Homeಮುಖಪುಟಫೇಸ್‌ಬುಕ್-ಬಿಜೆಪಿ ಸಖ್ಯದ ವಾಲ್ ಸ್ಟ್ರೀಟ್ ವರದಿ: ವಿಚಾರಣೆ ಆರಂಭಿಸಿದ ದೆಹಲಿ ಅಸೆಂಬ್ಲಿ

ಫೇಸ್‌ಬುಕ್-ಬಿಜೆಪಿ ಸಖ್ಯದ ವಾಲ್ ಸ್ಟ್ರೀಟ್ ವರದಿ: ವಿಚಾರಣೆ ಆರಂಭಿಸಿದ ದೆಹಲಿ ಅಸೆಂಬ್ಲಿ

ಸಮಿತಿಯು, ಪತ್ರಕರ್ತ ಮತ್ತು ಲೇಖಕ ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಅವರ ಹೇಳಿಕೆಗಳನ್ನು ತೆಗೆದುಕೊಂಡು, ಅದನ್ನು "ತಜ್ಞರ ಸಾಕ್ಷಿಗಳು" ಎಂದು ಪರಿಗಣಿಸಿದೆ.

- Advertisement -
- Advertisement -

ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ್ದ ‘ಭಾರತದಲ್ಲಿ ಫೇಸ್‌ಬುಕ್ ಬಿಜೆಪಿ ಪರವಾಗಿ ಕೆಲಸ ಮಾಡಿದೆ’ ಎಂಬ ಆರೋಪದ ವಿಚಾರಣೆಯನ್ನು ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯದ ಸಮಿತಿ ಆರಂಭಿಸಿದೆ. ಈ ಆರೋಪಗಳ ಬಗ್ಗೆ ತಮ್ಮ ಹೇಳಿಕೆಯನ್ನು ದಾಖಲಿಸಲು ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳನ್ನು ವಿಚಾರಣೆಗೆ ಆಹ್ವಾನಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಕೆಲವು ದಿನಗಳ ಹಿಂದೆ ಅಮೇರಿಕಾದ ಪತ್ರಿಕೆ ವಾಲ್ ಸ್ಟ್ರೀಟ್ ಜರ್ನಲ್ “ಭಾರತದಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣವನ್ನು ನಿಯಂತ್ರಿಸುವಲ್ಲಿ ಫೇಸ್‌ಬುಕ್ ಕ್ರಮ ತೆಗೆದುಕೊಂಡಿಲ್ಲ. ಆಡಳಿತ ಪಕ್ಷದ ವಿರುದ್ಧ ಕ್ರಮ ತೆಗೆದುಕೊಂಡರೆ ಕಂಪನಿಯ ಭವಿಷ್ಯದ ವ್ಯವಹಾರಗಳಿಗೆ ತೊಂದರೆಯಾಗಬಹುದು ಎಂದು ಫೇಸ್‌ಬುಕ್ ಭಾರತದ ಮುಖ್ಯಸ್ಥರು ಹೇಳಿದ್ದಾರೆ” ಎಂದು ವರದಿ ಮಾಡಿತ್ತು.

ಇದಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ಬಗ್ಗೆ ತನಿಖೆಯಾಗಬೇಕೆಂದು ಹಲವರು ಒತ್ತಾಯಿಸಿ ಫೇಸ್‌ಬುಕ್‌ಗೆ ಪತ್ರವನ್ನೂ ಬರೆದಿದ್ದರು. ಇದೀಗ ದೆಹಲಿಯ ಅಸೆಂಬ್ಲಿಯು ಫೇಸ್‌ಬುಕ್ ಅಧಿಕಾರಿಗಳನ್ನು ವಿಚಾರಿಸುವುದಾಗಿ ಹೇಳಿದೆ.

