Homeಮುಖಪುಟಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ...

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

"ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ" ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

- Advertisement -
- Advertisement -

ಬಿಜೆಪಿ ನಾಯಕರ ದ್ವೇಷಭಾಷಣದ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಪಕ್ಷಪಾತ ಮಾಡಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿರುವ ಫೇಸ್‌ಬುಕ್ ಕಾರ್ಯನಿರ್ವಾಹಕ ಅಧಿಕಾರಿ ಅಂಖಿದಾಸ್ ಮೇಲೆ ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ಮತ್ತೊಂದು ಗಂಭೀರ ಆರೋಪದ ವರದಿ ಮಾಡಿದೆ.

ಅದೆಂದರೆ “ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಇಂದು ಕಂಪನಿಯ ತಟಸ್ಠ ಮನೋಭಾವಕ್ಕೆ ವಿರುದ್ಧವಾದ ಕ್ರಿಯೆ ಎಂದು ಫೇಸ್‌ಬುಕ್‌ನ ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

“ಈ ಪೋಸ್ಟ್‌ಗಳನ್ನು 2012 ರಿಂದ 2014ರ ಅವಧಿಯಲ್ಲಿ ಮಾಡಲಾಗಿದ್ದು, ಭಾರತದಲ್ಲಿನ ಉದ್ಯೋಗಿಗಳಿಗಾಗಿ ವಿನ್ಯಾಸಗೊಳಿಸಲಾದ ಫೇಸ್‌ಬುಕ್ ಗ್ರೂಪ್‌ಗೆ ಇವುಗಳನ್ನು ಪೋಸ್ಟ್ ಮಾಡಲಾಗಿದೆ. ಈ ಗುಂಪಿನಲ್ಲಿ ನೂರಾರು ಉದ್ಯೋಗಿಗಳು ಇದ್ದರು ಎನ್ನಲಾಗಿದೆ.

ಹಿಂದಿನ ವರದಿಯಲ್ಲಿ, ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಅಂಖಿ ದಾಸ್‌ ಹೇಳಿದ್ದಾಗಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಈ ಕುರಿತು ಭಾರತದಲ್ಲಿ ದೊಡ್ಡ ವಿವಾದ ಏರ್ಪಟ್ಟಿತ್ತು. ಸೆಪ್ಟೆಂಬರ್ 2 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಅಧ್ಯಕ್ಷರಾಗಿರುವ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಲು ಫೇಸ್‌ಬುಕ್ ಇಂಡಿಯಾಗೆ ಕೇಳಲಾಗಿದೆ.

ಕಳೆದ ವಾರ, ಅಂಖಿದಾಸ್ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ವಿರೋದಿ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕಂಪನಿಯ ಮುಸ್ಲಿಂ ಉದ್ಯೋಗಿಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಬುಜ್‌ಫೀಡ್‌ ವರದಿ ಮಾಡಿದೆ. ಭಾರತದಲ್ಲಿನ ಮುಸ್ಲಿಮರನ್ನು “ಅವನತಿ ಹೊಂದಿದ ಸಮುದಾಯ”ದವರು ಎಂದ ದಾಸ್ ಅವರಿಗೆ “ಧರ್ಮದ ಶುದ್ಧತೆ ಮತ್ತು ಶರಿಯಾ ವಿಷಯದ ಅನುಷ್ಠಾನವನ್ನು ಹೊರತುಪಡಿಸಿ ಏನೂ ಇಲ್ಲ” ಎಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಈ ಕುರಿತು ಕಂಪನಿಯ 11 ಸಹದ್ಯೋಗಿಗಳು ಫೇಸ್‌ಬುಕ್ ಜಾಗತಿಕ ನಾಯಕತ್ವಕ್ಕೆ ಪತ್ರ ಬರೆದಿದ್ದರು. ಆಗ ನಾಯಕತ್ವವು ಮುಸ್ಲಿಂ ವಿರೋಧಿ ಭಾವನೆ ವ್ಯಕ್ತವಾಗಿರುವುದನ್ನು ಒಪ್ಪಿಕೊಂಡು ಪಾರದರ್ಶಕವಾಗಿ ನೀತಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನಿಡಿತ್ತು ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಅಂಖಿದಾಸ್‌ರವರ ಪೋಸ್ಟ್‌ಗಳನ್ನು ಆಗಿನ ಸಂದರ್ಭದಿಂದ ತೆಗೆಯಲಾಗಿದೆ. ಅವು ಪಕ್ಷಪಾತದಿಂದ ಕೂಡಿವೆ ಎನಿಸುವುದಿಲ್ಲ. ಅವರ ಹೇಳಿಕೆಗಳು ಇಡೀ ಫೇಸ್‌ಬುಕ್‌ ಅನ್ನು ಪ್ರತಿನಿಧಿಸುವುದಿಲ್ಲ. ನಾವು ರಾಜಕೀಯ ಪಕ್ಷಗಳು ನಮ್ಮ ಪ್ಲಾಟ್‌ಫಾರಂ ಅನ್ನು ಬಳಸುವಂತೆ ಉತ್ತೇಜಿಸುತ್ತೇವೆ ಅಷ್ಟೇ ಎಂದು ಫೇಸ್‌ಬುಕ್ ವಕ್ತಾರ ಆಂಡಿ ಸ್ಟೋನ್ ತಿಳಿಸಿದ್ದಾರೆ.

ತನ್ನ ಸಾಮಾಜಿಕ ಮಾಧ್ಯಮ ವೇದಿಕೆಯು ದ್ವೇಷದ ಮಾತು ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ವಿಷಯವನ್ನು ನಿಷೇಧಿಸುತ್ತದೆ. ರಾಜಕೀಯ ಸಂಬಂಧಗಳನ್ನು ಪರಿಗಣಿಸದೆ ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತದೆ ಎಂದು ನಂತರ ಫೇಸ್‌ಬುಕ್ ಹೇಳಿತ್ತು.


ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...