Homeಮುಖಪುಟಫೇಸ್‌ಬುಕ್ - ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಫೇಸ್‌ಬುಕ್ – ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದ್ದಾರೆ.

- Advertisement -
- Advertisement -

ಫೇಸ್‌ಬುಕ್ – ಬಿಜೆಪಿ ನಂಟು ಕುರಿತು ಅಮೆರಿಕ ಪತ್ರಿಕೆ ವಾಲ್‌ಸ್ಟ್ರೀಟ್‌ ಜರ್ನಲ್ ವರದಿಯಿಂದಾಗಿ ಭುಗಿಲೆದ್ದಿರುವ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಕುರಿತು ಫೇಸ್‌ಬುಕ್ ಅನ್ನು ಪ್ರಶ್ನಿಸುತ್ತೇವೆ ಎಂದು ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿ ತರೂರ್ ಹೇಳಿಕೆ ಹಿನ್ನೆಲೆಯಲ್ಲಿ ತರೂರ್ ವಿರುದ್ಧ ಸ್ಪೀಕರ್ ದೂರು ನೀಡಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮುಂದಾಗಿದ್ದಾರೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದರೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೀವ್ರವಾಗಿ ವಿರೋಧಿಸಿದ್ದಾರೆ. ಹಾಗೆ ಮಾಡಲು ಅವರಿಗೆ ಅಧಿಕಾರವಿಲ್ಲ ಎಂದು ದುಬೆ ವಾದಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರ ಅಭಿಪ್ರಾಯ ಪಡೆಯದೇ ಏಕಪಕ್ಷಿಯವಾಗಿ ಫೇಸ್‌ಬುಕ್ ಅನ್ನು ಪ್ರಶ್ನಿಸುವ ನಿರ್ಣಯ ಘೋಷಿಸಿದ ಶಶಿ ತರೂರ್ ವಿರುದ್ಧ ಲೋಕಸಭಾ ಸ್ವೀಕರ್ ಓಂ ಬಿರ್ಲಾರವರಿಗೆ ಪತ್ರ ಬರೆಯುವುದಾಗಿ ದುಬೆ ತಿಳಿಸಿದ್ದಾರೆ.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ. ಅವರು ಪ್ರತಿನಿತ್ಯ ಸುಳ್ಳು ಸುದ್ದಿಗಳು ಮತ್ತು ದ್ವೇಷಭಾಷಣವನ್ನು ಹರಡುವ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಕೊನೆಗೂ ಅಮೆರಿಕ ಮೂಲದ ಪತ್ರಿಕೆಯೊಂದು ಫೇಸ್‌ಬುಕ್‌ ಬಗೆಗಿನ ಸತ್ಯವನ್ನು ಹೊರತೆಗೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದರು.

ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಮತ್ತು ಸಾಮಾಜಿಕ / ಆನ್‌ಲೈನ್ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಗಟ್ಟುವುದರ ಸಾಕ್ಷಿಯಾಗಿ ಸಮಿತಿಯು ಪರಿಗಣಿಸಲ್ಪಡುತ್ತದೆ ಎಂದು ಶಶಿ ತರೂರ್ ತಿಳಿಸಿದ್ದರು.

ಇದಕ್ಕೆ ಪ್ರತಿಯಾಗಿ “ಸಂಸದೀಯ ಸಮಿತಿಯನ್ನು ತಮ್ಮ ಪಕ್ಷದ ನಾಯಕರ ಅಹಂಕಾರವನ್ನು ಪೂರೈಸಲು ರಾಜಕೀಯ ವೇದಿಕೆಯನ್ನಾಗಿ ಮಾಡಬಾರದು. ಸಮಿತಿ ಸದಸ್ಯರು ಮತ್ತು ಸ್ಪೀಕರ್‌ ರವರ ಅನುಮತಿ ಇಲ್ಲದೇ ಏನನ್ನು ಮಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರ ಕಾರ್ಯಸೂಚಿಯನ್ನು ಜಾರಿಗೊಳಿಸುವುದನ್ನು ನಿಲ್ಲಿಸಿ” ಎಂದು ಸಮಿತಿ ಸದಸ್ಯ ದುಬೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಮೊಹುವ ಮೊಯಿತ್ರಾ “ನಾನು ಕೂಡ ಸಮಿತಿಯ ಸದಸ್ಯೆ. ಅಜೆಂಡಾವನ್ನು ವರ್ಷದ ಆರಂಭದಲ್ಲಿಯೇ ಚರ್ಚಿಸಿ ಸ್ಪೀಕರ್‌ರವರ ಒಪ್ಪಿಗೆ ಪಡೆಯಲಾಗಿದೆ. ಅದನ್ನು ಯಾವಾಗ ಜಾರಿಗೊಳಿಸಬೇಕು ಎಂಬ ಅಧಿಕಾರ ಸಮಿತಿ ಅಧ್ಯಕ್ಷರಿಗಿರುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಫೇಸ್‌ಬುಕ್ ಹಿತಾಸಕ್ತಿ ಕಾಪಾಡಲು ಹೇಗೆ ಬಿಜೆಪಿ ಮೇಲಕ್ಕೆ, ಕೆಳಕ್ಕೆ ಜಿಗಿಯುತ್ತದೆ ಅಲ್ಲವೇ ಎಂದು ಮೊಯಿತ್ರಾ ಟೀಕಿಸಿದ್ದಾರೆ.

ಮೊಹುವ ಮೊಯಿತ್ರಾರವರು ಹೇಳಿರುವುದು ಸರಿ ಇದೆ. ಅಧ್ಯಕ್ಷರ ನಿರ್ಧಾರವನ್ನು ವಿರೋಧಿಸುವ ಮೂಲಕ ಸಮಿತಿಯ ಕಾರ್ಯನಿರ್ವಹಣೆಗೆ ದುಬೆ ಅಪಖ್ಯಾತಿ ತಂದಿದ್ದಾರೆ. ಅವರು ಸಾರ್ವಜನಿಕರ ಒಳಿತಿಗಾಗಿ ಸಮಿತಿ ಕೆಲಸ ಮಾಡಬಾರದು ಎಂದು ಹೇಳುತ್ತಿದ್ದಾರೆಯೆ? ಎಂದು ತರೂರ್ ವ್ಯಂಗ್ಯವಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸಹಿ ಮಾಡಿದ ಆದೇಶದ ಮೂಲಕ ಸಾಕ್ಷಿಯನ್ನು ಕರೆಸಿಕೊಳ್ಳಬಹುದು ಮತ್ತು ಸಮಿತಿಯ ಬಳಕೆಗೆ ಅಗತ್ಯವಾದ ದಾಖಲೆಗಳನ್ನು ತಯಾರಿಸಬೇಕು ಎಂದು ದುಬೆ ಪ್ರತಿ ಉತ್ತರ ನೀಡಿದ್ದಾರೆ.

ಇದಕ್ಕೆ ಶಶಿ ತರೂರ್ ನಿಮ್ಮ ಮಾಹಿತಿಗಾಗಿ ಧನ್ಯವಾದಗಳು. ಸಮಿತಿಯ ಅಧ್ಯಕ್ಷರ ಕಾರ್ಯನಿರ್ವಹಣೆಗೆ ಯಾರು ಚ್ಯುತಿ ತಂದರು ಎಂಬುದನ್ನು ಕಾಲ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...