Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...