Homeಮುಖಪುಟಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ...

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

"ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ" ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

- Advertisement -
- Advertisement -

ಬಿಜೆಪಿ ನಾಯಕರ ದ್ವೇಷಭಾಷಣದ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಪಕ್ಷಪಾತ ಮಾಡಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿರುವ ಫೇಸ್‌ಬುಕ್ ಕಾರ್ಯನಿರ್ವಾಹಕ ಅಧಿಕಾರಿ ಅಂಖಿದಾಸ್ ಮೇಲೆ ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ಮತ್ತೊಂದು ಗಂಭೀರ ಆರೋಪದ ವರದಿ ಮಾಡಿದೆ.

ಅದೆಂದರೆ “ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಇಂದು ಕಂಪನಿಯ ತಟಸ್ಠ ಮನೋಭಾವಕ್ಕೆ ವಿರುದ್ಧವಾದ ಕ್ರಿಯೆ ಎಂದು ಫೇಸ್‌ಬುಕ್‌ನ ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

“ಈ ಪೋಸ್ಟ್‌ಗಳನ್ನು 2012 ರಿಂದ 2014ರ ಅವಧಿಯಲ್ಲಿ ಮಾಡಲಾಗಿದ್ದು, ಭಾರತದಲ್ಲಿನ ಉದ್ಯೋಗಿಗಳಿಗಾಗಿ ವಿನ್ಯಾಸಗೊಳಿಸಲಾದ ಫೇಸ್‌ಬುಕ್ ಗ್ರೂಪ್‌ಗೆ ಇವುಗಳನ್ನು ಪೋಸ್ಟ್ ಮಾಡಲಾಗಿದೆ. ಈ ಗುಂಪಿನಲ್ಲಿ ನೂರಾರು ಉದ್ಯೋಗಿಗಳು ಇದ್ದರು ಎನ್ನಲಾಗಿದೆ.

ಹಿಂದಿನ ವರದಿಯಲ್ಲಿ, ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಅಂಖಿ ದಾಸ್‌ ಹೇಳಿದ್ದಾಗಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಈ ಕುರಿತು ಭಾರತದಲ್ಲಿ ದೊಡ್ಡ ವಿವಾದ ಏರ್ಪಟ್ಟಿತ್ತು. ಸೆಪ್ಟೆಂಬರ್ 2 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಅಧ್ಯಕ್ಷರಾಗಿರುವ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಲು ಫೇಸ್‌ಬುಕ್ ಇಂಡಿಯಾಗೆ ಕೇಳಲಾಗಿದೆ.

ಕಳೆದ ವಾರ, ಅಂಖಿದಾಸ್ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ವಿರೋದಿ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕಂಪನಿಯ ಮುಸ್ಲಿಂ ಉದ್ಯೋಗಿಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಬುಜ್‌ಫೀಡ್‌ ವರದಿ ಮಾಡಿದೆ. ಭಾರತದಲ್ಲಿನ ಮುಸ್ಲಿಮರನ್ನು “ಅವನತಿ ಹೊಂದಿದ ಸಮುದಾಯ”ದವರು ಎಂದ ದಾಸ್ ಅವರಿಗೆ “ಧರ್ಮದ ಶುದ್ಧತೆ ಮತ್ತು ಶರಿಯಾ ವಿಷಯದ ಅನುಷ್ಠಾನವನ್ನು ಹೊರತುಪಡಿಸಿ ಏನೂ ಇಲ್ಲ” ಎಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಈ ಕುರಿತು ಕಂಪನಿಯ 11 ಸಹದ್ಯೋಗಿಗಳು ಫೇಸ್‌ಬುಕ್ ಜಾಗತಿಕ ನಾಯಕತ್ವಕ್ಕೆ ಪತ್ರ ಬರೆದಿದ್ದರು. ಆಗ ನಾಯಕತ್ವವು ಮುಸ್ಲಿಂ ವಿರೋಧಿ ಭಾವನೆ ವ್ಯಕ್ತವಾಗಿರುವುದನ್ನು ಒಪ್ಪಿಕೊಂಡು ಪಾರದರ್ಶಕವಾಗಿ ನೀತಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನಿಡಿತ್ತು ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಅಂಖಿದಾಸ್‌ರವರ ಪೋಸ್ಟ್‌ಗಳನ್ನು ಆಗಿನ ಸಂದರ್ಭದಿಂದ ತೆಗೆಯಲಾಗಿದೆ. ಅವು ಪಕ್ಷಪಾತದಿಂದ ಕೂಡಿವೆ ಎನಿಸುವುದಿಲ್ಲ. ಅವರ ಹೇಳಿಕೆಗಳು ಇಡೀ ಫೇಸ್‌ಬುಕ್‌ ಅನ್ನು ಪ್ರತಿನಿಧಿಸುವುದಿಲ್ಲ. ನಾವು ರಾಜಕೀಯ ಪಕ್ಷಗಳು ನಮ್ಮ ಪ್ಲಾಟ್‌ಫಾರಂ ಅನ್ನು ಬಳಸುವಂತೆ ಉತ್ತೇಜಿಸುತ್ತೇವೆ ಅಷ್ಟೇ ಎಂದು ಫೇಸ್‌ಬುಕ್ ವಕ್ತಾರ ಆಂಡಿ ಸ್ಟೋನ್ ತಿಳಿಸಿದ್ದಾರೆ.

ತನ್ನ ಸಾಮಾಜಿಕ ಮಾಧ್ಯಮ ವೇದಿಕೆಯು ದ್ವೇಷದ ಮಾತು ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ವಿಷಯವನ್ನು ನಿಷೇಧಿಸುತ್ತದೆ. ರಾಜಕೀಯ ಸಂಬಂಧಗಳನ್ನು ಪರಿಗಣಿಸದೆ ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತದೆ ಎಂದು ನಂತರ ಫೇಸ್‌ಬುಕ್ ಹೇಳಿತ್ತು.


ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...