Homeಮುಖಪುಟಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

ಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

- Advertisement -
- Advertisement -

| ಮಲ್ಲಿ |
ಕಾಂಗ್ರೆಸ್ಸಿನ ನೂರಾರು ಫೇಸ್‍ಬುಕ್ ಖಾತೆ, ಪುಟಗಳನ್ನು, ಬಿಜೆಪಿಯ ಕೆಲವೇ ಕೆಲವು ಖಾತೆ, ಪುಟಗಳನ್ನು ಫೇಸ್‍ಬುಕ್ ರದ್ದು ಮಾಡಿದೆ. ಫೇಕ್ ನ್ಯೂಸ್ ತಡೆಯುವುದರ ಭಾಗವಾಗಿ ಚುನಾವಣಾ ಹೊತ್ತಲ್ಲಿ ಇಂತಹ ತೋರಿಕೆಯ ಕ್ರಮ ಅದಕ್ಕೆ ಅಗತ್ಯವಾಗಿತ್ತು. ವಿಚಿತ್ರ ಎಂದರೆ ಭಾರತದಲ್ಲಿ ಅದು ಫೇಕ್‍ನ್ಯೂಸ್ ಪತ್ತೆ ಹಚ್ಚುವ ಕ್ರಮೇ ವಿರೋಧಾಭಾಸದಿಂದ ಕೂಡಿದೆ!

ಕಳ್ಳ ಚೌಕಿದಾರನ ಕೈಗೆ ಕಾಯುವ ಕೆಲಸ ಕೊಟ್ಟಂತಾಗಿದೆ. ಫೇಕು ಸುದ್ದಿಗಳನ್ನು ತಡೆಯಲೆಂದು ಫೇಸ್‍ಬುಕ್ ನೇಮಿಸಿಕೊಂಡಿರುವ ಕಂಪನಿಗಳೇ ಫೇಕು ಹರಡುವುದರಲ್ಲಿ, ಅದೂ ಬಿಜೆಪಿಗೆ ಅನುಕೂಲವಾಗುವ ಫೇಕ್ ನ್ಯೂಸ್‍ಗಳನ್ನು ಹರಡುವುದರಲ್ಲಿ ನಿರತವಾಗಿವೆ.
ಇಂಡಿಯಾಟುಡೇ, ಜಾಗರಣ್ ಮೀಡಿಯಾ ಮತ್ತು ಮೊಬೈಲ್‍ನ್ಯೂಸ್-ಈ ಮೂರು ಕಂಪನಿಗಳ ಪೋರ್ಟಲ್‍ಗಳು ಫ್ಯಾಕ್ಟ್ ಚೆಕಿಂಗ್ ಮಾಡುತ್ತಿದ್ದು ಫೇಸ್‍ಬುಕ್ ಸಹಪಾಠಿಗಳಾಗಿವೆ. ಆದರೆ ಇವೇ ಸಂಸ್ಥೆಗಳು ನಡೆಸುವ ಚಾನೆಲ್, ದಿನಪತ್ರಿಕೆ ಮತ್ತು ವೆಬ್‍ಸೈಟ್‍ಗಳು ಫೇಕು ಸುದ್ದಿಗಳನ್ನು ಪ್ರಸಾರ ಮಾಡುತ್ತವೆ. ಅಂದರೆ ಕಳ್ಳನಿಗೆ ಕಾಯುವ ಕೆಲಸವನ್ನು ಫೇಸ್‍ಬುಕ್ ನೀಡಿದೆ.

‘ಫೇಸ್‍ಬುಕ್‍ನಲ್ಲಿ ಸುಳ್ಳುಸುದ್ದಿಗಳು ಪ್ರಸಾರವಾಗದಂತೆ ತಡೆಯಲು ನಾವು ಬದ್ಧರಾಗಿದ್ದೇವೆ. 2019ರ ಚುನಾವಣೆಯ ಸಂದರ್ಭದ ಹಿನ್ನೆಲೆಯಲ್ಲಿ ನಾವು ಇನ್ನಷ್ಟು ಕ್ರಮಗಳನ್ನು ರೂಪಿಸಿದ್ದು, ಸುಳ್ಳುಸುದ್ದಿಗಳಿಗೆ, ಪ್ರಪಗಂಡಾಗಳಿಗೆ ಕಡಿವಾಣ ಹಾಕಲಿದ್ದೇವೆ….’ -ಫೇಸ್‍ಬುಕ್ ಇಂಡಿಯಾದ ಹೆಡ್ ಮನೀಷ ತಂಡೂರಿ ಕಳೆದ ತಿಂಗಳು ಹೀಗೆ ಉದ್ಘರಿಸಿದ್ದರು. ಆದರೆ ಫೇಸ್‍ಬುಕ್ ಈ ವಿಷಯದಲ್ಲಿ ಗಂಭೀರತೆಯನ್ನು ಹೊಂದಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ. ಹಿಂದೆ ಅದು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಅನುಕುಲವಾಗುವಂತೆ ವರ್ತಿಸಿದ್ದನ್ನೂ ಗಮನಿಸಿದಾಗ ಅದರ ನಡಾವಳಿಯೇ ಸಂಶಯಾತ್ಮಕ ಎನಿಸುತ್ತದೆ.

