Homeಮುಖಪುಟಫೇಸ್‌ಬುಕ್-ಬಿಜೆಪಿ ಸಖ್ಯದ ವಾಲ್ ಸ್ಟ್ರೀಟ್ ವರದಿ: ವಿಚಾರಣೆ ಆರಂಭಿಸಿದ ದೆಹಲಿ ಅಸೆಂಬ್ಲಿ

ಫೇಸ್‌ಬುಕ್-ಬಿಜೆಪಿ ಸಖ್ಯದ ವಾಲ್ ಸ್ಟ್ರೀಟ್ ವರದಿ: ವಿಚಾರಣೆ ಆರಂಭಿಸಿದ ದೆಹಲಿ ಅಸೆಂಬ್ಲಿ

ಸಮಿತಿಯು, ಪತ್ರಕರ್ತ ಮತ್ತು ಲೇಖಕ ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಅವರ ಹೇಳಿಕೆಗಳನ್ನು ತೆಗೆದುಕೊಂಡು, ಅದನ್ನು "ತಜ್ಞರ ಸಾಕ್ಷಿಗಳು" ಎಂದು ಪರಿಗಣಿಸಿದೆ.

- Advertisement -
- Advertisement -

ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ್ದ ‘ಭಾರತದಲ್ಲಿ ಫೇಸ್‌ಬುಕ್ ಬಿಜೆಪಿ ಪರವಾಗಿ ಕೆಲಸ ಮಾಡಿದೆ’ ಎಂಬ ಆರೋಪದ ವಿಚಾರಣೆಯನ್ನು ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯದ ಸಮಿತಿ ಆರಂಭಿಸಿದೆ. ಈ ಆರೋಪಗಳ ಬಗ್ಗೆ ತಮ್ಮ ಹೇಳಿಕೆಯನ್ನು ದಾಖಲಿಸಲು ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳನ್ನು ವಿಚಾರಣೆಗೆ ಆಹ್ವಾನಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಕೆಲವು ದಿನಗಳ ಹಿಂದೆ ಅಮೇರಿಕಾದ ಪತ್ರಿಕೆ ವಾಲ್ ಸ್ಟ್ರೀಟ್ ಜರ್ನಲ್ “ಭಾರತದಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣವನ್ನು ನಿಯಂತ್ರಿಸುವಲ್ಲಿ ಫೇಸ್‌ಬುಕ್ ಕ್ರಮ ತೆಗೆದುಕೊಂಡಿಲ್ಲ. ಆಡಳಿತ ಪಕ್ಷದ ವಿರುದ್ಧ ಕ್ರಮ ತೆಗೆದುಕೊಂಡರೆ ಕಂಪನಿಯ ಭವಿಷ್ಯದ ವ್ಯವಹಾರಗಳಿಗೆ ತೊಂದರೆಯಾಗಬಹುದು ಎಂದು ಫೇಸ್‌ಬುಕ್ ಭಾರತದ ಮುಖ್ಯಸ್ಥರು ಹೇಳಿದ್ದಾರೆ” ಎಂದು ವರದಿ ಮಾಡಿತ್ತು.

ಇದಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ಬಗ್ಗೆ ತನಿಖೆಯಾಗಬೇಕೆಂದು ಹಲವರು ಒತ್ತಾಯಿಸಿ ಫೇಸ್‌ಬುಕ್‌ಗೆ ಪತ್ರವನ್ನೂ ಬರೆದಿದ್ದರು. ಇದೀಗ ದೆಹಲಿಯ ಅಸೆಂಬ್ಲಿಯು ಫೇಸ್‌ಬುಕ್ ಅಧಿಕಾರಿಗಳನ್ನು ವಿಚಾರಿಸುವುದಾಗಿ ಹೇಳಿದೆ.

