Homeಮುಖಪುಟಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

ಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

- Advertisement -
- Advertisement -

| ಮಲ್ಲಿ |
ಕಾಂಗ್ರೆಸ್ಸಿನ ನೂರಾರು ಫೇಸ್‍ಬುಕ್ ಖಾತೆ, ಪುಟಗಳನ್ನು, ಬಿಜೆಪಿಯ ಕೆಲವೇ ಕೆಲವು ಖಾತೆ, ಪುಟಗಳನ್ನು ಫೇಸ್‍ಬುಕ್ ರದ್ದು ಮಾಡಿದೆ. ಫೇಕ್ ನ್ಯೂಸ್ ತಡೆಯುವುದರ ಭಾಗವಾಗಿ ಚುನಾವಣಾ ಹೊತ್ತಲ್ಲಿ ಇಂತಹ ತೋರಿಕೆಯ ಕ್ರಮ ಅದಕ್ಕೆ ಅಗತ್ಯವಾಗಿತ್ತು. ವಿಚಿತ್ರ ಎಂದರೆ ಭಾರತದಲ್ಲಿ ಅದು ಫೇಕ್‍ನ್ಯೂಸ್ ಪತ್ತೆ ಹಚ್ಚುವ ಕ್ರಮೇ ವಿರೋಧಾಭಾಸದಿಂದ ಕೂಡಿದೆ!

ಕಳ್ಳ ಚೌಕಿದಾರನ ಕೈಗೆ ಕಾಯುವ ಕೆಲಸ ಕೊಟ್ಟಂತಾಗಿದೆ. ಫೇಕು ಸುದ್ದಿಗಳನ್ನು ತಡೆಯಲೆಂದು ಫೇಸ್‍ಬುಕ್ ನೇಮಿಸಿಕೊಂಡಿರುವ ಕಂಪನಿಗಳೇ ಫೇಕು ಹರಡುವುದರಲ್ಲಿ, ಅದೂ ಬಿಜೆಪಿಗೆ ಅನುಕೂಲವಾಗುವ ಫೇಕ್ ನ್ಯೂಸ್‍ಗಳನ್ನು ಹರಡುವುದರಲ್ಲಿ ನಿರತವಾಗಿವೆ.
ಇಂಡಿಯಾಟುಡೇ, ಜಾಗರಣ್ ಮೀಡಿಯಾ ಮತ್ತು ಮೊಬೈಲ್‍ನ್ಯೂಸ್-ಈ ಮೂರು ಕಂಪನಿಗಳ ಪೋರ್ಟಲ್‍ಗಳು ಫ್ಯಾಕ್ಟ್ ಚೆಕಿಂಗ್ ಮಾಡುತ್ತಿದ್ದು ಫೇಸ್‍ಬುಕ್ ಸಹಪಾಠಿಗಳಾಗಿವೆ. ಆದರೆ ಇವೇ ಸಂಸ್ಥೆಗಳು ನಡೆಸುವ ಚಾನೆಲ್, ದಿನಪತ್ರಿಕೆ ಮತ್ತು ವೆಬ್‍ಸೈಟ್‍ಗಳು ಫೇಕು ಸುದ್ದಿಗಳನ್ನು ಪ್ರಸಾರ ಮಾಡುತ್ತವೆ. ಅಂದರೆ ಕಳ್ಳನಿಗೆ ಕಾಯುವ ಕೆಲಸವನ್ನು ಫೇಸ್‍ಬುಕ್ ನೀಡಿದೆ.

‘ಫೇಸ್‍ಬುಕ್‍ನಲ್ಲಿ ಸುಳ್ಳುಸುದ್ದಿಗಳು ಪ್ರಸಾರವಾಗದಂತೆ ತಡೆಯಲು ನಾವು ಬದ್ಧರಾಗಿದ್ದೇವೆ. 2019ರ ಚುನಾವಣೆಯ ಸಂದರ್ಭದ ಹಿನ್ನೆಲೆಯಲ್ಲಿ ನಾವು ಇನ್ನಷ್ಟು ಕ್ರಮಗಳನ್ನು ರೂಪಿಸಿದ್ದು, ಸುಳ್ಳುಸುದ್ದಿಗಳಿಗೆ, ಪ್ರಪಗಂಡಾಗಳಿಗೆ ಕಡಿವಾಣ ಹಾಕಲಿದ್ದೇವೆ….’ -ಫೇಸ್‍ಬುಕ್ ಇಂಡಿಯಾದ ಹೆಡ್ ಮನೀಷ ತಂಡೂರಿ ಕಳೆದ ತಿಂಗಳು ಹೀಗೆ ಉದ್ಘರಿಸಿದ್ದರು. ಆದರೆ ಫೇಸ್‍ಬುಕ್ ಈ ವಿಷಯದಲ್ಲಿ ಗಂಭೀರತೆಯನ್ನು ಹೊಂದಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ. ಹಿಂದೆ ಅದು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಅನುಕುಲವಾಗುವಂತೆ ವರ್ತಿಸಿದ್ದನ್ನೂ ಗಮನಿಸಿದಾಗ ಅದರ ನಡಾವಳಿಯೇ ಸಂಶಯಾತ್ಮಕ ಎನಿಸುತ್ತದೆ.