ಭಾರತದ ಫೇಸ್‍ಬುಕ್ ಅಕೌಂಟುಗಳಲ್ಲಿ ಸುಳ್ಳು ಸುದ್ದಿ ಪತ್ತೆ ಹಚ್ಚಲು, ಆ ಮೂಲಕ ಅಂತಹ ಮೂಲಗಳನ್ನು ನಿರ್ಬಂಧಿಸಲು, ಫೇಸ್‍ಬುಕ್ ಕಳೆದ ತಿಂಗಳು ಮತ್ತೆ 3 ಫ್ಯಾಕ್ಟ್-ಚೆಕಿಂಗ್ ಪೋರ್ಟಲ್‍ಗಳೊಂದಿಗೆ ಒಪ್ಪಂದ ಮಾಡಿಕೊಂಡಿತು. ಅದರಲ್ಲಿ ಮೂರು ಪೋರ್ಟಲ್ ಕಂಪನಿಗಳು ಸ್ವತ: ಸುಳ್ ಸುದ್ದಿಯ ವಕ್ತಾರರೇ ಆಗಿವೆ.

ಫೇಸ್‍ಬುಕ್ ನೇಮಿಸಿಕೊಂಡಿರುವ ಅಂತಹ ಮೂರು ಪ್ರಚಂಡ ಫೇಕುದಾರ್ (ಕಳ್ಳ ಚೌಕಿದಾರ್)ಗಳು ಪುಲ್ವಾಮಾ ಘಟನೆಯ ನಂತರ ವಿಪರೀತ ಸುಳ್ಳುಗಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹಬ್ಬಿಸಿವೆ. ಸತ್ಯ ಗೊತ್ತಾದ ಮೇಲೂ ಅವು ವಿಷಾದಿಸಿಲ್ಲ ಕೂಡ. ಅಂದರೆ, ಸುಳ್ಳು ಎಂದು ಗೊತ್ತಿದ್ದೂ ಅವು ಈ ಕೆಲಸ ಮಾಡಿವೆ.

ಫೇಸ್‍ಬುಕ್‍ನ ಕಾಟಾಚಾರದ ಕ್ರಮ
ತನ್ನ ಬ್ರ್ಯಾಂಡ್‍ನೇಮ್ ಉಳಿಸಿಕೊಳ್ಳಲು ಫ್ಯಾಕ್ಟ್ ಚೆಕಿಂಗ್ ಮಾಡುತ್ತೇವೆ ಎನ್ನುವ ಫೇಸ್‍ಬುಕ್ ನಿಜಕ್ಕೂ ಆ ವಿಷಯದಲ್ಲಿ ಪ್ರಾಮಾಣಿಕವಾಗಿಲ್ಲ. ಸುಳ್ಳೋ, ಸತ್ಯವೋ, ಅದಕ್ಕೆ ತನ್ನ ವ್ಯವಹಾರ ಕ್ಲಿಕ್ ಆಗಬೇಕಷ್ಟೇ.
ಹಿಂದೆ ಅಮೆರಿಕದಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್ ಆಗಿದ್ದ ‘ಸ್ನೋಪ್ಸ್’ನ ಮ್ಯಾನೇಜಿಂಗ್ ಎಡಿಟರ್ ಬ್ರೂಕ್ ಬಿನ್‍ಸೋಸ್ಕಿ ಪ್ರಕಾರ, ‘ನಮ್ಮನ್ನು ಅವರು ‘ಕ್ರೈಸಿಸ್ ಪಿ.ಆರ್. ತರಹ ಬಳಸುತ್ತಾರೆ ಅಷ್ಟೇ… ತಾವು ಫೇಕ್ ನ್ಯೂಸ್ ತಡೆಯಲು ಕ್ರಮ ಕೈಗೊಂಡಿದ್ದೇವೆ ಎಂದು ನಂಬಿಸಲು ಫೇಸ್‍ಬುಕ್ ಈ ನಾಟಕ ಆಡುತ್ತದೆ. ನಿಜಕ್ಕೂ ಫೇಕ್ ತಡೆಯುವಲ್ಲಿ ಅದಕ್ಕೆ ಯಾವ ಆಸಕ್ತಿಯೂ ಇಲ್ಲ….”
(ಆಧಾರ: altnews.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...