Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...