“ತನಿಖೆಗೆ ಸಮಿತಿಯು ಸರ್ವಾನುಮತದಿಂದ ಒಪ್ಪಿಗೆ ಪಡೆದುಕೊಂಡಿದೆ. ದೂರುದಾರರು ಮಾಡಿದ ಆರೋಪಗಳ ಬಗ್ಗೆ ತನಿಖೆ ನಡೆಸಲು ಫೇಸ್‌ಬುಕ್ ಅಧಿಕಾರಿಗಳನ್ನು ಕರೆಸಿಕೊಳ್ಳಬೇಕು. ಹಾಗಾಗಿ ಶೀಘ್ರದಲ್ಲೇ ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸುತ್ತೇವೆ” ಎಂದು ದೆಹಲಿ ಅಸೆಂಬ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ಸಮಿತಿಯು, ಪತ್ರಕರ್ತ ಮತ್ತು ಲೇಖಕ ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಅವರ ಹೇಳಿಕೆಗಳನ್ನು ತೆಗೆದುಕೊಂಡು, ಅದನ್ನು “ತಜ್ಞರ ಸಾಕ್ಷಿಗಳು” ಎಂದು ಪರಿಗಣಿಸಿದೆ. ಠಾಕೂರ್ತಾ ಭಾರತದಲ್ಲಿ ‘ಫೇಸ್‌ಬುಕ್‌ನ ರಿಯಲ್ ಫೇಸ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ದೆಹಲಿ ಅಸೆಂಬ್ಲಿ ಸಮಿತಿಯ ಅಧ್ಯಕ್ಷರಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ, ಫೇಸ್‌ಬುಕ್-ಬಿಜೆಪಿ ಸಂಬಂಧ ಮತ್ತು ಆರೋಪಿಸಲಾಗಿರುವ ಫೇಸ್‌ಬುಕ್-ಬಿಜೆಪಿ ಸಂಬಂಧ ಮತ್ತು ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರದ ಬಗ್ಗೆ ಹಲವಾರು ಪ್ರಶ್ನೆಗಳ ಕುರಿತು ತಜ್ಞರನ್ನು ಸಲಹೆ ಕೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಫೇಸ್‌ಬುಕ್ ಹೇಳುವಂತೆ ಅದು ವಿಷಯ ತಟಸ್ಥ ನಿಲುವು ಹೊಂದಿಲ್ಲ. ಅತಿದೊಡ್ಡ ಜಾಲ ಹೊಂದಿರುವ ಸಾಮಾಜಿಕ ಮಾಧ್ಯಮ ಮತ್ತು ಬಿಜೆಪಿ ನಡುವಿನ ಸಂಬಂಧವನ್ನು ಸಾಬೀತುಪಡಿಸಲು ಪುರಾವೆಗಳಿವೆ’ ಎಂದು ತಜ್ಞರು ಹೇಳಿದ್ದಾರೆ.

ಕೋಮು ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಫೇಸ್‌ಬುಕ್‌ನ ಪಾತ್ರ ಮತ್ತು ದ್ವೇಷ ಹರಡುವ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸ್ವತಂತ್ರ ವಿಚಾರಣೆಯ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 14 ರಂದು ದಿ ವಾಲ್ ಸ್ಟ್ರೀಟ್ ಜರ್ನಲ್‌ನಲ್ಲಿ ಪ್ರಕಟವಾದ ವರದಿಯಿಂದ ದ್ವೇಷ ಭಾಷಣದ ಬಗ್ಗೆ ಫೇಸ್‌ಬುಕ್‌ನ ಏಕ ಪಕ್ಷಪಾತತೆಯನ್ನು ಬಹಿರಂಗಪಡಿಸಲಾಗಿದೆ. ಈ ವರದಿಯು ಭಾರತದಲ್ಲಿ ರಾಜಕೀಯವಾಗಿ ಭಾರೀ ಮಹತ್ವದ್ದೆನಿಸಿದೆ.

ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ಮತ್ತು ಗುಂಪುಗಳಿಗೆ “ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸಿಲ್ಲ” ಎಂದು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿಯ ಮುಖ್ಯಸ್ಥೆ ಅಂಖಿ ದಾಸ್ ಅವರ ಕಾರ್ಯವೈಖರಿಯನ್ನು ಈ ವರದಿಯು ಬಹಿರಂಗಪಡಿಸಿತ್ತು.

ಕಳೆದ ವಾರ, ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಸೆಪ್ಟೆಂಬರ್ 2 ರಂದು ಈ ಕುರಿತು ಚರ್ಚಿಸಲು ಫೇಸ್‌ಬುಕ್ ಪ್ರತಿನಿಧಿಗಳನ್ನು ಕರೆಸಲಿದೆ ಎಂದು ಹೇಳಿದೆ. ಸಮಿತಿಯ ಅಧ್ಯಕ್ಷ ಶಶಿ ತರೂರ್ ಆಗಸ್ಟ್ 17 ರಂದು ತನಿಖೆ ಕೈಗೆತ್ತಿಕೊಳ್ಳುವುದಾಗಿ ಘೋಷಿಸಿದ್ದರು.

ಇದರ ನಡುವೆ, ಫೇಸ್‌ಬುಕ್, ತನ್ನ ವೇದಿಕೆಯಲ್ಲಿ ದ್ವೇಷ ಭಾಷಣಕ್ಕೆ ಸ್ಥಳವಿಲ್ಲ ಎಂದು ಶುಕ್ರವಾರ ಹೇಳಿ, ಯಾವುದೇ ಕಾರಣಕ್ಕೂ ಇಲ್ಲಿ ಏಕ ಪಕ್ಷಪಾತತೆಗೆ ಅವಕಾಶವಿಲ್ಲ. ಮತ್ತು ಕೋಮು ಪ್ರಚೋದನೆಗೂ ಅವಕಾಶವಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...