HomeUncategorizedದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಫೇಸ್‌ಬುಕ್ ಇಂಡಿಯಾ

ದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಫೇಸ್‌ಬುಕ್ ಇಂಡಿಯಾ

ಈ ಸಮನ್ಸ್‌ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ನಾವು ಸಾರ್ವಜನಿಕ ಸೇವಕರಲ್ಲ. ನಮ್ಮದು ಅಮೇರಿಕನ್ ಕಂಪನಿ- ಫೇಸ್‌ಬುಕ್ ಇಂಡಿಯಾ

- Advertisement -
- Advertisement -

ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಫೇಸ್‌ಬುಕ್ ಇಂಡಿಯಾಗೆ ದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ನೋಟೀಸ್ ಅನ್ನು ಪ್ರಶ್ನಿಸಿ ಫೇಸ್‌ಬುಕ್ ಇಂಡಿಯಾದ ಉಪಾಧ್ಯಕ್ಷರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ, ದೆಹಲಿ ಶಾಸಕಾಂಗ ಸಮಿತಿಯು ಬುಧವಾರದ ವಿಚಾರಣಾ ಸಭೆಯನ್ನು ರದ್ದುಗೊಳಿಸಿದೆ.

ಫೇಸ್‌ಬುಕ್ ಇಂಡಿಯಾ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್, ದೆಹಲಿ ವಿಧಾನಸಭೆಯ ಕಾರ್ಯದರ್ಶಿ, ಕಾನೂನು ಮತ್ತು ನ್ಯಾಯ ಸಚಿವಾಲಯ, ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವಾಲಯ ಹಾಗೂ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ನೋಟೀಸ್ ನೀಡಿದೆ.

ದೆಹಲಿ ಶಾಸಕಾಂಗ ಸಮಿತಿಯು ತನ್ನನ್ನು ವಿಚಾರಣೆಗೆ ಕರೆಸಿಕೊಳ್ಳದಂತೆ ಕೋರಿ ಅಜಿತ್ ಮೋಹನ್ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಸುಪ್ರೀಂ, “ಮುಂದಿನ ವಿಚಾರಣೆಯ ದಿನಾಂಕವಾದ ಅಕ್ಟೋಬರ್ 15 ರವರೆಗೆ ಕಾರ್ಯನಿರ್ವಾಹಕರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು” ಎಂದು ದೆಹಲಿ ಸದನ ಸಮಿತಿಗೆ ಹೇಳಿದೆ. ಇದಕ್ಕೆ ಒಪ್ಪಿದ ಸಮಿತಿ, “ಅವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದೆ.

ಸಮಿತಿಯು ತನ್ನ ಮುಂದೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದ ನಂತರ ಮೋಹನ್ ಸುಪ್ರೀಂ ಕೋರ್ಟ್‌ ಮೊರೆ ಹೋದರು. ಮೊದಲ ನೋಟಿಸ್ ನಂತರ ಅವರು ಸಮಿತಿಯ ಮುಂದೆ ಹಾಜರಾಗದಿದ್ದಾಗ, ಸಮಿತಿಯ ಅಧ್ಯಕ್ಷರು ಮತ್ತು ಎಎಪಿ ಶಾಸಕರಾದ ರಾಘವ್ ಚಾಡ್ಡ, “ಮತ್ತೆ ಹಾಜರಾಗಲು ಫೇಸ್‌ಬುಕ್‌ನ ಅಧಿಕಾರಿಗಳು ವಿಫಲವಾದರೆ, ಅವರ ಮೇಲೆ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ” ಎಂದು ಹೇಳಿದ್ದರು.

ಸಮಿತಿಯು ಸೆಪ್ಟೆಂಬರ್ 18 ರಂದು ಎರಡನೇ ನೋಟಿಸ್ ನೀಡಿ ಬುಧವಾರ (ಸೆಪ್ಟೆಂಬರ್ 23) ತನ್ನ ಮುಂದೆ ಹಾಜರಾಗುವಂತೆ ನಿರ್ದೇಶಿಸಿತ್ತು.

ಇದನ್ನೂ ಓದಿ: ದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗದ ಫೇಸ್‌ಬುಕ್: ಅಂತಿಮ ಎಚ್ಚರಿಕೆ ನೀಡಿದ ಸಮಿತಿ

ಅಜಿತ್ ಮೋಹನ್, ತಮ್ಮ ವಕೀಲರ ಮೂಲಕ, “ಈ ಸಮನ್ಸ್‌ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ನಾವು ಸಾರ್ವಜನಿಕ ಸೇವಕರಲ್ಲ. ನಮ್ಮದು ಅಮೇರಿಕನ್ ಕಂಪನಿ” ಎಂದು ಕೋರ್ಟ್‌ಗೆ ತಿಳಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಮಿತಿಯ ಪರ ವಕೀಲರಾದ ಅಭಿಷೇಕ್ ಮುನು ಸಿಂಘ್ವಿ, “ಸಮಿತಿಯು ಕಂಪನಿಯ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಂಡಿಲ್ಲ. ಸೋಷಿಯಲ್ ಮೀಡಿಯಾದ ದುರುಪಯೋಗವನ್ನು ತಡೆಗಟ್ಟುವ ಮಾರ್ಗಗಳ ಬಗ್ಗೆ ಕಂಪನಿಯಿಂದ ಮಾಹಿತಿ ಪಡೆಯಲು ಸಮನ್ಸ್ ಜಾರಿಗೊಳಿಸಲಾಗಿದೆ. ಫೇಸ್‌ಬುಕ್‌ ಅನ್ನು ಆರೋಪಿ ಎಂದು ಕರೆದಿಲ್ಲ. ಆದರೆ ದೆಹಲಿ ಗಲಭೆಯ ಸಂದರ್ಭದಲ್ಲಿ ಫೇಸ್‌ಬುಕ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ” ಎಂದು ನ್ಯಾಯಾಲಯಕ್ಕೆ ಹೇಳಿದರು.

ವಾಲ್‌ಸ್ಟ್ರೀಟ್ ಜರ್ನಲ್ ಕಳೆದ ತಿಂಗಳು ಬಿಡುಗಡೆ ಮಾಡಿದ್ದ ವರದಿಯ ಆಧಾರದ ಮೇಲೆ, ದ್ವೇಷ ಭಾಷಣ ನಿಯಂತ್ರಣದಲ್ಲಿ ಪಕ್ಷಪಾತವೆಸಗಿದ ಫೇಸ್‌ಬುಕ್‌ನ ಪಾತ್ರವನ್ನು ಪರಿಶೀಲಿಸಲು ದೆಹಲಿ ವಿಧಾನಸಭೆಯ ವಿಶೇಷ ಸಮಿತಿಯು ಫೇಸ್‌ಬುಕ್‌ಗೆ ನೋಟೀಸ್ ನೀಡಿತ್ತು.


ಇದನ್ನೂ ಓದಿ: ಫೇಸ್‍ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ನಿವೃತ್ತ ಐಎಎಸ್ ಅಧಿಕಾರಿಗಳ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...