Homeಮುಖಪುಟಫೇಸ್‌ಬುಕ್-ಬಿಜೆಪಿ ಸಖ್ಯದ ವಾಲ್ ಸ್ಟ್ರೀಟ್ ವರದಿ: ವಿಚಾರಣೆ ಆರಂಭಿಸಿದ ದೆಹಲಿ ಅಸೆಂಬ್ಲಿ

ಫೇಸ್‌ಬುಕ್-ಬಿಜೆಪಿ ಸಖ್ಯದ ವಾಲ್ ಸ್ಟ್ರೀಟ್ ವರದಿ: ವಿಚಾರಣೆ ಆರಂಭಿಸಿದ ದೆಹಲಿ ಅಸೆಂಬ್ಲಿ

ಸಮಿತಿಯು, ಪತ್ರಕರ್ತ ಮತ್ತು ಲೇಖಕ ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಅವರ ಹೇಳಿಕೆಗಳನ್ನು ತೆಗೆದುಕೊಂಡು, ಅದನ್ನು "ತಜ್ಞರ ಸಾಕ್ಷಿಗಳು" ಎಂದು ಪರಿಗಣಿಸಿದೆ.

- Advertisement -
- Advertisement -

ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ್ದ ‘ಭಾರತದಲ್ಲಿ ಫೇಸ್‌ಬುಕ್ ಬಿಜೆಪಿ ಪರವಾಗಿ ಕೆಲಸ ಮಾಡಿದೆ’ ಎಂಬ ಆರೋಪದ ವಿಚಾರಣೆಯನ್ನು ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯದ ಸಮಿತಿ ಆರಂಭಿಸಿದೆ. ಈ ಆರೋಪಗಳ ಬಗ್ಗೆ ತಮ್ಮ ಹೇಳಿಕೆಯನ್ನು ದಾಖಲಿಸಲು ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳನ್ನು ವಿಚಾರಣೆಗೆ ಆಹ್ವಾನಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಕೆಲವು ದಿನಗಳ ಹಿಂದೆ ಅಮೇರಿಕಾದ ಪತ್ರಿಕೆ ವಾಲ್ ಸ್ಟ್ರೀಟ್ ಜರ್ನಲ್ “ಭಾರತದಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣವನ್ನು ನಿಯಂತ್ರಿಸುವಲ್ಲಿ ಫೇಸ್‌ಬುಕ್ ಕ್ರಮ ತೆಗೆದುಕೊಂಡಿಲ್ಲ. ಆಡಳಿತ ಪಕ್ಷದ ವಿರುದ್ಧ ಕ್ರಮ ತೆಗೆದುಕೊಂಡರೆ ಕಂಪನಿಯ ಭವಿಷ್ಯದ ವ್ಯವಹಾರಗಳಿಗೆ ತೊಂದರೆಯಾಗಬಹುದು ಎಂದು ಫೇಸ್‌ಬುಕ್ ಭಾರತದ ಮುಖ್ಯಸ್ಥರು ಹೇಳಿದ್ದಾರೆ” ಎಂದು ವರದಿ ಮಾಡಿತ್ತು.

ಇದಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ಬಗ್ಗೆ ತನಿಖೆಯಾಗಬೇಕೆಂದು ಹಲವರು ಒತ್ತಾಯಿಸಿ ಫೇಸ್‌ಬುಕ್‌ಗೆ ಪತ್ರವನ್ನೂ ಬರೆದಿದ್ದರು. ಇದೀಗ ದೆಹಲಿಯ ಅಸೆಂಬ್ಲಿಯು ಫೇಸ್‌ಬುಕ್ ಅಧಿಕಾರಿಗಳನ್ನು ವಿಚಾರಿಸುವುದಾಗಿ ಹೇಳಿದೆ.

