Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...