HomeUncategorizedದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಫೇಸ್‌ಬುಕ್ ಇಂಡಿಯಾ

ದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಫೇಸ್‌ಬುಕ್ ಇಂಡಿಯಾ

ಈ ಸಮನ್ಸ್‌ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ನಾವು ಸಾರ್ವಜನಿಕ ಸೇವಕರಲ್ಲ. ನಮ್ಮದು ಅಮೇರಿಕನ್ ಕಂಪನಿ- ಫೇಸ್‌ಬುಕ್ ಇಂಡಿಯಾ

- Advertisement -
- Advertisement -

ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಫೇಸ್‌ಬುಕ್ ಇಂಡಿಯಾಗೆ ದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ನೋಟೀಸ್ ಅನ್ನು ಪ್ರಶ್ನಿಸಿ ಫೇಸ್‌ಬುಕ್ ಇಂಡಿಯಾದ ಉಪಾಧ್ಯಕ್ಷರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ, ದೆಹಲಿ ಶಾಸಕಾಂಗ ಸಮಿತಿಯು ಬುಧವಾರದ ವಿಚಾರಣಾ ಸಭೆಯನ್ನು ರದ್ದುಗೊಳಿಸಿದೆ.

ಫೇಸ್‌ಬುಕ್ ಇಂಡಿಯಾ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್, ದೆಹಲಿ ವಿಧಾನಸಭೆಯ ಕಾರ್ಯದರ್ಶಿ, ಕಾನೂನು ಮತ್ತು ನ್ಯಾಯ ಸಚಿವಾಲಯ, ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವಾಲಯ ಹಾಗೂ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ನೋಟೀಸ್ ನೀಡಿದೆ.

ದೆಹಲಿ ಶಾಸಕಾಂಗ ಸಮಿತಿಯು ತನ್ನನ್ನು ವಿಚಾರಣೆಗೆ ಕರೆಸಿಕೊಳ್ಳದಂತೆ ಕೋರಿ ಅಜಿತ್ ಮೋಹನ್ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಸುಪ್ರೀಂ, “ಮುಂದಿನ ವಿಚಾರಣೆಯ ದಿನಾಂಕವಾದ ಅಕ್ಟೋಬರ್ 15 ರವರೆಗೆ ಕಾರ್ಯನಿರ್ವಾಹಕರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು” ಎಂದು ದೆಹಲಿ ಸದನ ಸಮಿತಿಗೆ ಹೇಳಿದೆ. ಇದಕ್ಕೆ ಒಪ್ಪಿದ ಸಮಿತಿ, “ಅವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದೆ.

ಸಮಿತಿಯು ತನ್ನ ಮುಂದೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದ ನಂತರ ಮೋಹನ್ ಸುಪ್ರೀಂ ಕೋರ್ಟ್‌ ಮೊರೆ ಹೋದರು. ಮೊದಲ ನೋಟಿಸ್ ನಂತರ ಅವರು ಸಮಿತಿಯ ಮುಂದೆ ಹಾಜರಾಗದಿದ್ದಾಗ, ಸಮಿತಿಯ ಅಧ್ಯಕ್ಷರು ಮತ್ತು ಎಎಪಿ ಶಾಸಕರಾದ ರಾಘವ್ ಚಾಡ್ಡ, “ಮತ್ತೆ ಹಾಜರಾಗಲು ಫೇಸ್‌ಬುಕ್‌ನ ಅಧಿಕಾರಿಗಳು ವಿಫಲವಾದರೆ, ಅವರ ಮೇಲೆ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ” ಎಂದು ಹೇಳಿದ್ದರು.

ಸಮಿತಿಯು ಸೆಪ್ಟೆಂಬರ್ 18 ರಂದು ಎರಡನೇ ನೋಟಿಸ್ ನೀಡಿ ಬುಧವಾರ (ಸೆಪ್ಟೆಂಬರ್ 23) ತನ್ನ ಮುಂದೆ ಹಾಜರಾಗುವಂತೆ ನಿರ್ದೇಶಿಸಿತ್ತು.

ಇದನ್ನೂ ಓದಿ: ದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗದ ಫೇಸ್‌ಬುಕ್: ಅಂತಿಮ ಎಚ್ಚರಿಕೆ ನೀಡಿದ ಸಮಿತಿ

ಅಜಿತ್ ಮೋಹನ್, ತಮ್ಮ ವಕೀಲರ ಮೂಲಕ, “ಈ ಸಮನ್ಸ್‌ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ನಾವು ಸಾರ್ವಜನಿಕ ಸೇವಕರಲ್ಲ. ನಮ್ಮದು ಅಮೇರಿಕನ್ ಕಂಪನಿ” ಎಂದು ಕೋರ್ಟ್‌ಗೆ ತಿಳಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಮಿತಿಯ ಪರ ವಕೀಲರಾದ ಅಭಿಷೇಕ್ ಮುನು ಸಿಂಘ್ವಿ, “ಸಮಿತಿಯು ಕಂಪನಿಯ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಂಡಿಲ್ಲ. ಸೋಷಿಯಲ್ ಮೀಡಿಯಾದ ದುರುಪಯೋಗವನ್ನು ತಡೆಗಟ್ಟುವ ಮಾರ್ಗಗಳ ಬಗ್ಗೆ ಕಂಪನಿಯಿಂದ ಮಾಹಿತಿ ಪಡೆಯಲು ಸಮನ್ಸ್ ಜಾರಿಗೊಳಿಸಲಾಗಿದೆ. ಫೇಸ್‌ಬುಕ್‌ ಅನ್ನು ಆರೋಪಿ ಎಂದು ಕರೆದಿಲ್ಲ. ಆದರೆ ದೆಹಲಿ ಗಲಭೆಯ ಸಂದರ್ಭದಲ್ಲಿ ಫೇಸ್‌ಬುಕ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ” ಎಂದು ನ್ಯಾಯಾಲಯಕ್ಕೆ ಹೇಳಿದರು.

ವಾಲ್‌ಸ್ಟ್ರೀಟ್ ಜರ್ನಲ್ ಕಳೆದ ತಿಂಗಳು ಬಿಡುಗಡೆ ಮಾಡಿದ್ದ ವರದಿಯ ಆಧಾರದ ಮೇಲೆ, ದ್ವೇಷ ಭಾಷಣ ನಿಯಂತ್ರಣದಲ್ಲಿ ಪಕ್ಷಪಾತವೆಸಗಿದ ಫೇಸ್‌ಬುಕ್‌ನ ಪಾತ್ರವನ್ನು ಪರಿಶೀಲಿಸಲು ದೆಹಲಿ ವಿಧಾನಸಭೆಯ ವಿಶೇಷ ಸಮಿತಿಯು ಫೇಸ್‌ಬುಕ್‌ಗೆ ನೋಟೀಸ್ ನೀಡಿತ್ತು.


ಇದನ್ನೂ ಓದಿ: ಫೇಸ್‍ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ನಿವೃತ್ತ ಐಎಎಸ್ ಅಧಿಕಾರಿಗಳ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...