ ಭುಗಿಲೆದ್ದಿರುವ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಕುರಿತು ಫೇಸ್‌ಬುಕ್ ಅನ್ನು ಪ್ರಶ್ನಿಸುತ್ತೇವೆ ಎಂದು ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿ ತರೂರ್ ಹೇಳಿಕೆ ಹಿನ್ನೆಲೆಯಲ್ಲಿ ತರೂರ್ ವಿರುದ್ಧ ಸ್ಪೀಕರ್ ದೂರು ನೀಡಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮುಂದಾಗಿದ್ದಾರೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದರೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೀವ್ರವಾಗಿ ವಿರೋಧಿಸಿದ್ದಾರೆ. ಹಾಗೆ ಮಾಡಲು ಅವರಿಗೆ ಅಧಿಕಾರವಿಲ್ಲ ಎಂದು ದುಬೆ ವಾದಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರ ಅಭಿಪ್ರಾಯ ಪಡೆಯದೇ ಏಕಪಕ್ಷಿಯವಾಗಿ ಫೇಸ್‌ಬುಕ್ ಅನ್ನು ಪ್ರಶ್ನಿಸುವ ನಿರ್ಣಯ ಘೋಷಿಸಿದ ಶಶಿ ತರೂರ್ ವಿರುದ್ಧ ಲೋಕಸಭಾ ಸ್ವೀಕರ್ ಓಂ ಬಿರ್ಲಾರವರಿಗೆ ಪತ್ರ ಬರೆಯುವುದಾಗಿ ದುಬೆ ತಿಳಿಸಿದ್ದಾರೆ.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ. ಅವರು ಪ್ರತಿನಿತ್ಯ ಸುಳ್ಳು ಸುದ್ದಿಗಳು ಮತ್ತು ದ್ವೇಷಭಾಷಣವನ್ನು ಹರಡುವ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಕೊನೆಗೂ ಅಮೆರಿಕ ಮೂಲದ ಪತ್ರಿಕೆಯೊಂದು ಫೇಸ್‌ಬುಕ್‌ ಬಗೆಗಿನ ಸತ್ಯವನ್ನು ಹೊರತೆಗೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದರು.

ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಮತ್ತು ಸಾಮಾಜಿಕ / ಆನ್‌ಲೈನ್ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಗಟ್ಟುವುದರ ಸಾಕ್ಷಿಯಾಗಿ ಸಮಿತಿಯು ಪರಿಗಣಿಸಲ್ಪಡುತ್ತದೆ ಎಂದು ಶಶಿ ತರೂರ್ ತಿಳಿಸಿದ್ದರು.

ಇದಕ್ಕೆ ಪ್ರತಿಯಾಗಿ “ಸಂಸದೀಯ ಸಮಿತಿಯನ್ನು ತಮ್ಮ ಪಕ್ಷದ ನಾಯಕರ ಅಹಂಕಾರವನ್ನು ಪೂರೈಸಲು ರಾಜಕೀಯ ವೇದಿಕೆಯನ್ನಾಗಿ ಮಾಡಬಾರದು. ಸಮಿತಿ ಸದಸ್ಯರು ಮತ್ತು ಸ್ಪೀಕರ್‌ ರವರ ಅನುಮತಿ ಇಲ್ಲದೇ ಏನನ್ನು ಮಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರ ಕಾರ್ಯಸೂಚಿಯನ್ನು ಜಾರಿಗೊಳಿಸುವುದನ್ನು ನಿಲ್ಲಿಸಿ” ಎಂದು ಸಮಿತಿ ಸದಸ್ಯ ದುಬೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಮೊಹುವ ಮೊಯಿತ್ರಾ “ನಾನು ಕೂಡ ಸಮಿತಿಯ ಸದಸ್ಯೆ. ಅಜೆಂಡಾವನ್ನು ವರ್ಷದ ಆರಂಭದಲ್ಲಿಯೇ ಚರ್ಚಿಸಿ ಸ್ಪೀಕರ್‌ರವರ ಒಪ್ಪಿಗೆ ಪಡೆಯಲಾಗಿದೆ. ಅದನ್ನು ಯಾವಾಗ ಜಾರಿಗೊಳಿಸಬೇಕು ಎಂಬ ಅಧಿಕಾರ ಸಮಿತಿ ಅಧ್ಯಕ್ಷರಿಗಿರುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಫೇಸ್‌ಬುಕ್ ಹಿತಾಸಕ್ತಿ ಕಾಪಾಡಲು ಹೇಗೆ ಬಿಜೆಪಿ ಮೇಲಕ್ಕೆ, ಕೆಳಕ್ಕೆ ಜಿಗಿಯುತ್ತದೆ ಅಲ್ಲವೇ ಎಂದು ಮೊಯಿತ್ರಾ ಟೀಕಿಸಿದ್ದಾರೆ.

ಮೊಹುವ ಮೊಯಿತ್ರಾರವರು ಹೇಳಿರುವುದು ಸರಿ ಇದೆ. ಅಧ್ಯಕ್ಷರ ನಿರ್ಧಾರವನ್ನು ವಿರೋಧಿಸುವ ಮೂಲಕ ಸಮಿತಿಯ ಕಾರ್ಯನಿರ್ವಹಣೆಗೆ ದುಬೆ ಅಪಖ್ಯಾತಿ ತಂದಿದ್ದಾರೆ. ಅವರು ಸಾರ್ವಜನಿಕರ ಒಳಿತಿಗಾಗಿ ಸಮಿತಿ ಕೆಲಸ ಮಾಡಬಾರದು ಎಂದು ಹೇಳುತ್ತಿದ್ದಾರೆಯೆ? ಎಂದು ತರೂರ್ ವ್ಯಂಗ್ಯವಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸಹಿ ಮಾಡಿದ ಆದೇಶದ ಮೂಲಕ ಸಾಕ್ಷಿಯನ್ನು ಕರೆಸಿಕೊಳ್ಳಬಹುದು ಮತ್ತು ಸಮಿತಿಯ ಬಳಕೆಗೆ ಅಗತ್ಯವಾದ ದಾಖಲೆಗಳನ್ನು ತಯಾರಿಸಬೇಕು ಎಂದು ದುಬೆ ಪ್ರತಿ ಉತ್ತರ ನೀಡಿದ್ದಾರೆ.

ಇದಕ್ಕೆ ಶಶಿ ತರೂರ್ ನಿಮ್ಮ ಮಾಹಿತಿಗಾಗಿ ಧನ್ಯವಾದಗಳು. ಸಮಿತಿಯ ಅಧ್ಯಕ್ಷರ ಕಾರ್ಯನಿರ್ವಹಣೆಗೆ ಯಾರು ಚ್ಯುತಿ ತಂದರು ಎಂಬುದನ್ನು ಕಾಲ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...