“ತನಿಖೆಗೆ ಸಮಿತಿಯು ಸರ್ವಾನುಮತದಿಂದ ಒಪ್ಪಿಗೆ ಪಡೆದುಕೊಂಡಿದೆ. ದೂರುದಾರರು ಮಾಡಿದ ಆರೋಪಗಳ ಬಗ್ಗೆ ತನಿಖೆ ನಡೆಸಲು ಫೇಸ್‌ಬುಕ್ ಅಧಿಕಾರಿಗಳನ್ನು ಕರೆಸಿಕೊಳ್ಳಬೇಕು. ಹಾಗಾಗಿ ಶೀಘ್ರದಲ್ಲೇ ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸುತ್ತೇವೆ” ಎಂದು ದೆಹಲಿ ಅಸೆಂಬ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ಸಮಿತಿಯು, ಪತ್ರಕರ್ತ ಮತ್ತು ಲೇಖಕ ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಅವರ ಹೇಳಿಕೆಗಳನ್ನು ತೆಗೆದುಕೊಂಡು, ಅದನ್ನು “ತಜ್ಞರ ಸಾಕ್ಷಿಗಳು” ಎಂದು ಪರಿಗಣಿಸಿದೆ. ಠಾಕೂರ್ತಾ ಭಾರತದಲ್ಲಿ ‘ಫೇಸ್‌ಬುಕ್‌ನ ರಿಯಲ್ ಫೇಸ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ದೆಹಲಿ ಅಸೆಂಬ್ಲಿ ಸಮಿತಿಯ ಅಧ್ಯಕ್ಷರಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ, ಫೇಸ್‌ಬುಕ್-ಬಿಜೆಪಿ ಸಂಬಂಧ ಮತ್ತು ಆರೋಪಿಸಲಾಗಿರುವ ಫೇಸ್‌ಬುಕ್-ಬಿಜೆಪಿ ಸಂಬಂಧ ಮತ್ತು ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರದ ಬಗ್ಗೆ ಹಲವಾರು ಪ್ರಶ್ನೆಗಳ ಕುರಿತು ತಜ್ಞರನ್ನು ಸಲಹೆ ಕೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಫೇಸ್‌ಬುಕ್ ಹೇಳುವಂತೆ ಅದು ವಿಷಯ ತಟಸ್ಥ ನಿಲುವು ಹೊಂದಿಲ್ಲ. ಅತಿದೊಡ್ಡ ಜಾಲ ಹೊಂದಿರುವ ಸಾಮಾಜಿಕ ಮಾಧ್ಯಮ ಮತ್ತು ಬಿಜೆಪಿ ನಡುವಿನ ಸಂಬಂಧವನ್ನು ಸಾಬೀತುಪಡಿಸಲು ಪುರಾವೆಗಳಿವೆ’ ಎಂದು ತಜ್ಞರು ಹೇಳಿದ್ದಾರೆ.

ಕೋಮು ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಫೇಸ್‌ಬುಕ್‌ನ ಪಾತ್ರ ಮತ್ತು ದ್ವೇಷ ಹರಡುವ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸ್ವತಂತ್ರ ವಿಚಾರಣೆಯ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 14 ರಂದು ದಿ ವಾಲ್ ಸ್ಟ್ರೀಟ್ ಜರ್ನಲ್‌ನಲ್ಲಿ ಪ್ರಕಟವಾದ ವರದಿಯಿಂದ ದ್ವೇಷ ಭಾಷಣದ ಬಗ್ಗೆ ಫೇಸ್‌ಬುಕ್‌ನ ಏಕ ಪಕ್ಷಪಾತತೆಯನ್ನು ಬಹಿರಂಗಪಡಿಸಲಾಗಿದೆ. ಈ ವರದಿಯು ಭಾರತದಲ್ಲಿ ರಾಜಕೀಯವಾಗಿ ಭಾರೀ ಮಹತ್ವದ್ದೆನಿಸಿದೆ.

ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ಮತ್ತು ಗುಂಪುಗಳಿಗೆ “ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸಿಲ್ಲ” ಎಂದು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿಯ ಮುಖ್ಯಸ್ಥೆ ಅಂಖಿ ದಾಸ್ ಅವರ ಕಾರ್ಯವೈಖರಿಯನ್ನು ಈ ವರದಿಯು ಬಹಿರಂಗಪಡಿಸಿತ್ತು.

ಕಳೆದ ವಾರ, ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಸೆಪ್ಟೆಂಬರ್ 2 ರಂದು ಈ ಕುರಿತು ಚರ್ಚಿಸಲು ಫೇಸ್‌ಬುಕ್ ಪ್ರತಿನಿಧಿಗಳನ್ನು ಕರೆಸಲಿದೆ ಎಂದು ಹೇಳಿದೆ. ಸಮಿತಿಯ ಅಧ್ಯಕ್ಷ ಶಶಿ ತರೂರ್ ಆಗಸ್ಟ್ 17 ರಂದು ತನಿಖೆ ಕೈಗೆತ್ತಿಕೊಳ್ಳುವುದಾಗಿ ಘೋಷಿಸಿದ್ದರು.

ಇದರ ನಡುವೆ, ಫೇಸ್‌ಬುಕ್, ತನ್ನ ವೇದಿಕೆಯಲ್ಲಿ ದ್ವೇಷ ಭಾಷಣಕ್ಕೆ ಸ್ಥಳವಿಲ್ಲ ಎಂದು ಶುಕ್ರವಾರ ಹೇಳಿ, ಯಾವುದೇ ಕಾರಣಕ್ಕೂ ಇಲ್ಲಿ ಏಕ ಪಕ್ಷಪಾತತೆಗೆ ಅವಕಾಶವಿಲ್ಲ. ಮತ್ತು ಕೋಮು ಪ್ರಚೋದನೆಗೂ ಅವಕಾಶವಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...