Homeಮುಖಪುಟಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ಎಫ್‌ಐಆರ್ ಇನ್ನೂ ನೋಂದಣಿಯಾಗಿಲ್ಲ. ದೂರು ಸ್ವೀಕರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಖಿದಾಸ್ ಭಾನುವಾರ ರಾತ್ರಿ ದೆಹಲಿ ಪೊಲೀಸ್ ಸೈಬರ್ ಸೆಲ್‌ಗೆ ಲಿಖಿತ ದೂರು ಸಲ್ಲಿಸಿದ್ದು, ಆನ್‌ಲೈನ್ ನಲ್ಲಿ ಹಲವಾರು ಜನರು ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಎಫ್‌ಐಆರ್ ಇನ್ನೂ ನೋಂದಣಿಯಾಗಿಲ್ಲ. ದೂರು ಸ್ವೀಕರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತೀಯ ರಾಜಕೀಯದೊಂದಿಗೆ ಫೇಸ್‌ಬುಕ್ ದ್ವೇಷ-ಭಾಷಣ ನಿಯಮಗಳಲ್ಲಿ ಘರ್ಷಣೆ – ವಿವಾದಾತ್ಮಕ ರಾಜಕಾರಣಿಯನ್ನು ನಿಷೇಧಿಸುವ ಕ್ರಮವನ್ನು ಕಂಪನಿಯ ಕಾರ್ಯನಿರ್ವಾಹಕ ವಿರೋಧಿಸಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಅಮೆರಿಕಾ ಮೂಲದ ವಾಲ್ ಸ್ಟ್ರೀಟ್ ಜರ್ನಲ್ ವಿಶೇಷ ವರದಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬೆದರಿಕೆಗಳು ಬಂದಿವೆ ಎಂದು ಅಂಖಿದಾಸ್ (49) ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಭಾರತದಲ್ಲಿ ಕಂಪನಿಯ ವ್ಯವಹಾರದ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಅಂಖಿದಾಸ್‌ ಹೇಳಿರುವುದಾಗಿ ಜರ್ನಲ್ ವರದಿ ಮಾಡಿತ್ತು.

ಡಬ್ಲ್ಯುಎಸ್ಜೆ ಲೇಖನವನ್ನು ಭಾರತದಲ್ಲಿ ತಪ್ಪಾಗಿ ಪ್ರಕಟಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಗ್ರಹಿಸಿದ ರಿತಿಯೇ ಇದಕ್ಕೆಲ್ಲಾ ಕಾರಣ. ತನಗೆ ಜೀವ ಬೆದರಿಕೆಗಳನ್ನು ಕಳುಹಿಸಿದ ಜನರ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಗಳನ್ನು ದಾಸ್ ಸಲ್ಲಿಸಿದ ನಾಲ್ಕು ಪುಟಗಳ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

“ಯಾರೊಬ್ಬರ ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ನಾವು ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತೇವೆ. ಹಿಂಸಾಚಾರವನ್ನು ಪ್ರಚೋದಿಸುವ ದ್ವೇಷದ ಮಾತು ಮತ್ತು ವಿಷಯವನ್ನು ನಾವು ನಿಷೇಧಿಸುತ್ತೇವೆ. ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿ ಸಾಧಿಸುತ್ತಿದ್ದೇವೆ. ನ್ಯಾಯ ಮತ್ತು ನಿಖರತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಪ್ರಕ್ರಿಯೆಯ ನಿಯಮಿತ ಲೆಕ್ಕಪರಿಶೋಧನೆಯನ್ನು ನಡೆಸುತ್ತೇವೆ” ಎಂದು ಫೇಸ್‌ಬುಕ್ ವಕ್ತಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...