Homeಮುಖಪುಟಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

ಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

- Advertisement -
- Advertisement -

| ಮಲ್ಲಿ |
ಕಾಂಗ್ರೆಸ್ಸಿನ ನೂರಾರು ಫೇಸ್‍ಬುಕ್ ಖಾತೆ, ಪುಟಗಳನ್ನು, ಬಿಜೆಪಿಯ ಕೆಲವೇ ಕೆಲವು ಖಾತೆ, ಪುಟಗಳನ್ನು ಫೇಸ್‍ಬುಕ್ ರದ್ದು ಮಾಡಿದೆ. ಫೇಕ್ ನ್ಯೂಸ್ ತಡೆಯುವುದರ ಭಾಗವಾಗಿ ಚುನಾವಣಾ ಹೊತ್ತಲ್ಲಿ ಇಂತಹ ತೋರಿಕೆಯ ಕ್ರಮ ಅದಕ್ಕೆ ಅಗತ್ಯವಾಗಿತ್ತು. ವಿಚಿತ್ರ ಎಂದರೆ ಭಾರತದಲ್ಲಿ ಅದು ಫೇಕ್‍ನ್ಯೂಸ್ ಪತ್ತೆ ಹಚ್ಚುವ ಕ್ರಮೇ ವಿರೋಧಾಭಾಸದಿಂದ ಕೂಡಿದೆ!

ಕಳ್ಳ ಚೌಕಿದಾರನ ಕೈಗೆ ಕಾಯುವ ಕೆಲಸ ಕೊಟ್ಟಂತಾಗಿದೆ. ಫೇಕು ಸುದ್ದಿಗಳನ್ನು ತಡೆಯಲೆಂದು ಫೇಸ್‍ಬುಕ್ ನೇಮಿಸಿಕೊಂಡಿರುವ ಕಂಪನಿಗಳೇ ಫೇಕು ಹರಡುವುದರಲ್ಲಿ, ಅದೂ ಬಿಜೆಪಿಗೆ ಅನುಕೂಲವಾಗುವ ಫೇಕ್ ನ್ಯೂಸ್‍ಗಳನ್ನು ಹರಡುವುದರಲ್ಲಿ ನಿರತವಾಗಿವೆ.
ಇಂಡಿಯಾಟುಡೇ, ಜಾಗರಣ್ ಮೀಡಿಯಾ ಮತ್ತು ಮೊಬೈಲ್‍ನ್ಯೂಸ್-ಈ ಮೂರು ಕಂಪನಿಗಳ ಪೋರ್ಟಲ್‍ಗಳು ಫ್ಯಾಕ್ಟ್ ಚೆಕಿಂಗ್ ಮಾಡುತ್ತಿದ್ದು ಫೇಸ್‍ಬುಕ್ ಸಹಪಾಠಿಗಳಾಗಿವೆ. ಆದರೆ ಇವೇ ಸಂಸ್ಥೆಗಳು ನಡೆಸುವ ಚಾನೆಲ್, ದಿನಪತ್ರಿಕೆ ಮತ್ತು ವೆಬ್‍ಸೈಟ್‍ಗಳು ಫೇಕು ಸುದ್ದಿಗಳನ್ನು ಪ್ರಸಾರ ಮಾಡುತ್ತವೆ. ಅಂದರೆ ಕಳ್ಳನಿಗೆ ಕಾಯುವ ಕೆಲಸವನ್ನು ಫೇಸ್‍ಬುಕ್ ನೀಡಿದೆ.

‘ಫೇಸ್‍ಬುಕ್‍ನಲ್ಲಿ ಸುಳ್ಳುಸುದ್ದಿಗಳು ಪ್ರಸಾರವಾಗದಂತೆ ತಡೆಯಲು ನಾವು ಬದ್ಧರಾಗಿದ್ದೇವೆ. 2019ರ ಚುನಾವಣೆಯ ಸಂದರ್ಭದ ಹಿನ್ನೆಲೆಯಲ್ಲಿ ನಾವು ಇನ್ನಷ್ಟು ಕ್ರಮಗಳನ್ನು ರೂಪಿಸಿದ್ದು, ಸುಳ್ಳುಸುದ್ದಿಗಳಿಗೆ, ಪ್ರಪಗಂಡಾಗಳಿಗೆ ಕಡಿವಾಣ ಹಾಕಲಿದ್ದೇವೆ….’ -ಫೇಸ್‍ಬುಕ್ ಇಂಡಿಯಾದ ಹೆಡ್ ಮನೀಷ ತಂಡೂರಿ ಕಳೆದ ತಿಂಗಳು ಹೀಗೆ ಉದ್ಘರಿಸಿದ್ದರು. ಆದರೆ ಫೇಸ್‍ಬುಕ್ ಈ ವಿಷಯದಲ್ಲಿ ಗಂಭೀರತೆಯನ್ನು ಹೊಂದಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ. ಹಿಂದೆ ಅದು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಅನುಕುಲವಾಗುವಂತೆ ವರ್ತಿಸಿದ್ದನ್ನೂ ಗಮನಿಸಿದಾಗ ಅದರ ನಡಾವಳಿಯೇ ಸಂಶಯಾತ್ಮಕ ಎನಿಸುತ್ತದೆ.

