Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...