Homeಅಂತರಾಷ್ಟ್ರೀಯಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

- Advertisement -
- Advertisement -

2017ರಲ್ಲಿ ನಡೆದ ಮ್ಯಾನ್ಮಾರ್‌ ಹಿಂಸಾಚಾರದಲ್ಲಿ ಪ್ರಮುಖ ಸಾಮಾಜಿಕ ಜಾಲತಾಣ ಫೇಸ್‌ಬುಕ್ ದೊಡ್ಡ ಪಾತ್ರವಹಿಸಿದೆ. ಇದರಿಂದ ಸಾವಿರಾರು ರೋಹಿಂಗ್ಯಾಗಳು ನಿರಾಶ್ರಿತರಾಗಬೇಕಾಯಿತು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪಿಸಿವೆ.

ಆ ರೋಹಿಂಗ್ಯಾ ನಿರಾಶ್ರಿತರಿಗೆ ನ್ಯಾಯ ದೊರಕಿಸಲು ಫೇಸ್‌ಬುಕ್ ಮುಂದಾಗಬೇಕು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆಗಳು ಭಾನುವಾರ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿವೆ.

ವಾಯ್ಸ್ ಆಫ್ ರೋಹಿಂಗ್ಯಾ ಪ್ರತಿನಿಧಿಗಳು, ಅರಾಕನ್ ರೋಹಿಂಗ್ಯಾ ಸೊಸೈಟಿ ಫಾರ್ ಪೀಸ್ ಅಂಡ್ ಹ್ಯೂಮನ್ ರೈಟ್ಸ್, ರೋಹಿಂಗ್ಯಾ ಯೂತ್ ಫಾರ್ ಲೀಗಲ್ ಆಕ್ಷನ್ ಮತ್ತು ರೋಹಿಂಗ್ಯಾ ವುಮೆನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಮತ್ತು ಅವರ ಸಹೋದ್ಯೋಗಿ ಅಲೆಕ್ಸ್ ವರೋಫ್ಕಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಒತ್ತಾಯಿಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ನಡೆದ ಹಿಂಸಾಚಾರದ ನಂತರ ನಾವು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಕಾಕ್ಸ್ ಬಜಾರ್‌ಗೆ ವಲಸೆ ಹೋಗಬೇಕಾಯಿತು. ಈ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ. ಈಗ, ನಮಗೆ ನ್ಯಾಯ ಪಡೆಯಲು ಸಹಾಯ ಮಾಡುವುದು ಮತ್ತು ನಿರಾಶ್ರಿತರ ಶಿಬಿರದಲ್ಲಿ ನಮ್ಮ ಜೀವನವನ್ನು ಸುಧಾರಿಸುವಂತೆ ಮಾಡುವುದು ಫೇಸ್‌ಬುಕ್‌ನ ಕರ್ತವ್ಯ” ಎಂದು ಅವರು ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯ ಕಾರ್ಯವಿಧಾನಗಳು ನಮಗೆ ಸಾಕಷ್ಟು ಸಹಾಯ ಮಾಡಿಲ್ಲ. ಹಾಗಾಗಿ ಫೇಸ್‌ಬುಕ್‌ ತನ್ನಲಿರುವ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

“ಕಾನೂನು ಪ್ರಕರಣಗಳಲ್ಲಿ ಬಳಸಬಹುದಾದ ಮಾಹಿತಿಗಳ ಕುರಿತು ಮ್ಯಾನ್ಮಾರ್‌ನ ಸ್ವತಂತ್ರ ತನಿಖಾ ಕಾರ್ಯವಿಧಾನದೊಂದಿಗೆ ಫೇಸ್‌ಬುಕ್ ಕಾರ್ಯನಿರ್ವಹಿಸುತ್ತಿದೆ ಎಂದು ಸಿಸ್ಸನ್ಸ್ ನಮಗೆ ಮಾಹಿತಿ ನೀಡಿದ್ದಾರೆ” ಎಂದು ರೋಹಿಂಗ್ಯಾ ಪ್ರತಿನಿಧಿಗಳು ಹೇಳಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

“ಹಿಂಸಾತ್ಮಕ ದ್ವೇಷದ ಮಾತನ್ನು ಎದುರಿಸಲು ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ನವೆಂಬರ್ 8 ರಂದು ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಜಾಗರೂಕರಾಗಿದ್ದೇವೆ ಎಂದು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಹೇಳಿದ್ದಾರೆ.

ಯುಎನ್ ನಿರಾಶ್ರಿತರ ಸಂಸ್ಥೆ (UNHRC) ಕಳೆದ ವಾರ ಅಂತರರಾಷ್ಟ್ರೀಯ ಸಮುದಾಯವು ನಿರಾಶ್ರಿತ ಮತ್ತು ಸ್ಥಳಾಂತರಗೊಂಡವರಿಗೆ ತನ್ನ ಸಹಾಯ ನೀಡಬೇಕೆಂದು ಮನವಿ ಮಾಡಿದೆ.

UNHRC ವಕ್ತಾರ ಆಂಡ್ರೆಜ್ ಮಹೇಸಿಕ್, ಯುಎನ್ ನಿರಾಶ್ರಿತರ ಸಂಸ್ಥೆ ಮತ್ತು ಬಾಂಗ್ಲಾದೇಶ ಸರ್ಕಾರವು ಪ್ರತ್ಯೇಕವಾಗಿ 860,000 ರೋಹಿಂಗ್ಯಾ ನಿರಾಶ್ರಿತರನ್ನು ಕಾಕ್ಸ್ ಬಜಾರ್ ವಸಾಹತುಗಳಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ನೋಂದಾಯಿತ 10 ರೋಹಿಂಗ್ಯಾ ನಿರಾಶ್ರಿತರಲ್ಲಿ ದೇಶವು ಈಗ 9ಜನರ ಆತಿಥ್ಯ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...