Homeಅಂತರಾಷ್ಟ್ರೀಯಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ವೈರಸ್ ಕುರಿತು ಹಂಚಿಕೊಂಡಿರುವ ವಿಡಿಯೋ ತಪ್ಪು ಮಾಹಿತಿ ಹೊಂದಿದೆ. ಇದು ತಮ್ಮ ನೀತಿಗಳನ್ನು ಉಲ್ಲಂಘಿಸಿದೆ ಎಂದು ಆ ವೀಡಿಯೋವನ್ನು ಟ್ವಿಟರ್ ಇಂಕ್ ಮತ್ತು ಫೇಸ್‌ಬುಕ್ ಇಂಕ್ ನಿರ್ಬಂಧಿಸಿದೆ. ಅಲ್ಲದೇ ಟ್ರಂಪ್ ಚುನಾವಣಾ ಪ್ರಚಾರದ ಟ್ವಿಟ್ಟರ್ ಖಾತೆಯಿಂದ ಹೊಸ ಟ್ವೀಟ್‌ ಕಳುಹಿಸುವುದನ್ನು ನಿಷೇಧಿಸಲಾಗಿದೆ.

ಟ್ರಂಪ್ ಬುಧವಾರ ಫಾಕ್ಸ್ ನ್ಯೂಸ್‌ನೊಂದಿಗೆ ಸಂದರ್ಶನದಲ್ಲಿ ಮಾತನಾಡುತ್ತಾ, ‘ಶಾಲೆಗಳನ್ನು ಏಕೆ ತೆರೆಯಬೇಕು ಎಂಬ ಪ್ರಶ್ನೆಗೆ ಉತ್ತರವಾಗಿ, ವಾಸ್ತವದಲ್ಲಿ ಮಕ್ಕಳು ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ’ ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

ಟ್ರಂಪ್ ಅದೇ ವೀಡಿಯೊವನ್ನು ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ತಮ್ಮ ಖಾತೆಯಿಂದ ಪೋಸ್ಟ್ ಮಾಡಿದ್ದರು. ಟ್ವಿಟರ್ ಟ್ರಂಪ್‌ ಪ್ರಚಾರದ ಖಾತೆಯನ್ನು ಸ್ಥಗಿತಗೊಳಿಸುವ ಸ್ವಲ್ಪ ಸಮಯದ ಮೊದಲು ಈ ಕ್ಲಿಪ್ ಅನ್ನು ಫೇಸ್ಬುಕ್ ತೆಗೆದುಹಾಕಿದೆ.

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

ಟ್ರಂಪ್‌ ಅವರು ತಮ್ಮ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡುವುದನ್ನು ಟ್ವಿಟರ್ ನಿರ್ಬಂಧಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ಆರಂಭದಲ್ಲಿ ವರದಿ ಮಾಡಿತು. ಆದರೆ ನಂತರ ತಾತ್ಕಾಲಿಕ ನಿಷೇಧವು @TeamTrump ಪ್ರಚಾರ ಖಾತೆಯ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದು ಹೇಳಿತು.

ವೀಡಿಯೊವನ್ನು ತೆಗೆದುಹಾಕಲಾಗಿದೆ ಎಂದು ಕಂಡುಬಂದ ನಂತರ @TeamTrump ಖಾತೆ ಬುಧವಾರ ಸಂಜೆ ಪೋಸ್ಟ್ ಮಾಡುವುದನ್ನು ಪುನರಾರಂಭಿಸಿತು.

ಟ್ವಿಟರ್ ವಕ್ತಾರ ನಿಕ್ ಪ್ಯಾಸಿಲಿಯೊ ಅವರ ಪೋಸ್ಟ್ ಪ್ರಕಾರ, “eTeamTrump ನ ಮೂಲ ಟ್ವೀಟ್, ಕೊರೊನಾ ತಪ್ಪು ಮಾಹಿತಿಯ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದೆ. ಅಧ್ಯಕ್ಷರು ತಮ್ಮ ವೈಯಕ್ತಿಕ ಖಾತೆಯಾದ @realDonaldTrump ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರೂ, ಆ ಖಾತೆಯನ್ನು ನಿರ್ಬಂಧಿಸಿಲ್ಲ ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷರ ವಿವಾದಾತ್ಮಕ ಟ್ವೀಟ್‌ಗಳ ವಿರುದ್ಧ ಕ್ರಮಗಳ ಕೊರತೆಯಿಂದಾಗಿ ಹಲವಾರು ವರ್ಷಗಳಿಂದ ಟೀಕೆಗೆ ಗುರಿಯಾಗಿದ್ದ ಟ್ವಿಟರ್, ಇತ್ತೀಚಿನ ತಿಂಗಳುಗಳಲ್ಲಿಅವರ ವಿರುದ್ಧ ಹೆಚ್ಚು ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತಿದೆ.

ಮೇ ಅಂತ್ಯದಲ್ಲಿ, ಕಂಪನಿಯು ಮೇಲ್-ಇನ್ ಮತಪತ್ರಗಳ ಬಗ್ಗೆ ಎರಡು ಟ್ರಂಪ್ ಪೋಸ್ಟ್‌ಗಳನ್ನು ತೆಗೆದುಹಾಕಿತು. ಇದು ಮತದಾನಕ್ಕೆ ಸಂಬಂಧಿಸಿದ ಸುಳ್ಳು ಅಥವಾ ಗೊಂದಲಮಯ ಮಾಹಿತಿಯನ್ನು ತಡೆಯುವ ಹೊಸ ನೀತಿಯ ಭಾಗವಾಗಿದೆ.

ಕೆಲವು ದಿನಗಳ ನಂತರ, ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ದೌರ್ಜನ್ಯ ಮತ್ತು ವರ್ಣಭೇದ ನೀತಿಯ ವಿರುದ್ಧದ ಪ್ರತಿಭಟನೆಗಳ ಉಲ್ಲೇಖವಾಗಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಟ್ರಂಪ್ ಟ್ವೀಟ್ ಮಾಡಿದಾಗ ʼಹಿಂಸಾಚಾರವನ್ನು ವೈಭವೀಕರಿಸುವುದರ ವಿರುದ್ಧ ತನ್ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿʼ ಟ್ವಿಟರ್ ಮತ್ತೊಂದು ಟ್ವೀಟ್ ಅನ್ನು ನಿರ್ಬಂಧಿಸಿತ್ತು.

ಟ್ರಂಪ್ ವಿರುದ್ಧ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಿಮರ್ಶಕರು ಹೇಳಿದ್ದಕ್ಕಾಗಿ ಫೇಸ್‌ಬುಕ್ ಕೂಡ ಈ ಕ್ರಮವನ್ನು ತೆಗೆದುಕೊಂಡಿದೆ.

WHO ವೆಬ್‌ಸೈಟ್‌ನ ಪ್ರಕಾರ, “ಮಕ್ಕಳು ಮತ್ತು ಹದಿಹರೆಯದವರು ಯಾವುದೇ ವಯಸ್ಸಿನವರಂತೆ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಮತ್ತು ರೋಗವನ್ನು ಹರಡಬಹುದು. ಕೆಲವು ಮಕ್ಕಳು ವೈರಸ್‌ಗೆ ತುತ್ತಾಗಿದ್ದಾರೆ. ಹಾಗಾಗಿ ಅವರಿಗೂ ವಯಸ್ಕರಂತೆಯೇ ಸಾಮಾಜಿಕ ದೂರ ಮಾರ್ಗಸೂಚಿಗಳನ್ನು ಅನುಸರಿಸಲು ಶಿಫಾರಸು ಮಾಡಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...