Homeಅಂತರಾಷ್ಟ್ರೀಯಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ವೈರಸ್ ಕುರಿತು ಹಂಚಿಕೊಂಡಿರುವ ವಿಡಿಯೋ ತಪ್ಪು ಮಾಹಿತಿ ಹೊಂದಿದೆ. ಇದು ತಮ್ಮ ನೀತಿಗಳನ್ನು ಉಲ್ಲಂಘಿಸಿದೆ ಎಂದು ಆ ವೀಡಿಯೋವನ್ನು ಟ್ವಿಟರ್ ಇಂಕ್ ಮತ್ತು ಫೇಸ್‌ಬುಕ್ ಇಂಕ್ ನಿರ್ಬಂಧಿಸಿದೆ. ಅಲ್ಲದೇ ಟ್ರಂಪ್ ಚುನಾವಣಾ ಪ್ರಚಾರದ ಟ್ವಿಟ್ಟರ್ ಖಾತೆಯಿಂದ ಹೊಸ ಟ್ವೀಟ್‌ ಕಳುಹಿಸುವುದನ್ನು ನಿಷೇಧಿಸಲಾಗಿದೆ.

ಟ್ರಂಪ್ ಬುಧವಾರ ಫಾಕ್ಸ್ ನ್ಯೂಸ್‌ನೊಂದಿಗೆ ಸಂದರ್ಶನದಲ್ಲಿ ಮಾತನಾಡುತ್ತಾ, ‘ಶಾಲೆಗಳನ್ನು ಏಕೆ ತೆರೆಯಬೇಕು ಎಂಬ ಪ್ರಶ್ನೆಗೆ ಉತ್ತರವಾಗಿ, ವಾಸ್ತವದಲ್ಲಿ ಮಕ್ಕಳು ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ’ ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

ಟ್ರಂಪ್ ಅದೇ ವೀಡಿಯೊವನ್ನು ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ತಮ್ಮ ಖಾತೆಯಿಂದ ಪೋಸ್ಟ್ ಮಾಡಿದ್ದರು. ಟ್ವಿಟರ್ ಟ್ರಂಪ್‌ ಪ್ರಚಾರದ ಖಾತೆಯನ್ನು ಸ್ಥಗಿತಗೊಳಿಸುವ ಸ್ವಲ್ಪ ಸಮಯದ ಮೊದಲು ಈ ಕ್ಲಿಪ್ ಅನ್ನು ಫೇಸ್ಬುಕ್ ತೆಗೆದುಹಾಕಿದೆ.

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

ಟ್ರಂಪ್‌ ಅವರು ತಮ್ಮ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡುವುದನ್ನು ಟ್ವಿಟರ್ ನಿರ್ಬಂಧಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ಆರಂಭದಲ್ಲಿ ವರದಿ ಮಾಡಿತು. ಆದರೆ ನಂತರ ತಾತ್ಕಾಲಿಕ ನಿಷೇಧವು @TeamTrump ಪ್ರಚಾರ ಖಾತೆಯ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದು ಹೇಳಿತು.

ವೀಡಿಯೊವನ್ನು ತೆಗೆದುಹಾಕಲಾಗಿದೆ ಎಂದು ಕಂಡುಬಂದ ನಂತರ @TeamTrump ಖಾತೆ ಬುಧವಾರ ಸಂಜೆ ಪೋಸ್ಟ್ ಮಾಡುವುದನ್ನು ಪುನರಾರಂಭಿಸಿತು.

ಟ್ವಿಟರ್ ವಕ್ತಾರ ನಿಕ್ ಪ್ಯಾಸಿಲಿಯೊ ಅವರ ಪೋಸ್ಟ್ ಪ್ರಕಾರ, “eTeamTrump ನ ಮೂಲ ಟ್ವೀಟ್, ಕೊರೊನಾ ತಪ್ಪು ಮಾಹಿತಿಯ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದೆ. ಅಧ್ಯಕ್ಷರು ತಮ್ಮ ವೈಯಕ್ತಿಕ ಖಾತೆಯಾದ @realDonaldTrump ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರೂ, ಆ ಖಾತೆಯನ್ನು ನಿರ್ಬಂಧಿಸಿಲ್ಲ ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷರ ವಿವಾದಾತ್ಮಕ ಟ್ವೀಟ್‌ಗಳ ವಿರುದ್ಧ ಕ್ರಮಗಳ ಕೊರತೆಯಿಂದಾಗಿ ಹಲವಾರು ವರ್ಷಗಳಿಂದ ಟೀಕೆಗೆ ಗುರಿಯಾಗಿದ್ದ ಟ್ವಿಟರ್, ಇತ್ತೀಚಿನ ತಿಂಗಳುಗಳಲ್ಲಿಅವರ ವಿರುದ್ಧ ಹೆಚ್ಚು ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತಿದೆ.

ಮೇ ಅಂತ್ಯದಲ್ಲಿ, ಕಂಪನಿಯು ಮೇಲ್-ಇನ್ ಮತಪತ್ರಗಳ ಬಗ್ಗೆ ಎರಡು ಟ್ರಂಪ್ ಪೋಸ್ಟ್‌ಗಳನ್ನು ತೆಗೆದುಹಾಕಿತು. ಇದು ಮತದಾನಕ್ಕೆ ಸಂಬಂಧಿಸಿದ ಸುಳ್ಳು ಅಥವಾ ಗೊಂದಲಮಯ ಮಾಹಿತಿಯನ್ನು ತಡೆಯುವ ಹೊಸ ನೀತಿಯ ಭಾಗವಾಗಿದೆ.

ಕೆಲವು ದಿನಗಳ ನಂತರ, ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ದೌರ್ಜನ್ಯ ಮತ್ತು ವರ್ಣಭೇದ ನೀತಿಯ ವಿರುದ್ಧದ ಪ್ರತಿಭಟನೆಗಳ ಉಲ್ಲೇಖವಾಗಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಟ್ರಂಪ್ ಟ್ವೀಟ್ ಮಾಡಿದಾಗ ʼಹಿಂಸಾಚಾರವನ್ನು ವೈಭವೀಕರಿಸುವುದರ ವಿರುದ್ಧ ತನ್ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿʼ ಟ್ವಿಟರ್ ಮತ್ತೊಂದು ಟ್ವೀಟ್ ಅನ್ನು ನಿರ್ಬಂಧಿಸಿತ್ತು.

ಟ್ರಂಪ್ ವಿರುದ್ಧ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಿಮರ್ಶಕರು ಹೇಳಿದ್ದಕ್ಕಾಗಿ ಫೇಸ್‌ಬುಕ್ ಕೂಡ ಈ ಕ್ರಮವನ್ನು ತೆಗೆದುಕೊಂಡಿದೆ.

WHO ವೆಬ್‌ಸೈಟ್‌ನ ಪ್ರಕಾರ, “ಮಕ್ಕಳು ಮತ್ತು ಹದಿಹರೆಯದವರು ಯಾವುದೇ ವಯಸ್ಸಿನವರಂತೆ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಮತ್ತು ರೋಗವನ್ನು ಹರಡಬಹುದು. ಕೆಲವು ಮಕ್ಕಳು ವೈರಸ್‌ಗೆ ತುತ್ತಾಗಿದ್ದಾರೆ. ಹಾಗಾಗಿ ಅವರಿಗೂ ವಯಸ್ಕರಂತೆಯೇ ಸಾಮಾಜಿಕ ದೂರ ಮಾರ್ಗಸೂಚಿಗಳನ್ನು ಅನುಸರಿಸಲು ಶಿಫಾರಸು ಮಾಡಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...