Homeಅಂತರಾಷ್ಟ್ರೀಯಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ವೈರಸ್ ಕುರಿತು ಹಂಚಿಕೊಂಡಿರುವ ವಿಡಿಯೋ ತಪ್ಪು ಮಾಹಿತಿ ಹೊಂದಿದೆ. ಇದು ತಮ್ಮ ನೀತಿಗಳನ್ನು ಉಲ್ಲಂಘಿಸಿದೆ ಎಂದು ಆ ವೀಡಿಯೋವನ್ನು ಟ್ವಿಟರ್ ಇಂಕ್ ಮತ್ತು ಫೇಸ್‌ಬುಕ್ ಇಂಕ್ ನಿರ್ಬಂಧಿಸಿದೆ. ಅಲ್ಲದೇ ಟ್ರಂಪ್ ಚುನಾವಣಾ ಪ್ರಚಾರದ ಟ್ವಿಟ್ಟರ್ ಖಾತೆಯಿಂದ ಹೊಸ ಟ್ವೀಟ್‌ ಕಳುಹಿಸುವುದನ್ನು ನಿಷೇಧಿಸಲಾಗಿದೆ.

ಟ್ರಂಪ್ ಬುಧವಾರ ಫಾಕ್ಸ್ ನ್ಯೂಸ್‌ನೊಂದಿಗೆ ಸಂದರ್ಶನದಲ್ಲಿ ಮಾತನಾಡುತ್ತಾ, ‘ಶಾಲೆಗಳನ್ನು ಏಕೆ ತೆರೆಯಬೇಕು ಎಂಬ ಪ್ರಶ್ನೆಗೆ ಉತ್ತರವಾಗಿ, ವಾಸ್ತವದಲ್ಲಿ ಮಕ್ಕಳು ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ’ ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

ಟ್ರಂಪ್ ಅದೇ ವೀಡಿಯೊವನ್ನು ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ತಮ್ಮ ಖಾತೆಯಿಂದ ಪೋಸ್ಟ್ ಮಾಡಿದ್ದರು. ಟ್ವಿಟರ್ ಟ್ರಂಪ್‌ ಪ್ರಚಾರದ ಖಾತೆಯನ್ನು ಸ್ಥಗಿತಗೊಳಿಸುವ ಸ್ವಲ್ಪ ಸಮಯದ ಮೊದಲು ಈ ಕ್ಲಿಪ್ ಅನ್ನು ಫೇಸ್ಬುಕ್ ತೆಗೆದುಹಾಕಿದೆ.

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

ಟ್ರಂಪ್‌ ಅವರು ತಮ್ಮ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡುವುದನ್ನು ಟ್ವಿಟರ್ ನಿರ್ಬಂಧಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ಆರಂಭದಲ್ಲಿ ವರದಿ ಮಾಡಿತು. ಆದರೆ ನಂತರ ತಾತ್ಕಾಲಿಕ ನಿಷೇಧವು @TeamTrump ಪ್ರಚಾರ ಖಾತೆಯ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದು ಹೇಳಿತು.

ವೀಡಿಯೊವನ್ನು ತೆಗೆದುಹಾಕಲಾಗಿದೆ ಎಂದು ಕಂಡುಬಂದ ನಂತರ @TeamTrump ಖಾತೆ ಬುಧವಾರ ಸಂಜೆ ಪೋಸ್ಟ್ ಮಾಡುವುದನ್ನು ಪುನರಾರಂಭಿಸಿತು.

ಟ್ವಿಟರ್ ವಕ್ತಾರ ನಿಕ್ ಪ್ಯಾಸಿಲಿಯೊ ಅವರ ಪೋಸ್ಟ್ ಪ್ರಕಾರ, “eTeamTrump ನ ಮೂಲ ಟ್ವೀಟ್, ಕೊರೊನಾ ತಪ್ಪು ಮಾಹಿತಿಯ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದೆ. ಅಧ್ಯಕ್ಷರು ತಮ್ಮ ವೈಯಕ್ತಿಕ ಖಾತೆಯಾದ @realDonaldTrump ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರೂ, ಆ ಖಾತೆಯನ್ನು ನಿರ್ಬಂಧಿಸಿಲ್ಲ ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷರ ವಿವಾದಾತ್ಮಕ ಟ್ವೀಟ್‌ಗಳ ವಿರುದ್ಧ ಕ್ರಮಗಳ ಕೊರತೆಯಿಂದಾಗಿ ಹಲವಾರು ವರ್ಷಗಳಿಂದ ಟೀಕೆಗೆ ಗುರಿಯಾಗಿದ್ದ ಟ್ವಿಟರ್, ಇತ್ತೀಚಿನ ತಿಂಗಳುಗಳಲ್ಲಿಅವರ ವಿರುದ್ಧ ಹೆಚ್ಚು ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತಿದೆ.

ಮೇ ಅಂತ್ಯದಲ್ಲಿ, ಕಂಪನಿಯು ಮೇಲ್-ಇನ್ ಮತಪತ್ರಗಳ ಬಗ್ಗೆ ಎರಡು ಟ್ರಂಪ್ ಪೋಸ್ಟ್‌ಗಳನ್ನು ತೆಗೆದುಹಾಕಿತು. ಇದು ಮತದಾನಕ್ಕೆ ಸಂಬಂಧಿಸಿದ ಸುಳ್ಳು ಅಥವಾ ಗೊಂದಲಮಯ ಮಾಹಿತಿಯನ್ನು ತಡೆಯುವ ಹೊಸ ನೀತಿಯ ಭಾಗವಾಗಿದೆ.

ಕೆಲವು ದಿನಗಳ ನಂತರ, ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ದೌರ್ಜನ್ಯ ಮತ್ತು ವರ್ಣಭೇದ ನೀತಿಯ ವಿರುದ್ಧದ ಪ್ರತಿಭಟನೆಗಳ ಉಲ್ಲೇಖವಾಗಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಟ್ರಂಪ್ ಟ್ವೀಟ್ ಮಾಡಿದಾಗ ʼಹಿಂಸಾಚಾರವನ್ನು ವೈಭವೀಕರಿಸುವುದರ ವಿರುದ್ಧ ತನ್ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿʼ ಟ್ವಿಟರ್ ಮತ್ತೊಂದು ಟ್ವೀಟ್ ಅನ್ನು ನಿರ್ಬಂಧಿಸಿತ್ತು.

ಟ್ರಂಪ್ ವಿರುದ್ಧ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಿಮರ್ಶಕರು ಹೇಳಿದ್ದಕ್ಕಾಗಿ ಫೇಸ್‌ಬುಕ್ ಕೂಡ ಈ ಕ್ರಮವನ್ನು ತೆಗೆದುಕೊಂಡಿದೆ.

WHO ವೆಬ್‌ಸೈಟ್‌ನ ಪ್ರಕಾರ, “ಮಕ್ಕಳು ಮತ್ತು ಹದಿಹರೆಯದವರು ಯಾವುದೇ ವಯಸ್ಸಿನವರಂತೆ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಮತ್ತು ರೋಗವನ್ನು ಹರಡಬಹುದು. ಕೆಲವು ಮಕ್ಕಳು ವೈರಸ್‌ಗೆ ತುತ್ತಾಗಿದ್ದಾರೆ. ಹಾಗಾಗಿ ಅವರಿಗೂ ವಯಸ್ಕರಂತೆಯೇ ಸಾಮಾಜಿಕ ದೂರ ಮಾರ್ಗಸೂಚಿಗಳನ್ನು ಅನುಸರಿಸಲು ಶಿಫಾರಸು ಮಾಡಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...