Homeಅಂತರಾಷ್ಟ್ರೀಯಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ವೈರಸ್ ಕುರಿತು ಹಂಚಿಕೊಂಡಿರುವ ವಿಡಿಯೋ ತಪ್ಪು ಮಾಹಿತಿ ಹೊಂದಿದೆ. ಇದು ತಮ್ಮ ನೀತಿಗಳನ್ನು ಉಲ್ಲಂಘಿಸಿದೆ ಎಂದು ಆ ವೀಡಿಯೋವನ್ನು ಟ್ವಿಟರ್ ಇಂಕ್ ಮತ್ತು ಫೇಸ್‌ಬುಕ್ ಇಂಕ್ ನಿರ್ಬಂಧಿಸಿದೆ. ಅಲ್ಲದೇ ಟ್ರಂಪ್ ಚುನಾವಣಾ ಪ್ರಚಾರದ ಟ್ವಿಟ್ಟರ್ ಖಾತೆಯಿಂದ ಹೊಸ ಟ್ವೀಟ್‌ ಕಳುಹಿಸುವುದನ್ನು ನಿಷೇಧಿಸಲಾಗಿದೆ.

ಟ್ರಂಪ್ ಬುಧವಾರ ಫಾಕ್ಸ್ ನ್ಯೂಸ್‌ನೊಂದಿಗೆ ಸಂದರ್ಶನದಲ್ಲಿ ಮಾತನಾಡುತ್ತಾ, ‘ಶಾಲೆಗಳನ್ನು ಏಕೆ ತೆರೆಯಬೇಕು ಎಂಬ ಪ್ರಶ್ನೆಗೆ ಉತ್ತರವಾಗಿ, ವಾಸ್ತವದಲ್ಲಿ ಮಕ್ಕಳು ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ’ ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

ಟ್ರಂಪ್ ಅದೇ ವೀಡಿಯೊವನ್ನು ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ತಮ್ಮ ಖಾತೆಯಿಂದ ಪೋಸ್ಟ್ ಮಾಡಿದ್ದರು. ಟ್ವಿಟರ್ ಟ್ರಂಪ್‌ ಪ್ರಚಾರದ ಖಾತೆಯನ್ನು ಸ್ಥಗಿತಗೊಳಿಸುವ ಸ್ವಲ್ಪ ಸಮಯದ ಮೊದಲು ಈ ಕ್ಲಿಪ್ ಅನ್ನು ಫೇಸ್ಬುಕ್ ತೆಗೆದುಹಾಕಿದೆ.

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

ಟ್ರಂಪ್‌ ಅವರು ತಮ್ಮ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡುವುದನ್ನು ಟ್ವಿಟರ್ ನಿರ್ಬಂಧಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ಆರಂಭದಲ್ಲಿ ವರದಿ ಮಾಡಿತು. ಆದರೆ ನಂತರ ತಾತ್ಕಾಲಿಕ ನಿಷೇಧವು @TeamTrump ಪ್ರಚಾರ ಖಾತೆಯ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದು ಹೇಳಿತು.

ವೀಡಿಯೊವನ್ನು ತೆಗೆದುಹಾಕಲಾಗಿದೆ ಎಂದು ಕಂಡುಬಂದ ನಂತರ @TeamTrump ಖಾತೆ ಬುಧವಾರ ಸಂಜೆ ಪೋಸ್ಟ್ ಮಾಡುವುದನ್ನು ಪುನರಾರಂಭಿಸಿತು.

ಟ್ವಿಟರ್ ವಕ್ತಾರ ನಿಕ್ ಪ್ಯಾಸಿಲಿಯೊ ಅವರ ಪೋಸ್ಟ್ ಪ್ರಕಾರ, “eTeamTrump ನ ಮೂಲ ಟ್ವೀಟ್, ಕೊರೊನಾ ತಪ್ಪು ಮಾಹಿತಿಯ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದೆ. ಅಧ್ಯಕ್ಷರು ತಮ್ಮ ವೈಯಕ್ತಿಕ ಖಾತೆಯಾದ @realDonaldTrump ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರೂ, ಆ ಖಾತೆಯನ್ನು ನಿರ್ಬಂಧಿಸಿಲ್ಲ ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷರ ವಿವಾದಾತ್ಮಕ ಟ್ವೀಟ್‌ಗಳ ವಿರುದ್ಧ ಕ್ರಮಗಳ ಕೊರತೆಯಿಂದಾಗಿ ಹಲವಾರು ವರ್ಷಗಳಿಂದ ಟೀಕೆಗೆ ಗುರಿಯಾಗಿದ್ದ ಟ್ವಿಟರ್, ಇತ್ತೀಚಿನ ತಿಂಗಳುಗಳಲ್ಲಿಅವರ ವಿರುದ್ಧ ಹೆಚ್ಚು ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತಿದೆ.

ಮೇ ಅಂತ್ಯದಲ್ಲಿ, ಕಂಪನಿಯು ಮೇಲ್-ಇನ್ ಮತಪತ್ರಗಳ ಬಗ್ಗೆ ಎರಡು ಟ್ರಂಪ್ ಪೋಸ್ಟ್‌ಗಳನ್ನು ತೆಗೆದುಹಾಕಿತು. ಇದು ಮತದಾನಕ್ಕೆ ಸಂಬಂಧಿಸಿದ ಸುಳ್ಳು ಅಥವಾ ಗೊಂದಲಮಯ ಮಾಹಿತಿಯನ್ನು ತಡೆಯುವ ಹೊಸ ನೀತಿಯ ಭಾಗವಾಗಿದೆ.

ಕೆಲವು ದಿನಗಳ ನಂತರ, ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ದೌರ್ಜನ್ಯ ಮತ್ತು ವರ್ಣಭೇದ ನೀತಿಯ ವಿರುದ್ಧದ ಪ್ರತಿಭಟನೆಗಳ ಉಲ್ಲೇಖವಾಗಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಟ್ರಂಪ್ ಟ್ವೀಟ್ ಮಾಡಿದಾಗ ʼಹಿಂಸಾಚಾರವನ್ನು ವೈಭವೀಕರಿಸುವುದರ ವಿರುದ್ಧ ತನ್ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿʼ ಟ್ವಿಟರ್ ಮತ್ತೊಂದು ಟ್ವೀಟ್ ಅನ್ನು ನಿರ್ಬಂಧಿಸಿತ್ತು.

ಟ್ರಂಪ್ ವಿರುದ್ಧ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಿಮರ್ಶಕರು ಹೇಳಿದ್ದಕ್ಕಾಗಿ ಫೇಸ್‌ಬುಕ್ ಕೂಡ ಈ ಕ್ರಮವನ್ನು ತೆಗೆದುಕೊಂಡಿದೆ.

WHO ವೆಬ್‌ಸೈಟ್‌ನ ಪ್ರಕಾರ, “ಮಕ್ಕಳು ಮತ್ತು ಹದಿಹರೆಯದವರು ಯಾವುದೇ ವಯಸ್ಸಿನವರಂತೆ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಮತ್ತು ರೋಗವನ್ನು ಹರಡಬಹುದು. ಕೆಲವು ಮಕ್ಕಳು ವೈರಸ್‌ಗೆ ತುತ್ತಾಗಿದ್ದಾರೆ. ಹಾಗಾಗಿ ಅವರಿಗೂ ವಯಸ್ಕರಂತೆಯೇ ಸಾಮಾಜಿಕ ದೂರ ಮಾರ್ಗಸೂಚಿಗಳನ್ನು ಅನುಸರಿಸಲು ಶಿಫಾರಸು ಮಾಡಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...