HomeUncategorizedದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಫೇಸ್‌ಬುಕ್ ಇಂಡಿಯಾ

ದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಫೇಸ್‌ಬುಕ್ ಇಂಡಿಯಾ

ಈ ಸಮನ್ಸ್‌ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ನಾವು ಸಾರ್ವಜನಿಕ ಸೇವಕರಲ್ಲ. ನಮ್ಮದು ಅಮೇರಿಕನ್ ಕಂಪನಿ- ಫೇಸ್‌ಬುಕ್ ಇಂಡಿಯಾ

- Advertisement -
- Advertisement -

ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಫೇಸ್‌ಬುಕ್ ಇಂಡಿಯಾಗೆ ದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ನೋಟೀಸ್ ಅನ್ನು ಪ್ರಶ್ನಿಸಿ ಫೇಸ್‌ಬುಕ್ ಇಂಡಿಯಾದ ಉಪಾಧ್ಯಕ್ಷರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ, ದೆಹಲಿ ಶಾಸಕಾಂಗ ಸಮಿತಿಯು ಬುಧವಾರದ ವಿಚಾರಣಾ ಸಭೆಯನ್ನು ರದ್ದುಗೊಳಿಸಿದೆ.

ಫೇಸ್‌ಬುಕ್ ಇಂಡಿಯಾ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್, ದೆಹಲಿ ವಿಧಾನಸಭೆಯ ಕಾರ್ಯದರ್ಶಿ, ಕಾನೂನು ಮತ್ತು ನ್ಯಾಯ ಸಚಿವಾಲಯ, ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವಾಲಯ ಹಾಗೂ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ನೋಟೀಸ್ ನೀಡಿದೆ.

ದೆಹಲಿ ಶಾಸಕಾಂಗ ಸಮಿತಿಯು ತನ್ನನ್ನು ವಿಚಾರಣೆಗೆ ಕರೆಸಿಕೊಳ್ಳದಂತೆ ಕೋರಿ ಅಜಿತ್ ಮೋಹನ್ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಸುಪ್ರೀಂ, “ಮುಂದಿನ ವಿಚಾರಣೆಯ ದಿನಾಂಕವಾದ ಅಕ್ಟೋಬರ್ 15 ರವರೆಗೆ ಕಾರ್ಯನಿರ್ವಾಹಕರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು” ಎಂದು ದೆಹಲಿ ಸದನ ಸಮಿತಿಗೆ ಹೇಳಿದೆ. ಇದಕ್ಕೆ ಒಪ್ಪಿದ ಸಮಿತಿ, “ಅವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದೆ.

ಸಮಿತಿಯು ತನ್ನ ಮುಂದೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದ ನಂತರ ಮೋಹನ್ ಸುಪ್ರೀಂ ಕೋರ್ಟ್‌ ಮೊರೆ ಹೋದರು. ಮೊದಲ ನೋಟಿಸ್ ನಂತರ ಅವರು ಸಮಿತಿಯ ಮುಂದೆ ಹಾಜರಾಗದಿದ್ದಾಗ, ಸಮಿತಿಯ ಅಧ್ಯಕ್ಷರು ಮತ್ತು ಎಎಪಿ ಶಾಸಕರಾದ ರಾಘವ್ ಚಾಡ್ಡ, “ಮತ್ತೆ ಹಾಜರಾಗಲು ಫೇಸ್‌ಬುಕ್‌ನ ಅಧಿಕಾರಿಗಳು ವಿಫಲವಾದರೆ, ಅವರ ಮೇಲೆ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ” ಎಂದು ಹೇಳಿದ್ದರು.

ಸಮಿತಿಯು ಸೆಪ್ಟೆಂಬರ್ 18 ರಂದು ಎರಡನೇ ನೋಟಿಸ್ ನೀಡಿ ಬುಧವಾರ (ಸೆಪ್ಟೆಂಬರ್ 23) ತನ್ನ ಮುಂದೆ ಹಾಜರಾಗುವಂತೆ ನಿರ್ದೇಶಿಸಿತ್ತು.

ಇದನ್ನೂ ಓದಿ: ದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗದ ಫೇಸ್‌ಬುಕ್: ಅಂತಿಮ ಎಚ್ಚರಿಕೆ ನೀಡಿದ ಸಮಿತಿ

ಅಜಿತ್ ಮೋಹನ್, ತಮ್ಮ ವಕೀಲರ ಮೂಲಕ, “ಈ ಸಮನ್ಸ್‌ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ನಾವು ಸಾರ್ವಜನಿಕ ಸೇವಕರಲ್ಲ. ನಮ್ಮದು ಅಮೇರಿಕನ್ ಕಂಪನಿ” ಎಂದು ಕೋರ್ಟ್‌ಗೆ ತಿಳಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಮಿತಿಯ ಪರ ವಕೀಲರಾದ ಅಭಿಷೇಕ್ ಮುನು ಸಿಂಘ್ವಿ, “ಸಮಿತಿಯು ಕಂಪನಿಯ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಂಡಿಲ್ಲ. ಸೋಷಿಯಲ್ ಮೀಡಿಯಾದ ದುರುಪಯೋಗವನ್ನು ತಡೆಗಟ್ಟುವ ಮಾರ್ಗಗಳ ಬಗ್ಗೆ ಕಂಪನಿಯಿಂದ ಮಾಹಿತಿ ಪಡೆಯಲು ಸಮನ್ಸ್ ಜಾರಿಗೊಳಿಸಲಾಗಿದೆ. ಫೇಸ್‌ಬುಕ್‌ ಅನ್ನು ಆರೋಪಿ ಎಂದು ಕರೆದಿಲ್ಲ. ಆದರೆ ದೆಹಲಿ ಗಲಭೆಯ ಸಂದರ್ಭದಲ್ಲಿ ಫೇಸ್‌ಬುಕ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ” ಎಂದು ನ್ಯಾಯಾಲಯಕ್ಕೆ ಹೇಳಿದರು.

ವಾಲ್‌ಸ್ಟ್ರೀಟ್ ಜರ್ನಲ್ ಕಳೆದ ತಿಂಗಳು ಬಿಡುಗಡೆ ಮಾಡಿದ್ದ ವರದಿಯ ಆಧಾರದ ಮೇಲೆ, ದ್ವೇಷ ಭಾಷಣ ನಿಯಂತ್ರಣದಲ್ಲಿ ಪಕ್ಷಪಾತವೆಸಗಿದ ಫೇಸ್‌ಬುಕ್‌ನ ಪಾತ್ರವನ್ನು ಪರಿಶೀಲಿಸಲು ದೆಹಲಿ ವಿಧಾನಸಭೆಯ ವಿಶೇಷ ಸಮಿತಿಯು ಫೇಸ್‌ಬುಕ್‌ಗೆ ನೋಟೀಸ್ ನೀಡಿತ್ತು.


ಇದನ್ನೂ ಓದಿ: ಫೇಸ್‍ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ನಿವೃತ್ತ ಐಎಎಸ್ ಅಧಿಕಾರಿಗಳ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...