Homeಅಂತರಾಷ್ಟ್ರೀಯಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ವೈರಸ್ ಕುರಿತು ಹಂಚಿಕೊಂಡಿರುವ ವಿಡಿಯೋ ತಪ್ಪು ಮಾಹಿತಿ ಹೊಂದಿದೆ. ಇದು ತಮ್ಮ ನೀತಿಗಳನ್ನು ಉಲ್ಲಂಘಿಸಿದೆ ಎಂದು ಆ ವೀಡಿಯೋವನ್ನು ಟ್ವಿಟರ್ ಇಂಕ್ ಮತ್ತು ಫೇಸ್‌ಬುಕ್ ಇಂಕ್ ನಿರ್ಬಂಧಿಸಿದೆ. ಅಲ್ಲದೇ ಟ್ರಂಪ್ ಚುನಾವಣಾ ಪ್ರಚಾರದ ಟ್ವಿಟ್ಟರ್ ಖಾತೆಯಿಂದ ಹೊಸ ಟ್ವೀಟ್‌ ಕಳುಹಿಸುವುದನ್ನು ನಿಷೇಧಿಸಲಾಗಿದೆ.

ಟ್ರಂಪ್ ಬುಧವಾರ ಫಾಕ್ಸ್ ನ್ಯೂಸ್‌ನೊಂದಿಗೆ ಸಂದರ್ಶನದಲ್ಲಿ ಮಾತನಾಡುತ್ತಾ, ‘ಶಾಲೆಗಳನ್ನು ಏಕೆ ತೆರೆಯಬೇಕು ಎಂಬ ಪ್ರಶ್ನೆಗೆ ಉತ್ತರವಾಗಿ, ವಾಸ್ತವದಲ್ಲಿ ಮಕ್ಕಳು ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ’ ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

ಟ್ರಂಪ್ ಅದೇ ವೀಡಿಯೊವನ್ನು ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ತಮ್ಮ ಖಾತೆಯಿಂದ ಪೋಸ್ಟ್ ಮಾಡಿದ್ದರು. ಟ್ವಿಟರ್ ಟ್ರಂಪ್‌ ಪ್ರಚಾರದ ಖಾತೆಯನ್ನು ಸ್ಥಗಿತಗೊಳಿಸುವ ಸ್ವಲ್ಪ ಸಮಯದ ಮೊದಲು ಈ ಕ್ಲಿಪ್ ಅನ್ನು ಫೇಸ್ಬುಕ್ ತೆಗೆದುಹಾಕಿದೆ.

ಎರಡೂ ಸಾಮಾಜಿಕ-ಮಾಧ್ಯಮ ಕಂಪನಿಗಳು‌, ʼಜನರಿಗೆ ಹಾನಿ ಉಂಟುಮಾಡುವ ಕೊರೊನಾ ವೈರಸ್ ಬಗ್ಗೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳುವುದನ್ನುʼ ನಿಷೇಧಿಸುವ ನೀತಿಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ.

ಟ್ರಂಪ್‌ ಅವರು ತಮ್ಮ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡುವುದನ್ನು ಟ್ವಿಟರ್ ನಿರ್ಬಂಧಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ಆರಂಭದಲ್ಲಿ ವರದಿ ಮಾಡಿತು. ಆದರೆ ನಂತರ ತಾತ್ಕಾಲಿಕ ನಿಷೇಧವು @TeamTrump ಪ್ರಚಾರ ಖಾತೆಯ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದು ಹೇಳಿತು.

ವೀಡಿಯೊವನ್ನು ತೆಗೆದುಹಾಕಲಾಗಿದೆ ಎಂದು ಕಂಡುಬಂದ ನಂತರ @TeamTrump ಖಾತೆ ಬುಧವಾರ ಸಂಜೆ ಪೋಸ್ಟ್ ಮಾಡುವುದನ್ನು ಪುನರಾರಂಭಿಸಿತು.

