Homeಅಂತರಾಷ್ಟ್ರೀಯಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

- Advertisement -
- Advertisement -

2017ರಲ್ಲಿ ನಡೆದ ಮ್ಯಾನ್ಮಾರ್‌ ಹಿಂಸಾಚಾರದಲ್ಲಿ ಪ್ರಮುಖ ಸಾಮಾಜಿಕ ಜಾಲತಾಣ ಫೇಸ್‌ಬುಕ್ ದೊಡ್ಡ ಪಾತ್ರವಹಿಸಿದೆ. ಇದರಿಂದ ಸಾವಿರಾರು ರೋಹಿಂಗ್ಯಾಗಳು ನಿರಾಶ್ರಿತರಾಗಬೇಕಾಯಿತು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪಿಸಿವೆ.

ಆ ರೋಹಿಂಗ್ಯಾ ನಿರಾಶ್ರಿತರಿಗೆ ನ್ಯಾಯ ದೊರಕಿಸಲು ಫೇಸ್‌ಬುಕ್ ಮುಂದಾಗಬೇಕು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆಗಳು ಭಾನುವಾರ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿವೆ.

ವಾಯ್ಸ್ ಆಫ್ ರೋಹಿಂಗ್ಯಾ ಪ್ರತಿನಿಧಿಗಳು, ಅರಾಕನ್ ರೋಹಿಂಗ್ಯಾ ಸೊಸೈಟಿ ಫಾರ್ ಪೀಸ್ ಅಂಡ್ ಹ್ಯೂಮನ್ ರೈಟ್ಸ್, ರೋಹಿಂಗ್ಯಾ ಯೂತ್ ಫಾರ್ ಲೀಗಲ್ ಆಕ್ಷನ್ ಮತ್ತು ರೋಹಿಂಗ್ಯಾ ವುಮೆನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಮತ್ತು ಅವರ ಸಹೋದ್ಯೋಗಿ ಅಲೆಕ್ಸ್ ವರೋಫ್ಕಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಒತ್ತಾಯಿಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ನಡೆದ ಹಿಂಸಾಚಾರದ ನಂತರ ನಾವು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಕಾಕ್ಸ್ ಬಜಾರ್‌ಗೆ ವಲಸೆ ಹೋಗಬೇಕಾಯಿತು. ಈ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ. ಈಗ, ನಮಗೆ ನ್ಯಾಯ ಪಡೆಯಲು ಸಹಾಯ ಮಾಡುವುದು ಮತ್ತು ನಿರಾಶ್ರಿತರ ಶಿಬಿರದಲ್ಲಿ ನಮ್ಮ ಜೀವನವನ್ನು ಸುಧಾರಿಸುವಂತೆ ಮಾಡುವುದು ಫೇಸ್‌ಬುಕ್‌ನ ಕರ್ತವ್ಯ” ಎಂದು ಅವರು ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯ ಕಾರ್ಯವಿಧಾನಗಳು ನಮಗೆ ಸಾಕಷ್ಟು ಸಹಾಯ ಮಾಡಿಲ್ಲ. ಹಾಗಾಗಿ ಫೇಸ್‌ಬುಕ್‌ ತನ್ನಲಿರುವ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

“ಕಾನೂನು ಪ್ರಕರಣಗಳಲ್ಲಿ ಬಳಸಬಹುದಾದ ಮಾಹಿತಿಗಳ ಕುರಿತು ಮ್ಯಾನ್ಮಾರ್‌ನ ಸ್ವತಂತ್ರ ತನಿಖಾ ಕಾರ್ಯವಿಧಾನದೊಂದಿಗೆ ಫೇಸ್‌ಬುಕ್ ಕಾರ್ಯನಿರ್ವಹಿಸುತ್ತಿದೆ ಎಂದು ಸಿಸ್ಸನ್ಸ್ ನಮಗೆ ಮಾಹಿತಿ ನೀಡಿದ್ದಾರೆ” ಎಂದು ರೋಹಿಂಗ್ಯಾ ಪ್ರತಿನಿಧಿಗಳು ಹೇಳಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

“ಹಿಂಸಾತ್ಮಕ ದ್ವೇಷದ ಮಾತನ್ನು ಎದುರಿಸಲು ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ನವೆಂಬರ್ 8 ರಂದು ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಜಾಗರೂಕರಾಗಿದ್ದೇವೆ ಎಂದು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಹೇಳಿದ್ದಾರೆ.

ಯುಎನ್ ನಿರಾಶ್ರಿತರ ಸಂಸ್ಥೆ (UNHRC) ಕಳೆದ ವಾರ ಅಂತರರಾಷ್ಟ್ರೀಯ ಸಮುದಾಯವು ನಿರಾಶ್ರಿತ ಮತ್ತು ಸ್ಥಳಾಂತರಗೊಂಡವರಿಗೆ ತನ್ನ ಸಹಾಯ ನೀಡಬೇಕೆಂದು ಮನವಿ ಮಾಡಿದೆ.

UNHRC ವಕ್ತಾರ ಆಂಡ್ರೆಜ್ ಮಹೇಸಿಕ್, ಯುಎನ್ ನಿರಾಶ್ರಿತರ ಸಂಸ್ಥೆ ಮತ್ತು ಬಾಂಗ್ಲಾದೇಶ ಸರ್ಕಾರವು ಪ್ರತ್ಯೇಕವಾಗಿ 860,000 ರೋಹಿಂಗ್ಯಾ ನಿರಾಶ್ರಿತರನ್ನು ಕಾಕ್ಸ್ ಬಜಾರ್ ವಸಾಹತುಗಳಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ನೋಂದಾಯಿತ 10 ರೋಹಿಂಗ್ಯಾ ನಿರಾಶ್ರಿತರಲ್ಲಿ ದೇಶವು ಈಗ 9ಜನರ ಆತಿಥ್ಯ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...