ಭಾರತದ ಫೇಸ್‍ಬುಕ್ ಅಕೌಂಟುಗಳಲ್ಲಿ ಸುಳ್ಳು ಸುದ್ದಿ ಪತ್ತೆ ಹಚ್ಚಲು, ಆ ಮೂಲಕ ಅಂತಹ ಮೂಲಗಳನ್ನು ನಿರ್ಬಂಧಿಸಲು, ಫೇಸ್‍ಬುಕ್ ಕಳೆದ ತಿಂಗಳು ಮತ್ತೆ 3 ಫ್ಯಾಕ್ಟ್-ಚೆಕಿಂಗ್ ಪೋರ್ಟಲ್‍ಗಳೊಂದಿಗೆ ಒಪ್ಪಂದ ಮಾಡಿಕೊಂಡಿತು. ಅದರಲ್ಲಿ ಮೂರು ಪೋರ್ಟಲ್ ಕಂಪನಿಗಳು ಸ್ವತ: ಸುಳ್ ಸುದ್ದಿಯ ವಕ್ತಾರರೇ ಆಗಿವೆ.

ಫೇಸ್‍ಬುಕ್ ನೇಮಿಸಿಕೊಂಡಿರುವ ಅಂತಹ ಮೂರು ಪ್ರಚಂಡ ಫೇಕುದಾರ್ (ಕಳ್ಳ ಚೌಕಿದಾರ್)ಗಳು ಪುಲ್ವಾಮಾ ಘಟನೆಯ ನಂತರ ವಿಪರೀತ ಸುಳ್ಳುಗಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹಬ್ಬಿಸಿವೆ. ಸತ್ಯ ಗೊತ್ತಾದ ಮೇಲೂ ಅವು ವಿಷಾದಿಸಿಲ್ಲ ಕೂಡ. ಅಂದರೆ, ಸುಳ್ಳು ಎಂದು ಗೊತ್ತಿದ್ದೂ ಅವು ಈ ಕೆಲಸ ಮಾಡಿವೆ.

ಫೇಸ್‍ಬುಕ್‍ನ ಕಾಟಾಚಾರದ ಕ್ರಮ
ತನ್ನ ಬ್ರ್ಯಾಂಡ್‍ನೇಮ್ ಉಳಿಸಿಕೊಳ್ಳಲು ಫ್ಯಾಕ್ಟ್ ಚೆಕಿಂಗ್ ಮಾಡುತ್ತೇವೆ ಎನ್ನುವ ಫೇಸ್‍ಬುಕ್ ನಿಜಕ್ಕೂ ಆ ವಿಷಯದಲ್ಲಿ ಪ್ರಾಮಾಣಿಕವಾಗಿಲ್ಲ. ಸುಳ್ಳೋ, ಸತ್ಯವೋ, ಅದಕ್ಕೆ ತನ್ನ ವ್ಯವಹಾರ ಕ್ಲಿಕ್ ಆಗಬೇಕಷ್ಟೇ.
ಹಿಂದೆ ಅಮೆರಿಕದಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್ ಆಗಿದ್ದ ‘ಸ್ನೋಪ್ಸ್’ನ ಮ್ಯಾನೇಜಿಂಗ್ ಎಡಿಟರ್ ಬ್ರೂಕ್ ಬಿನ್‍ಸೋಸ್ಕಿ ಪ್ರಕಾರ, ‘ನಮ್ಮನ್ನು ಅವರು ‘ಕ್ರೈಸಿಸ್ ಪಿ.ಆರ್. ತರಹ ಬಳಸುತ್ತಾರೆ ಅಷ್ಟೇ… ತಾವು ಫೇಕ್ ನ್ಯೂಸ್ ತಡೆಯಲು ಕ್ರಮ ಕೈಗೊಂಡಿದ್ದೇವೆ ಎಂದು ನಂಬಿಸಲು ಫೇಸ್‍ಬುಕ್ ಈ ನಾಟಕ ಆಡುತ್ತದೆ. ನಿಜಕ್ಕೂ ಫೇಕ್ ತಡೆಯುವಲ್ಲಿ ಅದಕ್ಕೆ ಯಾವ ಆಸಕ್ತಿಯೂ ಇಲ್ಲ….”
(ಆಧಾರ: altnews.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...