“ತನಿಖೆಗೆ ಸಮಿತಿಯು ಸರ್ವಾನುಮತದಿಂದ ಒಪ್ಪಿಗೆ ಪಡೆದುಕೊಂಡಿದೆ. ದೂರುದಾರರು ಮಾಡಿದ ಆರೋಪಗಳ ಬಗ್ಗೆ ತನಿಖೆ ನಡೆಸಲು ಫೇಸ್‌ಬುಕ್ ಅಧಿಕಾರಿಗಳನ್ನು ಕರೆಸಿಕೊಳ್ಳಬೇಕು. ಹಾಗಾಗಿ ಶೀಘ್ರದಲ್ಲೇ ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸುತ್ತೇವೆ” ಎಂದು ದೆಹಲಿ ಅಸೆಂಬ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ಸಮಿತಿಯು, ಪತ್ರಕರ್ತ ಮತ್ತು ಲೇಖಕ ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಅವರ ಹೇಳಿಕೆಗಳನ್ನು ತೆಗೆದುಕೊಂಡು, ಅದನ್ನು “ತಜ್ಞರ ಸಾಕ್ಷಿಗಳು” ಎಂದು ಪರಿಗಣಿಸಿದೆ. ಠಾಕೂರ್ತಾ ಭಾರತದಲ್ಲಿ ‘ಫೇಸ್‌ಬುಕ್‌ನ ರಿಯಲ್ ಫೇಸ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ದೆಹಲಿ ಅಸೆಂಬ್ಲಿ ಸಮಿತಿಯ ಅಧ್ಯಕ್ಷರಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ, ಫೇಸ್‌ಬುಕ್-ಬಿಜೆಪಿ ಸಂಬಂಧ ಮತ್ತು ಆರೋಪಿಸಲಾಗಿರುವ ಫೇಸ್‌ಬುಕ್-ಬಿಜೆಪಿ ಸಂಬಂಧ ಮತ್ತು ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರದ ಬಗ್ಗೆ ಹಲವಾರು ಪ್ರಶ್ನೆಗಳ ಕುರಿತು ತಜ್ಞರನ್ನು ಸಲಹೆ ಕೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಫೇಸ್‌ಬುಕ್ ಹೇಳುವಂತೆ ಅದು ವಿಷಯ ತಟಸ್ಥ ನಿಲುವು ಹೊಂದಿಲ್ಲ. ಅತಿದೊಡ್ಡ ಜಾಲ ಹೊಂದಿರುವ ಸಾಮಾಜಿಕ ಮಾಧ್ಯಮ ಮತ್ತು ಬಿಜೆಪಿ ನಡುವಿನ ಸಂಬಂಧವನ್ನು ಸಾಬೀತುಪಡಿಸಲು ಪುರಾವೆಗಳಿವೆ’ ಎಂದು ತಜ್ಞರು ಹೇಳಿದ್ದಾರೆ.

ಕೋಮು ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಫೇಸ್‌ಬುಕ್‌ನ ಪಾತ್ರ ಮತ್ತು ದ್ವೇಷ ಹರಡುವ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸ್ವತಂತ್ರ ವಿಚಾರಣೆಯ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 14 ರಂದು ದಿ ವಾಲ್ ಸ್ಟ್ರೀಟ್ ಜರ್ನಲ್‌ನಲ್ಲಿ ಪ್ರಕಟವಾದ ವರದಿಯಿಂದ ದ್ವೇಷ ಭಾಷಣದ ಬಗ್ಗೆ ಫೇಸ್‌ಬುಕ್‌ನ ಏಕ ಪಕ್ಷಪಾತತೆಯನ್ನು ಬಹಿರಂಗಪಡಿಸಲಾಗಿದೆ. ಈ ವರದಿಯು ಭಾರತದಲ್ಲಿ ರಾಜಕೀಯವಾಗಿ ಭಾರೀ ಮಹತ್ವದ್ದೆನಿಸಿದೆ.

ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ಮತ್ತು ಗುಂಪುಗಳಿಗೆ “ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸಿಲ್ಲ” ಎಂದು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿಯ ಮುಖ್ಯಸ್ಥೆ ಅಂಖಿ ದಾಸ್ ಅವರ ಕಾರ್ಯವೈಖರಿಯನ್ನು ಈ ವರದಿಯು ಬಹಿರಂಗಪಡಿಸಿತ್ತು.

ಕಳೆದ ವಾರ, ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಸೆಪ್ಟೆಂಬರ್ 2 ರಂದು ಈ ಕುರಿತು ಚರ್ಚಿಸಲು ಫೇಸ್‌ಬುಕ್ ಪ್ರತಿನಿಧಿಗಳನ್ನು ಕರೆಸಲಿದೆ ಎಂದು ಹೇಳಿದೆ. ಸಮಿತಿಯ ಅಧ್ಯಕ್ಷ ಶಶಿ ತರೂರ್ ಆಗಸ್ಟ್ 17 ರಂದು ತನಿಖೆ ಕೈಗೆತ್ತಿಕೊಳ್ಳುವುದಾಗಿ ಘೋಷಿಸಿದ್ದರು.

ಇದರ ನಡುವೆ, ಫೇಸ್‌ಬುಕ್, ತನ್ನ ವೇದಿಕೆಯಲ್ಲಿ ದ್ವೇಷ ಭಾಷಣಕ್ಕೆ ಸ್ಥಳವಿಲ್ಲ ಎಂದು ಶುಕ್ರವಾರ ಹೇಳಿ, ಯಾವುದೇ ಕಾರಣಕ್ಕೂ ಇಲ್ಲಿ ಏಕ ಪಕ್ಷಪಾತತೆಗೆ ಅವಕಾಶವಿಲ್ಲ. ಮತ್ತು ಕೋಮು ಪ್ರಚೋದನೆಗೂ ಅವಕಾಶವಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...