Homeಅಂತರಾಷ್ಟ್ರೀಯಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

- Advertisement -
- Advertisement -

2017ರಲ್ಲಿ ನಡೆದ ಮ್ಯಾನ್ಮಾರ್‌ ಹಿಂಸಾಚಾರದಲ್ಲಿ ಪ್ರಮುಖ ಸಾಮಾಜಿಕ ಜಾಲತಾಣ ಫೇಸ್‌ಬುಕ್ ದೊಡ್ಡ ಪಾತ್ರವಹಿಸಿದೆ. ಇದರಿಂದ ಸಾವಿರಾರು ರೋಹಿಂಗ್ಯಾಗಳು ನಿರಾಶ್ರಿತರಾಗಬೇಕಾಯಿತು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪಿಸಿವೆ.

ಆ ರೋಹಿಂಗ್ಯಾ ನಿರಾಶ್ರಿತರಿಗೆ ನ್ಯಾಯ ದೊರಕಿಸಲು ಫೇಸ್‌ಬುಕ್ ಮುಂದಾಗಬೇಕು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆಗಳು ಭಾನುವಾರ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿವೆ.

ವಾಯ್ಸ್ ಆಫ್ ರೋಹಿಂಗ್ಯಾ ಪ್ರತಿನಿಧಿಗಳು, ಅರಾಕನ್ ರೋಹಿಂಗ್ಯಾ ಸೊಸೈಟಿ ಫಾರ್ ಪೀಸ್ ಅಂಡ್ ಹ್ಯೂಮನ್ ರೈಟ್ಸ್, ರೋಹಿಂಗ್ಯಾ ಯೂತ್ ಫಾರ್ ಲೀಗಲ್ ಆಕ್ಷನ್ ಮತ್ತು ರೋಹಿಂಗ್ಯಾ ವುಮೆನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಮತ್ತು ಅವರ ಸಹೋದ್ಯೋಗಿ ಅಲೆಕ್ಸ್ ವರೋಫ್ಕಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಒತ್ತಾಯಿಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ನಡೆದ ಹಿಂಸಾಚಾರದ ನಂತರ ನಾವು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಕಾಕ್ಸ್ ಬಜಾರ್‌ಗೆ ವಲಸೆ ಹೋಗಬೇಕಾಯಿತು. ಈ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ. ಈಗ, ನಮಗೆ ನ್ಯಾಯ ಪಡೆಯಲು ಸಹಾಯ ಮಾಡುವುದು ಮತ್ತು ನಿರಾಶ್ರಿತರ ಶಿಬಿರದಲ್ಲಿ ನಮ್ಮ ಜೀವನವನ್ನು ಸುಧಾರಿಸುವಂತೆ ಮಾಡುವುದು ಫೇಸ್‌ಬುಕ್‌ನ ಕರ್ತವ್ಯ” ಎಂದು ಅವರು ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯ ಕಾರ್ಯವಿಧಾನಗಳು ನಮಗೆ ಸಾಕಷ್ಟು ಸಹಾಯ ಮಾಡಿಲ್ಲ. ಹಾಗಾಗಿ ಫೇಸ್‌ಬುಕ್‌ ತನ್ನಲಿರುವ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

“ಕಾನೂನು ಪ್ರಕರಣಗಳಲ್ಲಿ ಬಳಸಬಹುದಾದ ಮಾಹಿತಿಗಳ ಕುರಿತು ಮ್ಯಾನ್ಮಾರ್‌ನ ಸ್ವತಂತ್ರ ತನಿಖಾ ಕಾರ್ಯವಿಧಾನದೊಂದಿಗೆ ಫೇಸ್‌ಬುಕ್ ಕಾರ್ಯನಿರ್ವಹಿಸುತ್ತಿದೆ ಎಂದು ಸಿಸ್ಸನ್ಸ್ ನಮಗೆ ಮಾಹಿತಿ ನೀಡಿದ್ದಾರೆ” ಎಂದು ರೋಹಿಂಗ್ಯಾ ಪ್ರತಿನಿಧಿಗಳು ಹೇಳಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

“ಹಿಂಸಾತ್ಮಕ ದ್ವೇಷದ ಮಾತನ್ನು ಎದುರಿಸಲು ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ನವೆಂಬರ್ 8 ರಂದು ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಜಾಗರೂಕರಾಗಿದ್ದೇವೆ ಎಂದು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಹೇಳಿದ್ದಾರೆ.

ಯುಎನ್ ನಿರಾಶ್ರಿತರ ಸಂಸ್ಥೆ (UNHRC) ಕಳೆದ ವಾರ ಅಂತರರಾಷ್ಟ್ರೀಯ ಸಮುದಾಯವು ನಿರಾಶ್ರಿತ ಮತ್ತು ಸ್ಥಳಾಂತರಗೊಂಡವರಿಗೆ ತನ್ನ ಸಹಾಯ ನೀಡಬೇಕೆಂದು ಮನವಿ ಮಾಡಿದೆ.

UNHRC ವಕ್ತಾರ ಆಂಡ್ರೆಜ್ ಮಹೇಸಿಕ್, ಯುಎನ್ ನಿರಾಶ್ರಿತರ ಸಂಸ್ಥೆ ಮತ್ತು ಬಾಂಗ್ಲಾದೇಶ ಸರ್ಕಾರವು ಪ್ರತ್ಯೇಕವಾಗಿ 860,000 ರೋಹಿಂಗ್ಯಾ ನಿರಾಶ್ರಿತರನ್ನು ಕಾಕ್ಸ್ ಬಜಾರ್ ವಸಾಹತುಗಳಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ನೋಂದಾಯಿತ 10 ರೋಹಿಂಗ್ಯಾ ನಿರಾಶ್ರಿತರಲ್ಲಿ ದೇಶವು ಈಗ 9ಜನರ ಆತಿಥ್ಯ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...