Homeಮುಖಪುಟಫೇಸ್‌ಬುಕ್ - ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಫೇಸ್‌ಬುಕ್ – ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದ್ದಾರೆ.

- Advertisement -
- Advertisement -

ಫೇಸ್‌ಬುಕ್ – ಬಿಜೆಪಿ ನಂಟು ಕುರಿತು ಅಮೆರಿಕ ಪತ್ರಿಕೆ ವಾಲ್‌ಸ್ಟ್ರೀಟ್‌ ಜರ್ನಲ್ ವರದಿಯಿಂದಾಗಿ ಭುಗಿಲೆದ್ದಿರುವ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಕುರಿತು ಫೇಸ್‌ಬುಕ್ ಅನ್ನು ಪ್ರಶ್ನಿಸುತ್ತೇವೆ ಎಂದು ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿ ತರೂರ್ ಹೇಳಿಕೆ ಹಿನ್ನೆಲೆಯಲ್ಲಿ ತರೂರ್ ವಿರುದ್ಧ ಸ್ಪೀಕರ್ ದೂರು ನೀಡಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮುಂದಾಗಿದ್ದಾರೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದರೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೀವ್ರವಾಗಿ ವಿರೋಧಿಸಿದ್ದಾರೆ. ಹಾಗೆ ಮಾಡಲು ಅವರಿಗೆ ಅಧಿಕಾರವಿಲ್ಲ ಎಂದು ದುಬೆ ವಾದಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರ ಅಭಿಪ್ರಾಯ ಪಡೆಯದೇ ಏಕಪಕ್ಷಿಯವಾಗಿ ಫೇಸ್‌ಬುಕ್ ಅನ್ನು ಪ್ರಶ್ನಿಸುವ ನಿರ್ಣಯ ಘೋಷಿಸಿದ ಶಶಿ ತರೂರ್ ವಿರುದ್ಧ ಲೋಕಸಭಾ ಸ್ವೀಕರ್ ಓಂ ಬಿರ್ಲಾರವರಿಗೆ ಪತ್ರ ಬರೆಯುವುದಾಗಿ ದುಬೆ ತಿಳಿಸಿದ್ದಾರೆ.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ. ಅವರು ಪ್ರತಿನಿತ್ಯ ಸುಳ್ಳು ಸುದ್ದಿಗಳು ಮತ್ತು ದ್ವೇಷಭಾಷಣವನ್ನು ಹರಡುವ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಕೊನೆಗೂ ಅಮೆರಿಕ ಮೂಲದ ಪತ್ರಿಕೆಯೊಂದು ಫೇಸ್‌ಬುಕ್‌ ಬಗೆಗಿನ ಸತ್ಯವನ್ನು ಹೊರತೆಗೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದರು.

ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಮತ್ತು ಸಾಮಾಜಿಕ / ಆನ್‌ಲೈನ್ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಗಟ್ಟುವುದರ ಸಾಕ್ಷಿಯಾಗಿ ಸಮಿತಿಯು ಪರಿಗಣಿಸಲ್ಪಡುತ್ತದೆ ಎಂದು ಶಶಿ ತರೂರ್ ತಿಳಿಸಿದ್ದರು.

ಇದಕ್ಕೆ ಪ್ರತಿಯಾಗಿ “ಸಂಸದೀಯ ಸಮಿತಿಯನ್ನು ತಮ್ಮ ಪಕ್ಷದ ನಾಯಕರ ಅಹಂಕಾರವನ್ನು ಪೂರೈಸಲು ರಾಜಕೀಯ ವೇದಿಕೆಯನ್ನಾಗಿ ಮಾಡಬಾರದು. ಸಮಿತಿ ಸದಸ್ಯರು ಮತ್ತು ಸ್ಪೀಕರ್‌ ರವರ ಅನುಮತಿ ಇಲ್ಲದೇ ಏನನ್ನು ಮಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರ ಕಾರ್ಯಸೂಚಿಯನ್ನು ಜಾರಿಗೊಳಿಸುವುದನ್ನು ನಿಲ್ಲಿಸಿ” ಎಂದು ಸಮಿತಿ ಸದಸ್ಯ ದುಬೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಮೊಹುವ ಮೊಯಿತ್ರಾ “ನಾನು ಕೂಡ ಸಮಿತಿಯ ಸದಸ್ಯೆ. ಅಜೆಂಡಾವನ್ನು ವರ್ಷದ ಆರಂಭದಲ್ಲಿಯೇ ಚರ್ಚಿಸಿ ಸ್ಪೀಕರ್‌ರವರ ಒಪ್ಪಿಗೆ ಪಡೆಯಲಾಗಿದೆ. ಅದನ್ನು ಯಾವಾಗ ಜಾರಿಗೊಳಿಸಬೇಕು ಎಂಬ ಅಧಿಕಾರ ಸಮಿತಿ ಅಧ್ಯಕ್ಷರಿಗಿರುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಫೇಸ್‌ಬುಕ್ ಹಿತಾಸಕ್ತಿ ಕಾಪಾಡಲು ಹೇಗೆ ಬಿಜೆಪಿ ಮೇಲಕ್ಕೆ, ಕೆಳಕ್ಕೆ ಜಿಗಿಯುತ್ತದೆ ಅಲ್ಲವೇ ಎಂದು ಮೊಯಿತ್ರಾ ಟೀಕಿಸಿದ್ದಾರೆ.

ಮೊಹುವ ಮೊಯಿತ್ರಾರವರು ಹೇಳಿರುವುದು ಸರಿ ಇದೆ. ಅಧ್ಯಕ್ಷರ ನಿರ್ಧಾರವನ್ನು ವಿರೋಧಿಸುವ ಮೂಲಕ ಸಮಿತಿಯ ಕಾರ್ಯನಿರ್ವಹಣೆಗೆ ದುಬೆ ಅಪಖ್ಯಾತಿ ತಂದಿದ್ದಾರೆ. ಅವರು ಸಾರ್ವಜನಿಕರ ಒಳಿತಿಗಾಗಿ ಸಮಿತಿ ಕೆಲಸ ಮಾಡಬಾರದು ಎಂದು ಹೇಳುತ್ತಿದ್ದಾರೆಯೆ? ಎಂದು ತರೂರ್ ವ್ಯಂಗ್ಯವಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸಹಿ ಮಾಡಿದ ಆದೇಶದ ಮೂಲಕ ಸಾಕ್ಷಿಯನ್ನು ಕರೆಸಿಕೊಳ್ಳಬಹುದು ಮತ್ತು ಸಮಿತಿಯ ಬಳಕೆಗೆ ಅಗತ್ಯವಾದ ದಾಖಲೆಗಳನ್ನು ತಯಾರಿಸಬೇಕು ಎಂದು ದುಬೆ ಪ್ರತಿ ಉತ್ತರ ನೀಡಿದ್ದಾರೆ.

ಇದಕ್ಕೆ ಶಶಿ ತರೂರ್ ನಿಮ್ಮ ಮಾಹಿತಿಗಾಗಿ ಧನ್ಯವಾದಗಳು. ಸಮಿತಿಯ ಅಧ್ಯಕ್ಷರ ಕಾರ್ಯನಿರ್ವಹಣೆಗೆ ಯಾರು ಚ್ಯುತಿ ತಂದರು ಎಂಬುದನ್ನು ಕಾಲ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...