Homeಅಂತರಾಷ್ಟ್ರೀಯಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

- Advertisement -
- Advertisement -

2017ರಲ್ಲಿ ನಡೆದ ಮ್ಯಾನ್ಮಾರ್‌ ಹಿಂಸಾಚಾರದಲ್ಲಿ ಪ್ರಮುಖ ಸಾಮಾಜಿಕ ಜಾಲತಾಣ ಫೇಸ್‌ಬುಕ್ ದೊಡ್ಡ ಪಾತ್ರವಹಿಸಿದೆ. ಇದರಿಂದ ಸಾವಿರಾರು ರೋಹಿಂಗ್ಯಾಗಳು ನಿರಾಶ್ರಿತರಾಗಬೇಕಾಯಿತು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪಿಸಿವೆ.

ಆ ರೋಹಿಂಗ್ಯಾ ನಿರಾಶ್ರಿತರಿಗೆ ನ್ಯಾಯ ದೊರಕಿಸಲು ಫೇಸ್‌ಬುಕ್ ಮುಂದಾಗಬೇಕು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆಗಳು ಭಾನುವಾರ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿವೆ.

ವಾಯ್ಸ್ ಆಫ್ ರೋಹಿಂಗ್ಯಾ ಪ್ರತಿನಿಧಿಗಳು, ಅರಾಕನ್ ರೋಹಿಂಗ್ಯಾ ಸೊಸೈಟಿ ಫಾರ್ ಪೀಸ್ ಅಂಡ್ ಹ್ಯೂಮನ್ ರೈಟ್ಸ್, ರೋಹಿಂಗ್ಯಾ ಯೂತ್ ಫಾರ್ ಲೀಗಲ್ ಆಕ್ಷನ್ ಮತ್ತು ರೋಹಿಂಗ್ಯಾ ವುಮೆನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಮತ್ತು ಅವರ ಸಹೋದ್ಯೋಗಿ ಅಲೆಕ್ಸ್ ವರೋಫ್ಕಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಒತ್ತಾಯಿಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ನಡೆದ ಹಿಂಸಾಚಾರದ ನಂತರ ನಾವು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಕಾಕ್ಸ್ ಬಜಾರ್‌ಗೆ ವಲಸೆ ಹೋಗಬೇಕಾಯಿತು. ಈ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ. ಈಗ, ನಮಗೆ ನ್ಯಾಯ ಪಡೆಯಲು ಸಹಾಯ ಮಾಡುವುದು ಮತ್ತು ನಿರಾಶ್ರಿತರ ಶಿಬಿರದಲ್ಲಿ ನಮ್ಮ ಜೀವನವನ್ನು ಸುಧಾರಿಸುವಂತೆ ಮಾಡುವುದು ಫೇಸ್‌ಬುಕ್‌ನ ಕರ್ತವ್ಯ” ಎಂದು ಅವರು ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯ ಕಾರ್ಯವಿಧಾನಗಳು ನಮಗೆ ಸಾಕಷ್ಟು ಸಹಾಯ ಮಾಡಿಲ್ಲ. ಹಾಗಾಗಿ ಫೇಸ್‌ಬುಕ್‌ ತನ್ನಲಿರುವ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

“ಕಾನೂನು ಪ್ರಕರಣಗಳಲ್ಲಿ ಬಳಸಬಹುದಾದ ಮಾಹಿತಿಗಳ ಕುರಿತು ಮ್ಯಾನ್ಮಾರ್‌ನ ಸ್ವತಂತ್ರ ತನಿಖಾ ಕಾರ್ಯವಿಧಾನದೊಂದಿಗೆ ಫೇಸ್‌ಬುಕ್ ಕಾರ್ಯನಿರ್ವಹಿಸುತ್ತಿದೆ ಎಂದು ಸಿಸ್ಸನ್ಸ್ ನಮಗೆ ಮಾಹಿತಿ ನೀಡಿದ್ದಾರೆ” ಎಂದು ರೋಹಿಂಗ್ಯಾ ಪ್ರತಿನಿಧಿಗಳು ಹೇಳಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

“ಹಿಂಸಾತ್ಮಕ ದ್ವೇಷದ ಮಾತನ್ನು ಎದುರಿಸಲು ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ನವೆಂಬರ್ 8 ರಂದು ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಜಾಗರೂಕರಾಗಿದ್ದೇವೆ ಎಂದು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಹೇಳಿದ್ದಾರೆ.

ಯುಎನ್ ನಿರಾಶ್ರಿತರ ಸಂಸ್ಥೆ (UNHRC) ಕಳೆದ ವಾರ ಅಂತರರಾಷ್ಟ್ರೀಯ ಸಮುದಾಯವು ನಿರಾಶ್ರಿತ ಮತ್ತು ಸ್ಥಳಾಂತರಗೊಂಡವರಿಗೆ ತನ್ನ ಸಹಾಯ ನೀಡಬೇಕೆಂದು ಮನವಿ ಮಾಡಿದೆ.

UNHRC ವಕ್ತಾರ ಆಂಡ್ರೆಜ್ ಮಹೇಸಿಕ್, ಯುಎನ್ ನಿರಾಶ್ರಿತರ ಸಂಸ್ಥೆ ಮತ್ತು ಬಾಂಗ್ಲಾದೇಶ ಸರ್ಕಾರವು ಪ್ರತ್ಯೇಕವಾಗಿ 860,000 ರೋಹಿಂಗ್ಯಾ ನಿರಾಶ್ರಿತರನ್ನು ಕಾಕ್ಸ್ ಬಜಾರ್ ವಸಾಹತುಗಳಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ನೋಂದಾಯಿತ 10 ರೋಹಿಂಗ್ಯಾ ನಿರಾಶ್ರಿತರಲ್ಲಿ ದೇಶವು ಈಗ 9ಜನರ ಆತಿಥ್ಯ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....