Homeಮುಖಪುಟಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

ಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

- Advertisement -
- Advertisement -

| ಮಲ್ಲಿ |
ಕಾಂಗ್ರೆಸ್ಸಿನ ನೂರಾರು ಫೇಸ್‍ಬುಕ್ ಖಾತೆ, ಪುಟಗಳನ್ನು, ಬಿಜೆಪಿಯ ಕೆಲವೇ ಕೆಲವು ಖಾತೆ, ಪುಟಗಳನ್ನು ಫೇಸ್‍ಬುಕ್ ರದ್ದು ಮಾಡಿದೆ. ಫೇಕ್ ನ್ಯೂಸ್ ತಡೆಯುವುದರ ಭಾಗವಾಗಿ ಚುನಾವಣಾ ಹೊತ್ತಲ್ಲಿ ಇಂತಹ ತೋರಿಕೆಯ ಕ್ರಮ ಅದಕ್ಕೆ ಅಗತ್ಯವಾಗಿತ್ತು. ವಿಚಿತ್ರ ಎಂದರೆ ಭಾರತದಲ್ಲಿ ಅದು ಫೇಕ್‍ನ್ಯೂಸ್ ಪತ್ತೆ ಹಚ್ಚುವ ಕ್ರಮೇ ವಿರೋಧಾಭಾಸದಿಂದ ಕೂಡಿದೆ!

ಕಳ್ಳ ಚೌಕಿದಾರನ ಕೈಗೆ ಕಾಯುವ ಕೆಲಸ ಕೊಟ್ಟಂತಾಗಿದೆ. ಫೇಕು ಸುದ್ದಿಗಳನ್ನು ತಡೆಯಲೆಂದು ಫೇಸ್‍ಬುಕ್ ನೇಮಿಸಿಕೊಂಡಿರುವ ಕಂಪನಿಗಳೇ ಫೇಕು ಹರಡುವುದರಲ್ಲಿ, ಅದೂ ಬಿಜೆಪಿಗೆ ಅನುಕೂಲವಾಗುವ ಫೇಕ್ ನ್ಯೂಸ್‍ಗಳನ್ನು ಹರಡುವುದರಲ್ಲಿ ನಿರತವಾಗಿವೆ.
ಇಂಡಿಯಾಟುಡೇ, ಜಾಗರಣ್ ಮೀಡಿಯಾ ಮತ್ತು ಮೊಬೈಲ್‍ನ್ಯೂಸ್-ಈ ಮೂರು ಕಂಪನಿಗಳ ಪೋರ್ಟಲ್‍ಗಳು ಫ್ಯಾಕ್ಟ್ ಚೆಕಿಂಗ್ ಮಾಡುತ್ತಿದ್ದು ಫೇಸ್‍ಬುಕ್ ಸಹಪಾಠಿಗಳಾಗಿವೆ. ಆದರೆ ಇವೇ ಸಂಸ್ಥೆಗಳು ನಡೆಸುವ ಚಾನೆಲ್, ದಿನಪತ್ರಿಕೆ ಮತ್ತು ವೆಬ್‍ಸೈಟ್‍ಗಳು ಫೇಕು ಸುದ್ದಿಗಳನ್ನು ಪ್ರಸಾರ ಮಾಡುತ್ತವೆ. ಅಂದರೆ ಕಳ್ಳನಿಗೆ ಕಾಯುವ ಕೆಲಸವನ್ನು ಫೇಸ್‍ಬುಕ್ ನೀಡಿದೆ.

‘ಫೇಸ್‍ಬುಕ್‍ನಲ್ಲಿ ಸುಳ್ಳುಸುದ್ದಿಗಳು ಪ್ರಸಾರವಾಗದಂತೆ ತಡೆಯಲು ನಾವು ಬದ್ಧರಾಗಿದ್ದೇವೆ. 2019ರ ಚುನಾವಣೆಯ ಸಂದರ್ಭದ ಹಿನ್ನೆಲೆಯಲ್ಲಿ ನಾವು ಇನ್ನಷ್ಟು ಕ್ರಮಗಳನ್ನು ರೂಪಿಸಿದ್ದು, ಸುಳ್ಳುಸುದ್ದಿಗಳಿಗೆ, ಪ್ರಪಗಂಡಾಗಳಿಗೆ ಕಡಿವಾಣ ಹಾಕಲಿದ್ದೇವೆ….’ -ಫೇಸ್‍ಬುಕ್ ಇಂಡಿಯಾದ ಹೆಡ್ ಮನೀಷ ತಂಡೂರಿ ಕಳೆದ ತಿಂಗಳು ಹೀಗೆ ಉದ್ಘರಿಸಿದ್ದರು. ಆದರೆ ಫೇಸ್‍ಬುಕ್ ಈ ವಿಷಯದಲ್ಲಿ ಗಂಭೀರತೆಯನ್ನು ಹೊಂದಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ. ಹಿಂದೆ ಅದು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಅನುಕುಲವಾಗುವಂತೆ ವರ್ತಿಸಿದ್ದನ್ನೂ ಗಮನಿಸಿದಾಗ ಅದರ ನಡಾವಳಿಯೇ ಸಂಶಯಾತ್ಮಕ ಎನಿಸುತ್ತದೆ.

