Homeಮುಖಪುಟಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ...

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

"ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ" ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

- Advertisement -
- Advertisement -

ಬಿಜೆಪಿ ನಾಯಕರ ದ್ವೇಷಭಾಷಣದ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಪಕ್ಷಪಾತ ಮಾಡಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿರುವ ಫೇಸ್‌ಬುಕ್ ಕಾರ್ಯನಿರ್ವಾಹಕ ಅಧಿಕಾರಿ ಅಂಖಿದಾಸ್ ಮೇಲೆ ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ಮತ್ತೊಂದು ಗಂಭೀರ ಆರೋಪದ ವರದಿ ಮಾಡಿದೆ.

ಅದೆಂದರೆ “ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಇಂದು ಕಂಪನಿಯ ತಟಸ್ಠ ಮನೋಭಾವಕ್ಕೆ ವಿರುದ್ಧವಾದ ಕ್ರಿಯೆ ಎಂದು ಫೇಸ್‌ಬುಕ್‌ನ ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

“ಈ ಪೋಸ್ಟ್‌ಗಳನ್ನು 2012 ರಿಂದ 2014ರ ಅವಧಿಯಲ್ಲಿ ಮಾಡಲಾಗಿದ್ದು, ಭಾರತದಲ್ಲಿನ ಉದ್ಯೋಗಿಗಳಿಗಾಗಿ ವಿನ್ಯಾಸಗೊಳಿಸಲಾದ ಫೇಸ್‌ಬುಕ್ ಗ್ರೂಪ್‌ಗೆ ಇವುಗಳನ್ನು ಪೋಸ್ಟ್ ಮಾಡಲಾಗಿದೆ. ಈ ಗುಂಪಿನಲ್ಲಿ ನೂರಾರು ಉದ್ಯೋಗಿಗಳು ಇದ್ದರು ಎನ್ನಲಾಗಿದೆ.

ಹಿಂದಿನ ವರದಿಯಲ್ಲಿ, ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಅಂಖಿ ದಾಸ್‌ ಹೇಳಿದ್ದಾಗಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಈ ಕುರಿತು ಭಾರತದಲ್ಲಿ ದೊಡ್ಡ ವಿವಾದ ಏರ್ಪಟ್ಟಿತ್ತು. ಸೆಪ್ಟೆಂಬರ್ 2 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಅಧ್ಯಕ್ಷರಾಗಿರುವ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಲು ಫೇಸ್‌ಬುಕ್ ಇಂಡಿಯಾಗೆ ಕೇಳಲಾಗಿದೆ.

ಕಳೆದ ವಾರ, ಅಂಖಿದಾಸ್ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ವಿರೋದಿ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕಂಪನಿಯ ಮುಸ್ಲಿಂ ಉದ್ಯೋಗಿಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಬುಜ್‌ಫೀಡ್‌ ವರದಿ ಮಾಡಿದೆ. ಭಾರತದಲ್ಲಿನ ಮುಸ್ಲಿಮರನ್ನು “ಅವನತಿ ಹೊಂದಿದ ಸಮುದಾಯ”ದವರು ಎಂದ ದಾಸ್ ಅವರಿಗೆ “ಧರ್ಮದ ಶುದ್ಧತೆ ಮತ್ತು ಶರಿಯಾ ವಿಷಯದ ಅನುಷ್ಠಾನವನ್ನು ಹೊರತುಪಡಿಸಿ ಏನೂ ಇಲ್ಲ” ಎಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಈ ಕುರಿತು ಕಂಪನಿಯ 11 ಸಹದ್ಯೋಗಿಗಳು ಫೇಸ್‌ಬುಕ್ ಜಾಗತಿಕ ನಾಯಕತ್ವಕ್ಕೆ ಪತ್ರ ಬರೆದಿದ್ದರು. ಆಗ ನಾಯಕತ್ವವು ಮುಸ್ಲಿಂ ವಿರೋಧಿ ಭಾವನೆ ವ್ಯಕ್ತವಾಗಿರುವುದನ್ನು ಒಪ್ಪಿಕೊಂಡು ಪಾರದರ್ಶಕವಾಗಿ ನೀತಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನಿಡಿತ್ತು ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಅಂಖಿದಾಸ್‌ರವರ ಪೋಸ್ಟ್‌ಗಳನ್ನು ಆಗಿನ ಸಂದರ್ಭದಿಂದ ತೆಗೆಯಲಾಗಿದೆ. ಅವು ಪಕ್ಷಪಾತದಿಂದ ಕೂಡಿವೆ ಎನಿಸುವುದಿಲ್ಲ. ಅವರ ಹೇಳಿಕೆಗಳು ಇಡೀ ಫೇಸ್‌ಬುಕ್‌ ಅನ್ನು ಪ್ರತಿನಿಧಿಸುವುದಿಲ್ಲ. ನಾವು ರಾಜಕೀಯ ಪಕ್ಷಗಳು ನಮ್ಮ ಪ್ಲಾಟ್‌ಫಾರಂ ಅನ್ನು ಬಳಸುವಂತೆ ಉತ್ತೇಜಿಸುತ್ತೇವೆ ಅಷ್ಟೇ ಎಂದು ಫೇಸ್‌ಬುಕ್ ವಕ್ತಾರ ಆಂಡಿ ಸ್ಟೋನ್ ತಿಳಿಸಿದ್ದಾರೆ.

ತನ್ನ ಸಾಮಾಜಿಕ ಮಾಧ್ಯಮ ವೇದಿಕೆಯು ದ್ವೇಷದ ಮಾತು ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ವಿಷಯವನ್ನು ನಿಷೇಧಿಸುತ್ತದೆ. ರಾಜಕೀಯ ಸಂಬಂಧಗಳನ್ನು ಪರಿಗಣಿಸದೆ ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತದೆ ಎಂದು ನಂತರ ಫೇಸ್‌ಬುಕ್ ಹೇಳಿತ್ತು.


ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...