Homeಅಂತರಾಷ್ಟ್ರೀಯಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

- Advertisement -
- Advertisement -

2017ರಲ್ಲಿ ನಡೆದ ಮ್ಯಾನ್ಮಾರ್‌ ಹಿಂಸಾಚಾರದಲ್ಲಿ ಪ್ರಮುಖ ಸಾಮಾಜಿಕ ಜಾಲತಾಣ ಫೇಸ್‌ಬುಕ್ ದೊಡ್ಡ ಪಾತ್ರವಹಿಸಿದೆ. ಇದರಿಂದ ಸಾವಿರಾರು ರೋಹಿಂಗ್ಯಾಗಳು ನಿರಾಶ್ರಿತರಾಗಬೇಕಾಯಿತು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪಿಸಿವೆ.

ಆ ರೋಹಿಂಗ್ಯಾ ನಿರಾಶ್ರಿತರಿಗೆ ನ್ಯಾಯ ದೊರಕಿಸಲು ಫೇಸ್‌ಬುಕ್ ಮುಂದಾಗಬೇಕು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆಗಳು ಭಾನುವಾರ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿವೆ.

ವಾಯ್ಸ್ ಆಫ್ ರೋಹಿಂಗ್ಯಾ ಪ್ರತಿನಿಧಿಗಳು, ಅರಾಕನ್ ರೋಹಿಂಗ್ಯಾ ಸೊಸೈಟಿ ಫಾರ್ ಪೀಸ್ ಅಂಡ್ ಹ್ಯೂಮನ್ ರೈಟ್ಸ್, ರೋಹಿಂಗ್ಯಾ ಯೂತ್ ಫಾರ್ ಲೀಗಲ್ ಆಕ್ಷನ್ ಮತ್ತು ರೋಹಿಂಗ್ಯಾ ವುಮೆನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಮತ್ತು ಅವರ ಸಹೋದ್ಯೋಗಿ ಅಲೆಕ್ಸ್ ವರೋಫ್ಕಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಒತ್ತಾಯಿಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ನಡೆದ ಹಿಂಸಾಚಾರದ ನಂತರ ನಾವು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಕಾಕ್ಸ್ ಬಜಾರ್‌ಗೆ ವಲಸೆ ಹೋಗಬೇಕಾಯಿತು. ಈ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ. ಈಗ, ನಮಗೆ ನ್ಯಾಯ ಪಡೆಯಲು ಸಹಾಯ ಮಾಡುವುದು ಮತ್ತು ನಿರಾಶ್ರಿತರ ಶಿಬಿರದಲ್ಲಿ ನಮ್ಮ ಜೀವನವನ್ನು ಸುಧಾರಿಸುವಂತೆ ಮಾಡುವುದು ಫೇಸ್‌ಬುಕ್‌ನ ಕರ್ತವ್ಯ” ಎಂದು ಅವರು ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯ ಕಾರ್ಯವಿಧಾನಗಳು ನಮಗೆ ಸಾಕಷ್ಟು ಸಹಾಯ ಮಾಡಿಲ್ಲ. ಹಾಗಾಗಿ ಫೇಸ್‌ಬುಕ್‌ ತನ್ನಲಿರುವ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

“ಕಾನೂನು ಪ್ರಕರಣಗಳಲ್ಲಿ ಬಳಸಬಹುದಾದ ಮಾಹಿತಿಗಳ ಕುರಿತು ಮ್ಯಾನ್ಮಾರ್‌ನ ಸ್ವತಂತ್ರ ತನಿಖಾ ಕಾರ್ಯವಿಧಾನದೊಂದಿಗೆ ಫೇಸ್‌ಬುಕ್ ಕಾರ್ಯನಿರ್ವಹಿಸುತ್ತಿದೆ ಎಂದು ಸಿಸ್ಸನ್ಸ್ ನಮಗೆ ಮಾಹಿತಿ ನೀಡಿದ್ದಾರೆ” ಎಂದು ರೋಹಿಂಗ್ಯಾ ಪ್ರತಿನಿಧಿಗಳು ಹೇಳಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

“ಹಿಂಸಾತ್ಮಕ ದ್ವೇಷದ ಮಾತನ್ನು ಎದುರಿಸಲು ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ನವೆಂಬರ್ 8 ರಂದು ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಜಾಗರೂಕರಾಗಿದ್ದೇವೆ ಎಂದು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಹೇಳಿದ್ದಾರೆ.

ಯುಎನ್ ನಿರಾಶ್ರಿತರ ಸಂಸ್ಥೆ (UNHRC) ಕಳೆದ ವಾರ ಅಂತರರಾಷ್ಟ್ರೀಯ ಸಮುದಾಯವು ನಿರಾಶ್ರಿತ ಮತ್ತು ಸ್ಥಳಾಂತರಗೊಂಡವರಿಗೆ ತನ್ನ ಸಹಾಯ ನೀಡಬೇಕೆಂದು ಮನವಿ ಮಾಡಿದೆ.

UNHRC ವಕ್ತಾರ ಆಂಡ್ರೆಜ್ ಮಹೇಸಿಕ್, ಯುಎನ್ ನಿರಾಶ್ರಿತರ ಸಂಸ್ಥೆ ಮತ್ತು ಬಾಂಗ್ಲಾದೇಶ ಸರ್ಕಾರವು ಪ್ರತ್ಯೇಕವಾಗಿ 860,000 ರೋಹಿಂಗ್ಯಾ ನಿರಾಶ್ರಿತರನ್ನು ಕಾಕ್ಸ್ ಬಜಾರ್ ವಸಾಹತುಗಳಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ನೋಂದಾಯಿತ 10 ರೋಹಿಂಗ್ಯಾ ನಿರಾಶ್ರಿತರಲ್ಲಿ ದೇಶವು ಈಗ 9ಜನರ ಆತಿಥ್ಯ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...