ಭಾರತದ ಫೇಸ್‍ಬುಕ್ ಅಕೌಂಟುಗಳಲ್ಲಿ ಸುಳ್ಳು ಸುದ್ದಿ ಪತ್ತೆ ಹಚ್ಚಲು, ಆ ಮೂಲಕ ಅಂತಹ ಮೂಲಗಳನ್ನು ನಿರ್ಬಂಧಿಸಲು, ಫೇಸ್‍ಬುಕ್ ಕಳೆದ ತಿಂಗಳು ಮತ್ತೆ 3 ಫ್ಯಾಕ್ಟ್-ಚೆಕಿಂಗ್ ಪೋರ್ಟಲ್‍ಗಳೊಂದಿಗೆ ಒಪ್ಪಂದ ಮಾಡಿಕೊಂಡಿತು. ಅದರಲ್ಲಿ ಮೂರು ಪೋರ್ಟಲ್ ಕಂಪನಿಗಳು ಸ್ವತ: ಸುಳ್ ಸುದ್ದಿಯ ವಕ್ತಾರರೇ ಆಗಿವೆ.

ಫೇಸ್‍ಬುಕ್ ನೇಮಿಸಿಕೊಂಡಿರುವ ಅಂತಹ ಮೂರು ಪ್ರಚಂಡ ಫೇಕುದಾರ್ (ಕಳ್ಳ ಚೌಕಿದಾರ್)ಗಳು ಪುಲ್ವಾಮಾ ಘಟನೆಯ ನಂತರ ವಿಪರೀತ ಸುಳ್ಳುಗಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹಬ್ಬಿಸಿವೆ. ಸತ್ಯ ಗೊತ್ತಾದ ಮೇಲೂ ಅವು ವಿಷಾದಿಸಿಲ್ಲ ಕೂಡ. ಅಂದರೆ, ಸುಳ್ಳು ಎಂದು ಗೊತ್ತಿದ್ದೂ ಅವು ಈ ಕೆಲಸ ಮಾಡಿವೆ.

ಫೇಸ್‍ಬುಕ್‍ನ ಕಾಟಾಚಾರದ ಕ್ರಮ
ತನ್ನ ಬ್ರ್ಯಾಂಡ್‍ನೇಮ್ ಉಳಿಸಿಕೊಳ್ಳಲು ಫ್ಯಾಕ್ಟ್ ಚೆಕಿಂಗ್ ಮಾಡುತ್ತೇವೆ ಎನ್ನುವ ಫೇಸ್‍ಬುಕ್ ನಿಜಕ್ಕೂ ಆ ವಿಷಯದಲ್ಲಿ ಪ್ರಾಮಾಣಿಕವಾಗಿಲ್ಲ. ಸುಳ್ಳೋ, ಸತ್ಯವೋ, ಅದಕ್ಕೆ ತನ್ನ ವ್ಯವಹಾರ ಕ್ಲಿಕ್ ಆಗಬೇಕಷ್ಟೇ.
ಹಿಂದೆ ಅಮೆರಿಕದಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್ ಆಗಿದ್ದ ‘ಸ್ನೋಪ್ಸ್’ನ ಮ್ಯಾನೇಜಿಂಗ್ ಎಡಿಟರ್ ಬ್ರೂಕ್ ಬಿನ್‍ಸೋಸ್ಕಿ ಪ್ರಕಾರ, ‘ನಮ್ಮನ್ನು ಅವರು ‘ಕ್ರೈಸಿಸ್ ಪಿ.ಆರ್. ತರಹ ಬಳಸುತ್ತಾರೆ ಅಷ್ಟೇ… ತಾವು ಫೇಕ್ ನ್ಯೂಸ್ ತಡೆಯಲು ಕ್ರಮ ಕೈಗೊಂಡಿದ್ದೇವೆ ಎಂದು ನಂಬಿಸಲು ಫೇಸ್‍ಬುಕ್ ಈ ನಾಟಕ ಆಡುತ್ತದೆ. ನಿಜಕ್ಕೂ ಫೇಕ್ ತಡೆಯುವಲ್ಲಿ ಅದಕ್ಕೆ ಯಾವ ಆಸಕ್ತಿಯೂ ಇಲ್ಲ….”
(ಆಧಾರ: altnews.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...