Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...