Homeಅಂತರಾಷ್ಟ್ರೀಯಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ವೈರಸ್ ಕುರಿತು ಹಂಚಿಕೊಂಡಿರುವ ವಿಡಿಯೋ ತಪ್ಪು ಮಾಹಿತಿ ಹೊಂದಿದೆ. ಇದು ತಮ್ಮ ನೀತಿಗಳನ್ನು ಉಲ್ಲಂಘಿಸಿದೆ ಎಂದು ಆ ವೀಡಿಯೋವನ್ನು ಟ್ವಿಟರ್ ಇಂಕ್ ಮತ್ತು ಫೇಸ್‌ಬುಕ್ ಇಂಕ್ ನಿರ್ಬಂಧಿಸಿದೆ. ಅಲ್ಲದೇ ಟ್ರಂಪ್ ಚುನಾವಣಾ ಪ್ರಚಾರದ ಟ್ವಿಟ್ಟರ್ ಖಾತೆಯಿಂದ ಹೊಸ ಟ್ವೀಟ್‌ ಕಳುಹಿಸುವುದನ್ನು ನಿಷೇಧಿಸಲಾಗಿದೆ.

ಟ್ರಂಪ್ ಬುಧವಾರ ಫಾಕ್ಸ್ ನ್ಯೂಸ್‌ನೊಂದಿಗೆ ಸಂದರ್ಶನದಲ್ಲಿ ಮಾತನಾಡುತ್ತಾ, ‘ಶಾಲೆಗಳನ್ನು ಏಕೆ ತೆರೆಯಬೇಕು ಎಂಬ ಪ್ರಶ್ನೆಗೆ ಉತ್ತರವಾಗಿ, ವಾಸ್ತವದಲ್ಲಿ ಮಕ್ಕಳು ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ’ ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

ಟ್ರಂಪ್ ಅದೇ ವೀಡಿಯೊವನ್ನು ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ತಮ್ಮ ಖಾತೆಯಿಂದ ಪೋಸ್ಟ್ ಮಾಡಿದ್ದರು. ಟ್ವಿಟರ್ ಟ್ರಂಪ್‌ ಪ್ರಚಾರದ ಖಾತೆಯನ್ನು ಸ್ಥಗಿತಗೊಳಿಸುವ ಸ್ವಲ್ಪ ಸಮಯದ ಮೊದಲು ಈ ಕ್ಲಿಪ್ ಅನ್ನು ಫೇಸ್ಬುಕ್ ತೆಗೆದುಹಾಕಿದೆ.

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

ಟ್ರಂಪ್‌ ಅವರು ತಮ್ಮ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡುವುದನ್ನು ಟ್ವಿಟರ್ ನಿರ್ಬಂಧಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ಆರಂಭದಲ್ಲಿ ವರದಿ ಮಾಡಿತು. ಆದರೆ ನಂತರ ತಾತ್ಕಾಲಿಕ ನಿಷೇಧವು @TeamTrump ಪ್ರಚಾರ ಖಾತೆಯ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದು ಹೇಳಿತು.

ವೀಡಿಯೊವನ್ನು ತೆಗೆದುಹಾಕಲಾಗಿದೆ ಎಂದು ಕಂಡುಬಂದ ನಂತರ @TeamTrump ಖಾತೆ ಬುಧವಾರ ಸಂಜೆ ಪೋಸ್ಟ್ ಮಾಡುವುದನ್ನು ಪುನರಾರಂಭಿಸಿತು.

ಟ್ವಿಟರ್ ವಕ್ತಾರ ನಿಕ್ ಪ್ಯಾಸಿಲಿಯೊ ಅವರ ಪೋಸ್ಟ್ ಪ್ರಕಾರ, “eTeamTrump ನ ಮೂಲ ಟ್ವೀಟ್, ಕೊರೊನಾ ತಪ್ಪು ಮಾಹಿತಿಯ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದೆ. ಅಧ್ಯಕ್ಷರು ತಮ್ಮ ವೈಯಕ್ತಿಕ ಖಾತೆಯಾದ @realDonaldTrump ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರೂ, ಆ ಖಾತೆಯನ್ನು ನಿರ್ಬಂಧಿಸಿಲ್ಲ ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷರ ವಿವಾದಾತ್ಮಕ ಟ್ವೀಟ್‌ಗಳ ವಿರುದ್ಧ ಕ್ರಮಗಳ ಕೊರತೆಯಿಂದಾಗಿ ಹಲವಾರು ವರ್ಷಗಳಿಂದ ಟೀಕೆಗೆ ಗುರಿಯಾಗಿದ್ದ ಟ್ವಿಟರ್, ಇತ್ತೀಚಿನ ತಿಂಗಳುಗಳಲ್ಲಿಅವರ ವಿರುದ್ಧ ಹೆಚ್ಚು ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತಿದೆ.

ಮೇ ಅಂತ್ಯದಲ್ಲಿ, ಕಂಪನಿಯು ಮೇಲ್-ಇನ್ ಮತಪತ್ರಗಳ ಬಗ್ಗೆ ಎರಡು ಟ್ರಂಪ್ ಪೋಸ್ಟ್‌ಗಳನ್ನು ತೆಗೆದುಹಾಕಿತು. ಇದು ಮತದಾನಕ್ಕೆ ಸಂಬಂಧಿಸಿದ ಸುಳ್ಳು ಅಥವಾ ಗೊಂದಲಮಯ ಮಾಹಿತಿಯನ್ನು ತಡೆಯುವ ಹೊಸ ನೀತಿಯ ಭಾಗವಾಗಿದೆ.

ಕೆಲವು ದಿನಗಳ ನಂತರ, ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ದೌರ್ಜನ್ಯ ಮತ್ತು ವರ್ಣಭೇದ ನೀತಿಯ ವಿರುದ್ಧದ ಪ್ರತಿಭಟನೆಗಳ ಉಲ್ಲೇಖವಾಗಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಟ್ರಂಪ್ ಟ್ವೀಟ್ ಮಾಡಿದಾಗ ʼಹಿಂಸಾಚಾರವನ್ನು ವೈಭವೀಕರಿಸುವುದರ ವಿರುದ್ಧ ತನ್ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿʼ ಟ್ವಿಟರ್ ಮತ್ತೊಂದು ಟ್ವೀಟ್ ಅನ್ನು ನಿರ್ಬಂಧಿಸಿತ್ತು.

ಟ್ರಂಪ್ ವಿರುದ್ಧ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಿಮರ್ಶಕರು ಹೇಳಿದ್ದಕ್ಕಾಗಿ ಫೇಸ್‌ಬುಕ್ ಕೂಡ ಈ ಕ್ರಮವನ್ನು ತೆಗೆದುಕೊಂಡಿದೆ.

WHO ವೆಬ್‌ಸೈಟ್‌ನ ಪ್ರಕಾರ, “ಮಕ್ಕಳು ಮತ್ತು ಹದಿಹರೆಯದವರು ಯಾವುದೇ ವಯಸ್ಸಿನವರಂತೆ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಮತ್ತು ರೋಗವನ್ನು ಹರಡಬಹುದು. ಕೆಲವು ಮಕ್ಕಳು ವೈರಸ್‌ಗೆ ತುತ್ತಾಗಿದ್ದಾರೆ. ಹಾಗಾಗಿ ಅವರಿಗೂ ವಯಸ್ಕರಂತೆಯೇ ಸಾಮಾಜಿಕ ದೂರ ಮಾರ್ಗಸೂಚಿಗಳನ್ನು ಅನುಸರಿಸಲು ಶಿಫಾರಸು ಮಾಡಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...