ಟ್ವಿಟರ್ ವಕ್ತಾರ ನಿಕ್ ಪ್ಯಾಸಿಲಿಯೊ ಅವರ ಪೋಸ್ಟ್ ಪ್ರಕಾರ, “eTeamTrump ನ ಮೂಲ ಟ್ವೀಟ್, ಕೊರೊನಾ ತಪ್ಪು ಮಾಹಿತಿಯ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದೆ. ಅಧ್ಯಕ್ಷರು ತಮ್ಮ ವೈಯಕ್ತಿಕ ಖಾತೆಯಾದ @realDonaldTrump ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರೂ, ಆ ಖಾತೆಯನ್ನು ನಿರ್ಬಂಧಿಸಿಲ್ಲ ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷರ ವಿವಾದಾತ್ಮಕ ಟ್ವೀಟ್‌ಗಳ ವಿರುದ್ಧ ಕ್ರಮಗಳ ಕೊರತೆಯಿಂದಾಗಿ ಹಲವಾರು ವರ್ಷಗಳಿಂದ ಟೀಕೆಗೆ ಗುರಿಯಾಗಿದ್ದ ಟ್ವಿಟರ್, ಇತ್ತೀಚಿನ ತಿಂಗಳುಗಳಲ್ಲಿಅವರ ವಿರುದ್ಧ ಹೆಚ್ಚು ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತಿದೆ.

ಮೇ ಅಂತ್ಯದಲ್ಲಿ, ಕಂಪನಿಯು ಮೇಲ್-ಇನ್ ಮತಪತ್ರಗಳ ಬಗ್ಗೆ ಎರಡು ಟ್ರಂಪ್ ಪೋಸ್ಟ್‌ಗಳನ್ನು ತೆಗೆದುಹಾಕಿತು. ಇದು ಮತದಾನಕ್ಕೆ ಸಂಬಂಧಿಸಿದ ಸುಳ್ಳು ಅಥವಾ ಗೊಂದಲಮಯ ಮಾಹಿತಿಯನ್ನು ತಡೆಯುವ ಹೊಸ ನೀತಿಯ ಭಾಗವಾಗಿದೆ.

ಕೆಲವು ದಿನಗಳ ನಂತರ, ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ದೌರ್ಜನ್ಯ ಮತ್ತು ವರ್ಣಭೇದ ನೀತಿಯ ವಿರುದ್ಧದ ಪ್ರತಿಭಟನೆಗಳ ಉಲ್ಲೇಖವಾಗಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಟ್ರಂಪ್ ಟ್ವೀಟ್ ಮಾಡಿದಾಗ ʼಹಿಂಸಾಚಾರವನ್ನು ವೈಭವೀಕರಿಸುವುದರ ವಿರುದ್ಧ ತನ್ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿʼ ಟ್ವಿಟರ್ ಮತ್ತೊಂದು ಟ್ವೀಟ್ ಅನ್ನು ನಿರ್ಬಂಧಿಸಿತ್ತು.

ಟ್ರಂಪ್ ವಿರುದ್ಧ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಿಮರ್ಶಕರು ಹೇಳಿದ್ದಕ್ಕಾಗಿ ಫೇಸ್‌ಬುಕ್ ಕೂಡ ಈ ಕ್ರಮವನ್ನು ತೆಗೆದುಕೊಂಡಿದೆ.

WHO ವೆಬ್‌ಸೈಟ್‌ನ ಪ್ರಕಾರ, “ಮಕ್ಕಳು ಮತ್ತು ಹದಿಹರೆಯದವರು ಯಾವುದೇ ವಯಸ್ಸಿನವರಂತೆ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಮತ್ತು ರೋಗವನ್ನು ಹರಡಬಹುದು. ಕೆಲವು ಮಕ್ಕಳು ವೈರಸ್‌ಗೆ ತುತ್ತಾಗಿದ್ದಾರೆ. ಹಾಗಾಗಿ ಅವರಿಗೂ ವಯಸ್ಕರಂತೆಯೇ ಸಾಮಾಜಿಕ ದೂರ ಮಾರ್ಗಸೂಚಿಗಳನ್ನು ಅನುಸರಿಸಲು ಶಿಫಾರಸು ಮಾಡಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...