ಭಾರತದ ಫೇಸ್‍ಬುಕ್ ಅಕೌಂಟುಗಳಲ್ಲಿ ಸುಳ್ಳು ಸುದ್ದಿ ಪತ್ತೆ ಹಚ್ಚಲು, ಆ ಮೂಲಕ ಅಂತಹ ಮೂಲಗಳನ್ನು ನಿರ್ಬಂಧಿಸಲು, ಫೇಸ್‍ಬುಕ್ ಕಳೆದ ತಿಂಗಳು ಮತ್ತೆ 3 ಫ್ಯಾಕ್ಟ್-ಚೆಕಿಂಗ್ ಪೋರ್ಟಲ್‍ಗಳೊಂದಿಗೆ ಒಪ್ಪಂದ ಮಾಡಿಕೊಂಡಿತು. ಅದರಲ್ಲಿ ಮೂರು ಪೋರ್ಟಲ್ ಕಂಪನಿಗಳು ಸ್ವತ: ಸುಳ್ ಸುದ್ದಿಯ ವಕ್ತಾರರೇ ಆಗಿವೆ.

ಫೇಸ್‍ಬುಕ್ ನೇಮಿಸಿಕೊಂಡಿರುವ ಅಂತಹ ಮೂರು ಪ್ರಚಂಡ ಫೇಕುದಾರ್ (ಕಳ್ಳ ಚೌಕಿದಾರ್)ಗಳು ಪುಲ್ವಾಮಾ ಘಟನೆಯ ನಂತರ ವಿಪರೀತ ಸುಳ್ಳುಗಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹಬ್ಬಿಸಿವೆ. ಸತ್ಯ ಗೊತ್ತಾದ ಮೇಲೂ ಅವು ವಿಷಾದಿಸಿಲ್ಲ ಕೂಡ. ಅಂದರೆ, ಸುಳ್ಳು ಎಂದು ಗೊತ್ತಿದ್ದೂ ಅವು ಈ ಕೆಲಸ ಮಾಡಿವೆ.

ಫೇಸ್‍ಬುಕ್‍ನ ಕಾಟಾಚಾರದ ಕ್ರಮ
ತನ್ನ ಬ್ರ್ಯಾಂಡ್‍ನೇಮ್ ಉಳಿಸಿಕೊಳ್ಳಲು ಫ್ಯಾಕ್ಟ್ ಚೆಕಿಂಗ್ ಮಾಡುತ್ತೇವೆ ಎನ್ನುವ ಫೇಸ್‍ಬುಕ್ ನಿಜಕ್ಕೂ ಆ ವಿಷಯದಲ್ಲಿ ಪ್ರಾಮಾಣಿಕವಾಗಿಲ್ಲ. ಸುಳ್ಳೋ, ಸತ್ಯವೋ, ಅದಕ್ಕೆ ತನ್ನ ವ್ಯವಹಾರ ಕ್ಲಿಕ್ ಆಗಬೇಕಷ್ಟೇ.
ಹಿಂದೆ ಅಮೆರಿಕದಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್ ಆಗಿದ್ದ ‘ಸ್ನೋಪ್ಸ್’ನ ಮ್ಯಾನೇಜಿಂಗ್ ಎಡಿಟರ್ ಬ್ರೂಕ್ ಬಿನ್‍ಸೋಸ್ಕಿ ಪ್ರಕಾರ, ‘ನಮ್ಮನ್ನು ಅವರು ‘ಕ್ರೈಸಿಸ್ ಪಿ.ಆರ್. ತರಹ ಬಳಸುತ್ತಾರೆ ಅಷ್ಟೇ… ತಾವು ಫೇಕ್ ನ್ಯೂಸ್ ತಡೆಯಲು ಕ್ರಮ ಕೈಗೊಂಡಿದ್ದೇವೆ ಎಂದು ನಂಬಿಸಲು ಫೇಸ್‍ಬುಕ್ ಈ ನಾಟಕ ಆಡುತ್ತದೆ. ನಿಜಕ್ಕೂ ಫೇಕ್ ತಡೆಯುವಲ್ಲಿ ಅದಕ್ಕೆ ಯಾವ ಆಸಕ್ತಿಯೂ ಇಲ್ಲ….”
(ಆಧಾರ: altnews.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...