Homeಅಂತರಾಷ್ಟ್ರೀಯಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

- Advertisement -
- Advertisement -

2017ರಲ್ಲಿ ನಡೆದ ಮ್ಯಾನ್ಮಾರ್‌ ಹಿಂಸಾಚಾರದಲ್ಲಿ ಪ್ರಮುಖ ಸಾಮಾಜಿಕ ಜಾಲತಾಣ ಫೇಸ್‌ಬುಕ್ ದೊಡ್ಡ ಪಾತ್ರವಹಿಸಿದೆ. ಇದರಿಂದ ಸಾವಿರಾರು ರೋಹಿಂಗ್ಯಾಗಳು ನಿರಾಶ್ರಿತರಾಗಬೇಕಾಯಿತು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪಿಸಿವೆ.

ಆ ರೋಹಿಂಗ್ಯಾ ನಿರಾಶ್ರಿತರಿಗೆ ನ್ಯಾಯ ದೊರಕಿಸಲು ಫೇಸ್‌ಬುಕ್ ಮುಂದಾಗಬೇಕು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆಗಳು ಭಾನುವಾರ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿವೆ.

ವಾಯ್ಸ್ ಆಫ್ ರೋಹಿಂಗ್ಯಾ ಪ್ರತಿನಿಧಿಗಳು, ಅರಾಕನ್ ರೋಹಿಂಗ್ಯಾ ಸೊಸೈಟಿ ಫಾರ್ ಪೀಸ್ ಅಂಡ್ ಹ್ಯೂಮನ್ ರೈಟ್ಸ್, ರೋಹಿಂಗ್ಯಾ ಯೂತ್ ಫಾರ್ ಲೀಗಲ್ ಆಕ್ಷನ್ ಮತ್ತು ರೋಹಿಂಗ್ಯಾ ವುಮೆನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಮತ್ತು ಅವರ ಸಹೋದ್ಯೋಗಿ ಅಲೆಕ್ಸ್ ವರೋಫ್ಕಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಒತ್ತಾಯಿಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ನಡೆದ ಹಿಂಸಾಚಾರದ ನಂತರ ನಾವು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಕಾಕ್ಸ್ ಬಜಾರ್‌ಗೆ ವಲಸೆ ಹೋಗಬೇಕಾಯಿತು. ಈ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ. ಈಗ, ನಮಗೆ ನ್ಯಾಯ ಪಡೆಯಲು ಸಹಾಯ ಮಾಡುವುದು ಮತ್ತು ನಿರಾಶ್ರಿತರ ಶಿಬಿರದಲ್ಲಿ ನಮ್ಮ ಜೀವನವನ್ನು ಸುಧಾರಿಸುವಂತೆ ಮಾಡುವುದು ಫೇಸ್‌ಬುಕ್‌ನ ಕರ್ತವ್ಯ” ಎಂದು ಅವರು ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯ ಕಾರ್ಯವಿಧಾನಗಳು ನಮಗೆ ಸಾಕಷ್ಟು ಸಹಾಯ ಮಾಡಿಲ್ಲ. ಹಾಗಾಗಿ ಫೇಸ್‌ಬುಕ್‌ ತನ್ನಲಿರುವ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

“ಕಾನೂನು ಪ್ರಕರಣಗಳಲ್ಲಿ ಬಳಸಬಹುದಾದ ಮಾಹಿತಿಗಳ ಕುರಿತು ಮ್ಯಾನ್ಮಾರ್‌ನ ಸ್ವತಂತ್ರ ತನಿಖಾ ಕಾರ್ಯವಿಧಾನದೊಂದಿಗೆ ಫೇಸ್‌ಬುಕ್ ಕಾರ್ಯನಿರ್ವಹಿಸುತ್ತಿದೆ ಎಂದು ಸಿಸ್ಸನ್ಸ್ ನಮಗೆ ಮಾಹಿತಿ ನೀಡಿದ್ದಾರೆ” ಎಂದು ರೋಹಿಂಗ್ಯಾ ಪ್ರತಿನಿಧಿಗಳು ಹೇಳಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

“ಹಿಂಸಾತ್ಮಕ ದ್ವೇಷದ ಮಾತನ್ನು ಎದುರಿಸಲು ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ನವೆಂಬರ್ 8 ರಂದು ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಜಾಗರೂಕರಾಗಿದ್ದೇವೆ ಎಂದು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಹೇಳಿದ್ದಾರೆ.

ಯುಎನ್ ನಿರಾಶ್ರಿತರ ಸಂಸ್ಥೆ (UNHRC) ಕಳೆದ ವಾರ ಅಂತರರಾಷ್ಟ್ರೀಯ ಸಮುದಾಯವು ನಿರಾಶ್ರಿತ ಮತ್ತು ಸ್ಥಳಾಂತರಗೊಂಡವರಿಗೆ ತನ್ನ ಸಹಾಯ ನೀಡಬೇಕೆಂದು ಮನವಿ ಮಾಡಿದೆ.

UNHRC ವಕ್ತಾರ ಆಂಡ್ರೆಜ್ ಮಹೇಸಿಕ್, ಯುಎನ್ ನಿರಾಶ್ರಿತರ ಸಂಸ್ಥೆ ಮತ್ತು ಬಾಂಗ್ಲಾದೇಶ ಸರ್ಕಾರವು ಪ್ರತ್ಯೇಕವಾಗಿ 860,000 ರೋಹಿಂಗ್ಯಾ ನಿರಾಶ್ರಿತರನ್ನು ಕಾಕ್ಸ್ ಬಜಾರ್ ವಸಾಹತುಗಳಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ನೋಂದಾಯಿತ 10 ರೋಹಿಂಗ್ಯಾ ನಿರಾಶ್ರಿತರಲ್ಲಿ ದೇಶವು ಈಗ 9ಜನರ ಆತಿಥ್ಯ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...