Homeಮುಖಪುಟಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ...

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

"ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ" ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

- Advertisement -
- Advertisement -

ಬಿಜೆಪಿ ನಾಯಕರ ದ್ವೇಷಭಾಷಣದ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಪಕ್ಷಪಾತ ಮಾಡಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿರುವ ಫೇಸ್‌ಬುಕ್ ಕಾರ್ಯನಿರ್ವಾಹಕ ಅಧಿಕಾರಿ ಅಂಖಿದಾಸ್ ಮೇಲೆ ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ಮತ್ತೊಂದು ಗಂಭೀರ ಆರೋಪದ ವರದಿ ಮಾಡಿದೆ.

ಅದೆಂದರೆ “ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಇಂದು ಕಂಪನಿಯ ತಟಸ್ಠ ಮನೋಭಾವಕ್ಕೆ ವಿರುದ್ಧವಾದ ಕ್ರಿಯೆ ಎಂದು ಫೇಸ್‌ಬುಕ್‌ನ ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

“ಈ ಪೋಸ್ಟ್‌ಗಳನ್ನು 2012 ರಿಂದ 2014ರ ಅವಧಿಯಲ್ಲಿ ಮಾಡಲಾಗಿದ್ದು, ಭಾರತದಲ್ಲಿನ ಉದ್ಯೋಗಿಗಳಿಗಾಗಿ ವಿನ್ಯಾಸಗೊಳಿಸಲಾದ ಫೇಸ್‌ಬುಕ್ ಗ್ರೂಪ್‌ಗೆ ಇವುಗಳನ್ನು ಪೋಸ್ಟ್ ಮಾಡಲಾಗಿದೆ. ಈ ಗುಂಪಿನಲ್ಲಿ ನೂರಾರು ಉದ್ಯೋಗಿಗಳು ಇದ್ದರು ಎನ್ನಲಾಗಿದೆ.

ಹಿಂದಿನ ವರದಿಯಲ್ಲಿ, ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಅಂಖಿ ದಾಸ್‌ ಹೇಳಿದ್ದಾಗಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಈ ಕುರಿತು ಭಾರತದಲ್ಲಿ ದೊಡ್ಡ ವಿವಾದ ಏರ್ಪಟ್ಟಿತ್ತು. ಸೆಪ್ಟೆಂಬರ್ 2 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಅಧ್ಯಕ್ಷರಾಗಿರುವ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಲು ಫೇಸ್‌ಬುಕ್ ಇಂಡಿಯಾಗೆ ಕೇಳಲಾಗಿದೆ.

ಕಳೆದ ವಾರ, ಅಂಖಿದಾಸ್ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ವಿರೋದಿ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕಂಪನಿಯ ಮುಸ್ಲಿಂ ಉದ್ಯೋಗಿಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಬುಜ್‌ಫೀಡ್‌ ವರದಿ ಮಾಡಿದೆ. ಭಾರತದಲ್ಲಿನ ಮುಸ್ಲಿಮರನ್ನು “ಅವನತಿ ಹೊಂದಿದ ಸಮುದಾಯ”ದವರು ಎಂದ ದಾಸ್ ಅವರಿಗೆ “ಧರ್ಮದ ಶುದ್ಧತೆ ಮತ್ತು ಶರಿಯಾ ವಿಷಯದ ಅನುಷ್ಠಾನವನ್ನು ಹೊರತುಪಡಿಸಿ ಏನೂ ಇಲ್ಲ” ಎಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಈ ಕುರಿತು ಕಂಪನಿಯ 11 ಸಹದ್ಯೋಗಿಗಳು ಫೇಸ್‌ಬುಕ್ ಜಾಗತಿಕ ನಾಯಕತ್ವಕ್ಕೆ ಪತ್ರ ಬರೆದಿದ್ದರು. ಆಗ ನಾಯಕತ್ವವು ಮುಸ್ಲಿಂ ವಿರೋಧಿ ಭಾವನೆ ವ್ಯಕ್ತವಾಗಿರುವುದನ್ನು ಒಪ್ಪಿಕೊಂಡು ಪಾರದರ್ಶಕವಾಗಿ ನೀತಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನಿಡಿತ್ತು ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಅಂಖಿದಾಸ್‌ರವರ ಪೋಸ್ಟ್‌ಗಳನ್ನು ಆಗಿನ ಸಂದರ್ಭದಿಂದ ತೆಗೆಯಲಾಗಿದೆ. ಅವು ಪಕ್ಷಪಾತದಿಂದ ಕೂಡಿವೆ ಎನಿಸುವುದಿಲ್ಲ. ಅವರ ಹೇಳಿಕೆಗಳು ಇಡೀ ಫೇಸ್‌ಬುಕ್‌ ಅನ್ನು ಪ್ರತಿನಿಧಿಸುವುದಿಲ್ಲ. ನಾವು ರಾಜಕೀಯ ಪಕ್ಷಗಳು ನಮ್ಮ ಪ್ಲಾಟ್‌ಫಾರಂ ಅನ್ನು ಬಳಸುವಂತೆ ಉತ್ತೇಜಿಸುತ್ತೇವೆ ಅಷ್ಟೇ ಎಂದು ಫೇಸ್‌ಬುಕ್ ವಕ್ತಾರ ಆಂಡಿ ಸ್ಟೋನ್ ತಿಳಿಸಿದ್ದಾರೆ.

ತನ್ನ ಸಾಮಾಜಿಕ ಮಾಧ್ಯಮ ವೇದಿಕೆಯು ದ್ವೇಷದ ಮಾತು ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ವಿಷಯವನ್ನು ನಿಷೇಧಿಸುತ್ತದೆ. ರಾಜಕೀಯ ಸಂಬಂಧಗಳನ್ನು ಪರಿಗಣಿಸದೆ ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತದೆ ಎಂದು ನಂತರ ಫೇಸ್‌ಬುಕ್ ಹೇಳಿತ್ತು.


ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...