Homeಮುಖಪುಟಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

ಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

- Advertisement -
- Advertisement -

ಫೇಸ್‌ಬುಕ್‌, ವಾಟ್ಸ್‌ಆಪ್‌‌, ಇನ್‌ಸ್ಟಾ ಗ್ರಾಮ್‌ ಸೇವೆ ಸುಮಾರು ಆರು ಗಂಟೆಗಳ ಕಾಲ ಸ್ಥಗಿತವಾಗಿ ಬಳಕೆದಾರರ ಚಡಪಡಿಕೆಗೆ ಕಾರಣವಾಗಿದ್ದ ಈ ಮೂರು ಅಪ್ಲಿಕೇಷನ್‌‌ಗಳ ಒಡೆಯನಾದ ಫೇಸ್‌ಬುಕ್‌‌ ಸಂಸ್ಥೆಯು, ಸೇವೆಯನ್ನು ಪುನಾರಂಭ ಮಾಡಿದೆ. ಬಳಕೆದಾರರಿಗೆ ಅಡಚಣೆ ಉಂಟು ಮಾಡಿದ್ದಕ್ಕೆ ಫೇಸ್‌ಬುಕ್‌ ಕ್ಷಮೆಯಾಚಿಸಿದೆ.

“ನಮ್ಮನ್ನು ಅವಲಂಭಿಸಿ ವ್ಯವಹರಿಸುವ ದೊಡ್ಡ ಮಟ್ಟದ ಸಮುದಾಯ ಪ್ರಪಂಚದಾದ್ಯಂತ ಇದ್ದು, ಇವರೆನ್ನೆಲ್ಲ ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌‌ಬುಕ್‌‌ ಸಂಸ್ಥೆ ಟ್ವೀಟ್‌ ಮಾಡಿದೆ.

“ನಮ್ಮ ಅಪ್ಲಿಕೇಷನ್‌ಗಳು ಸೇವೆಗಳಿಗೆ ಪ್ರವೇಶಿಸುವಂತೆ ಮರುಸ್ಥಾಪಿಸಲು ನಾವು ಶ್ರಮಿಸುತ್ತಿದ್ದೇವೆ. ಈಗ ಅವು ಬಳಕೆಗೆ ಲಭ್ಯವಿವೆ ಎಂದು ವರದಿ ಮಾಡಲು ಸಂತೋಷವಾಗಿದೆ. ನಮ್ಮೊಂದಿಗೆ ಸಹಕರಿಸಿದಕ್ಕಾಗಿ ಧನ್ಯವಾದಗಳು” ಎಂದು ಫೇಸ್‌ಬುಕ್‌ ಹೇಳಿದೆ.

ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ ಈ ಅಪ್ಲಿಕೇಷನ್‌ಗಳು ಸ್ವಸ್ಥಿತಿಗೆ ಮರಳಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ವೆಬ್‌ಸೈಟ್‌ ಸ್ಥಗಿತದ ವರದಿ ಮಾಡುವ ಡೌನ್‌ಡಿಟೆಕ್ಟರ್‌ ಪ್ರಕಾರ ಸೋಮವಾರ ರಾತ್ರಿ 9.30ರ ವೇಳೆಗೆ ಸುಮಾರು 6,900 ವರದಿಗಳು ಫೇಸ್‌ಬುಕ್‌ ಸ್ಥಗಿತದ ಕುರಿತು ಆಗಿವೆ. ಅದೇ ಸಮಯದಲ್ಲಿ ಸುಮಾರು 30,000 ವರದಿಗಳು ವಾಟ್ಸ್‌ಆಪ್‌ ಸಂಬಂಧಿಸಿದಂತೆ ಆಗಿವೆ. ರಾತ್ರಿ 9.27ರ ವೇಳೆಗೆ 18,739 ವರದಿಗಳು ಇನ್‌ಸ್ಟಾಗ್ರಾಮ್‌ ಸ್ಥಗಿತದ ಕುರಿತಾಗಿವೆ ಎನ್ನಲಾಗಿದೆ.

ಸ್ಥಗಿತ ಆರಂಭವಾದ ಸ್ವಲ್ಪ ಸಮಯದ ನಂತರ ಫೇಸ್‌ಬುಕ್, ತನ್ನ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಬಳಕೆದಾರರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದೆ. ಆದರೆ ಸಮಸ್ಯೆಯ ಸ್ವರೂಪದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಿಲ್ಲ. ಬಳಕೆದಾರರು ತಮಗೆ ಬೇಕಾದದ್ದನ್ನು ಪಡೆಯಲು ಅಗತ್ಯವಿರುವ ಡೊಮೈನ್‌ ನೇಮ್‌ ಸಿಸ್ಟಮ್‌ನಲ್ಲಿ ಉಂಟಾದ ಅಡಚಣೆಯೇ ಈ ಸ್ಥಗಿತಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಹೆಸರು ಹೇಳಲಿಚ್ಛಿಸದ ಫೇಸ್‌ಬುಕ್ ಉದ್ಯೋಗಿಗಳು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ಇಂಟರ್‌ನೆಟ್ ಡೊಮೇನ್‌ಗೆ ಆಂತರಿಕ ಮಾರ್ಗಗಳ (ಇಂಟರ್‌ನೆಟ್ ನೆಟ್‌ವರ್ಕ್‌ನಲ್ಲಿ ಬಳಕೆದಾರರ ಸಂಚಾರಕ್ಕಾಗಿ ಮಾರ್ಗವನ್ನು ಆಯ್ಕೆ ಮಾಡುವ ಪ್ರಕ್ರಿಯೆ) ಸಮಸ್ಯೆ ಉಂಟಾಗಿದೆ ಎಂದು ನಾವು ನಂಬಿದ್ದೇವೆ. ಅದೇ ಡೊಮೇನ್ ಮೇಲೆ ಅವಲಂಬಿತವಾಗಿರುವ ಆಂತರಿಕ ಪರಿಕರಗಳು ಮತ್ತು ಇತರ ಸಂಪನ್ಮೂಲಗಳೂ ಕಾರ್ಯನಿರ್ವಹಿಸದ ಕಾರಣ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು ಎಂದು ಅವರು ತಿಳಿಸಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಹೇಳುವುದಾದರೆ ಫೇಸ್‌ಬುಕ್‌ ಸ್ಥಗಿತದ ಕುರಿತು ಆದ ವರದಿಗಳು ಸ್ಥಗಿತಕ್ಕೆ ಸಂಬಂಧಿಸಿದಂತೆ ಜಾಗತಿಕವಾಗಿ ಆಗಿರುವ ಅತಿದೊಡ್ಡ ವರದಿಯಾಗಿದೆ. ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ 1.4 ಕೋಟಿ ವರದಿಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...