Homeಅಂತರಾಷ್ಟ್ರೀಯಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

- Advertisement -
- Advertisement -

2017ರಲ್ಲಿ ನಡೆದ ಮ್ಯಾನ್ಮಾರ್‌ ಹಿಂಸಾಚಾರದಲ್ಲಿ ಪ್ರಮುಖ ಸಾಮಾಜಿಕ ಜಾಲತಾಣ ಫೇಸ್‌ಬುಕ್ ದೊಡ್ಡ ಪಾತ್ರವಹಿಸಿದೆ. ಇದರಿಂದ ಸಾವಿರಾರು ರೋಹಿಂಗ್ಯಾಗಳು ನಿರಾಶ್ರಿತರಾಗಬೇಕಾಯಿತು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪಿಸಿವೆ.

ಆ ರೋಹಿಂಗ್ಯಾ ನಿರಾಶ್ರಿತರಿಗೆ ನ್ಯಾಯ ದೊರಕಿಸಲು ಫೇಸ್‌ಬುಕ್ ಮುಂದಾಗಬೇಕು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆಗಳು ಭಾನುವಾರ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿವೆ.

ವಾಯ್ಸ್ ಆಫ್ ರೋಹಿಂಗ್ಯಾ ಪ್ರತಿನಿಧಿಗಳು, ಅರಾಕನ್ ರೋಹಿಂಗ್ಯಾ ಸೊಸೈಟಿ ಫಾರ್ ಪೀಸ್ ಅಂಡ್ ಹ್ಯೂಮನ್ ರೈಟ್ಸ್, ರೋಹಿಂಗ್ಯಾ ಯೂತ್ ಫಾರ್ ಲೀಗಲ್ ಆಕ್ಷನ್ ಮತ್ತು ರೋಹಿಂಗ್ಯಾ ವುಮೆನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಮತ್ತು ಅವರ ಸಹೋದ್ಯೋಗಿ ಅಲೆಕ್ಸ್ ವರೋಫ್ಕಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಒತ್ತಾಯಿಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ನಡೆದ ಹಿಂಸಾಚಾರದ ನಂತರ ನಾವು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಕಾಕ್ಸ್ ಬಜಾರ್‌ಗೆ ವಲಸೆ ಹೋಗಬೇಕಾಯಿತು. ಈ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ. ಈಗ, ನಮಗೆ ನ್ಯಾಯ ಪಡೆಯಲು ಸಹಾಯ ಮಾಡುವುದು ಮತ್ತು ನಿರಾಶ್ರಿತರ ಶಿಬಿರದಲ್ಲಿ ನಮ್ಮ ಜೀವನವನ್ನು ಸುಧಾರಿಸುವಂತೆ ಮಾಡುವುದು ಫೇಸ್‌ಬುಕ್‌ನ ಕರ್ತವ್ಯ” ಎಂದು ಅವರು ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯ ಕಾರ್ಯವಿಧಾನಗಳು ನಮಗೆ ಸಾಕಷ್ಟು ಸಹಾಯ ಮಾಡಿಲ್ಲ. ಹಾಗಾಗಿ ಫೇಸ್‌ಬುಕ್‌ ತನ್ನಲಿರುವ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

“ಕಾನೂನು ಪ್ರಕರಣಗಳಲ್ಲಿ ಬಳಸಬಹುದಾದ ಮಾಹಿತಿಗಳ ಕುರಿತು ಮ್ಯಾನ್ಮಾರ್‌ನ ಸ್ವತಂತ್ರ ತನಿಖಾ ಕಾರ್ಯವಿಧಾನದೊಂದಿಗೆ ಫೇಸ್‌ಬುಕ್ ಕಾರ್ಯನಿರ್ವಹಿಸುತ್ತಿದೆ ಎಂದು ಸಿಸ್ಸನ್ಸ್ ನಮಗೆ ಮಾಹಿತಿ ನೀಡಿದ್ದಾರೆ” ಎಂದು ರೋಹಿಂಗ್ಯಾ ಪ್ರತಿನಿಧಿಗಳು ಹೇಳಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

“ಹಿಂಸಾತ್ಮಕ ದ್ವೇಷದ ಮಾತನ್ನು ಎದುರಿಸಲು ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ನವೆಂಬರ್ 8 ರಂದು ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಜಾಗರೂಕರಾಗಿದ್ದೇವೆ ಎಂದು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಹೇಳಿದ್ದಾರೆ.

ಯುಎನ್ ನಿರಾಶ್ರಿತರ ಸಂಸ್ಥೆ (UNHRC) ಕಳೆದ ವಾರ ಅಂತರರಾಷ್ಟ್ರೀಯ ಸಮುದಾಯವು ನಿರಾಶ್ರಿತ ಮತ್ತು ಸ್ಥಳಾಂತರಗೊಂಡವರಿಗೆ ತನ್ನ ಸಹಾಯ ನೀಡಬೇಕೆಂದು ಮನವಿ ಮಾಡಿದೆ.

UNHRC ವಕ್ತಾರ ಆಂಡ್ರೆಜ್ ಮಹೇಸಿಕ್, ಯುಎನ್ ನಿರಾಶ್ರಿತರ ಸಂಸ್ಥೆ ಮತ್ತು ಬಾಂಗ್ಲಾದೇಶ ಸರ್ಕಾರವು ಪ್ರತ್ಯೇಕವಾಗಿ 860,000 ರೋಹಿಂಗ್ಯಾ ನಿರಾಶ್ರಿತರನ್ನು ಕಾಕ್ಸ್ ಬಜಾರ್ ವಸಾಹತುಗಳಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ನೋಂದಾಯಿತ 10 ರೋಹಿಂಗ್ಯಾ ನಿರಾಶ್ರಿತರಲ್ಲಿ ದೇಶವು ಈಗ 9ಜನರ ಆತಿಥ್ಯ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...