Homeಅಂತರಾಷ್ಟ್ರೀಯಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ವೈರಸ್ ಕುರಿತು ಹಂಚಿಕೊಂಡಿರುವ ವಿಡಿಯೋ ತಪ್ಪು ಮಾಹಿತಿ ಹೊಂದಿದೆ. ಇದು ತಮ್ಮ ನೀತಿಗಳನ್ನು ಉಲ್ಲಂಘಿಸಿದೆ ಎಂದು ಆ ವೀಡಿಯೋವನ್ನು ಟ್ವಿಟರ್ ಇಂಕ್ ಮತ್ತು ಫೇಸ್‌ಬುಕ್ ಇಂಕ್ ನಿರ್ಬಂಧಿಸಿದೆ. ಅಲ್ಲದೇ ಟ್ರಂಪ್ ಚುನಾವಣಾ ಪ್ರಚಾರದ ಟ್ವಿಟ್ಟರ್ ಖಾತೆಯಿಂದ ಹೊಸ ಟ್ವೀಟ್‌ ಕಳುಹಿಸುವುದನ್ನು ನಿಷೇಧಿಸಲಾಗಿದೆ.

ಟ್ರಂಪ್ ಬುಧವಾರ ಫಾಕ್ಸ್ ನ್ಯೂಸ್‌ನೊಂದಿಗೆ ಸಂದರ್ಶನದಲ್ಲಿ ಮಾತನಾಡುತ್ತಾ, ‘ಶಾಲೆಗಳನ್ನು ಏಕೆ ತೆರೆಯಬೇಕು ಎಂಬ ಪ್ರಶ್ನೆಗೆ ಉತ್ತರವಾಗಿ, ವಾಸ್ತವದಲ್ಲಿ ಮಕ್ಕಳು ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ’ ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

ಟ್ರಂಪ್ ಅದೇ ವೀಡಿಯೊವನ್ನು ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ತಮ್ಮ ಖಾತೆಯಿಂದ ಪೋಸ್ಟ್ ಮಾಡಿದ್ದರು. ಟ್ವಿಟರ್ ಟ್ರಂಪ್‌ ಪ್ರಚಾರದ ಖಾತೆಯನ್ನು ಸ್ಥಗಿತಗೊಳಿಸುವ ಸ್ವಲ್ಪ ಸಮಯದ ಮೊದಲು ಈ ಕ್ಲಿಪ್ ಅನ್ನು ಫೇಸ್ಬುಕ್ ತೆಗೆದುಹಾಕಿದೆ.

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

ಟ್ರಂಪ್‌ ಅವರು ತಮ್ಮ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡುವುದನ್ನು ಟ್ವಿಟರ್ ನಿರ್ಬಂಧಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ಆರಂಭದಲ್ಲಿ ವರದಿ ಮಾಡಿತು. ಆದರೆ ನಂತರ ತಾತ್ಕಾಲಿಕ ನಿಷೇಧವು @TeamTrump ಪ್ರಚಾರ ಖಾತೆಯ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದು ಹೇಳಿತು.

ವೀಡಿಯೊವನ್ನು ತೆಗೆದುಹಾಕಲಾಗಿದೆ ಎಂದು ಕಂಡುಬಂದ ನಂತರ @TeamTrump ಖಾತೆ ಬುಧವಾರ ಸಂಜೆ ಪೋಸ್ಟ್ ಮಾಡುವುದನ್ನು ಪುನರಾರಂಭಿಸಿತು.

ಟ್ವಿಟರ್ ವಕ್ತಾರ ನಿಕ್ ಪ್ಯಾಸಿಲಿಯೊ ಅವರ ಪೋಸ್ಟ್ ಪ್ರಕಾರ, “eTeamTrump ನ ಮೂಲ ಟ್ವೀಟ್, ಕೊರೊನಾ ತಪ್ಪು ಮಾಹಿತಿಯ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದೆ. ಅಧ್ಯಕ್ಷರು ತಮ್ಮ ವೈಯಕ್ತಿಕ ಖಾತೆಯಾದ @realDonaldTrump ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರೂ, ಆ ಖಾತೆಯನ್ನು ನಿರ್ಬಂಧಿಸಿಲ್ಲ ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷರ ವಿವಾದಾತ್ಮಕ ಟ್ವೀಟ್‌ಗಳ ವಿರುದ್ಧ ಕ್ರಮಗಳ ಕೊರತೆಯಿಂದಾಗಿ ಹಲವಾರು ವರ್ಷಗಳಿಂದ ಟೀಕೆಗೆ ಗುರಿಯಾಗಿದ್ದ ಟ್ವಿಟರ್, ಇತ್ತೀಚಿನ ತಿಂಗಳುಗಳಲ್ಲಿಅವರ ವಿರುದ್ಧ ಹೆಚ್ಚು ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತಿದೆ.

ಮೇ ಅಂತ್ಯದಲ್ಲಿ, ಕಂಪನಿಯು ಮೇಲ್-ಇನ್ ಮತಪತ್ರಗಳ ಬಗ್ಗೆ ಎರಡು ಟ್ರಂಪ್ ಪೋಸ್ಟ್‌ಗಳನ್ನು ತೆಗೆದುಹಾಕಿತು. ಇದು ಮತದಾನಕ್ಕೆ ಸಂಬಂಧಿಸಿದ ಸುಳ್ಳು ಅಥವಾ ಗೊಂದಲಮಯ ಮಾಹಿತಿಯನ್ನು ತಡೆಯುವ ಹೊಸ ನೀತಿಯ ಭಾಗವಾಗಿದೆ.

ಕೆಲವು ದಿನಗಳ ನಂತರ, ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ದೌರ್ಜನ್ಯ ಮತ್ತು ವರ್ಣಭೇದ ನೀತಿಯ ವಿರುದ್ಧದ ಪ್ರತಿಭಟನೆಗಳ ಉಲ್ಲೇಖವಾಗಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಟ್ರಂಪ್ ಟ್ವೀಟ್ ಮಾಡಿದಾಗ ʼಹಿಂಸಾಚಾರವನ್ನು ವೈಭವೀಕರಿಸುವುದರ ವಿರುದ್ಧ ತನ್ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿʼ ಟ್ವಿಟರ್ ಮತ್ತೊಂದು ಟ್ವೀಟ್ ಅನ್ನು ನಿರ್ಬಂಧಿಸಿತ್ತು.

ಟ್ರಂಪ್ ವಿರುದ್ಧ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಿಮರ್ಶಕರು ಹೇಳಿದ್ದಕ್ಕಾಗಿ ಫೇಸ್‌ಬುಕ್ ಕೂಡ ಈ ಕ್ರಮವನ್ನು ತೆಗೆದುಕೊಂಡಿದೆ.

WHO ವೆಬ್‌ಸೈಟ್‌ನ ಪ್ರಕಾರ, “ಮಕ್ಕಳು ಮತ್ತು ಹದಿಹರೆಯದವರು ಯಾವುದೇ ವಯಸ್ಸಿನವರಂತೆ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಮತ್ತು ರೋಗವನ್ನು ಹರಡಬಹುದು. ಕೆಲವು ಮಕ್ಕಳು ವೈರಸ್‌ಗೆ ತುತ್ತಾಗಿದ್ದಾರೆ. ಹಾಗಾಗಿ ಅವರಿಗೂ ವಯಸ್ಕರಂತೆಯೇ ಸಾಮಾಜಿಕ ದೂರ ಮಾರ್ಗಸೂಚಿಗಳನ್ನು ಅನುಸರಿಸಲು ಶಿಫಾರಸು ಮಾಡಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...