Homeಮುಖಪುಟಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

ಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

- Advertisement -
- Advertisement -

ಫೇಸ್‌ಬುಕ್‌, ವಾಟ್ಸ್‌ಆಪ್‌‌, ಇನ್‌ಸ್ಟಾ ಗ್ರಾಮ್‌ ಸೇವೆ ಸುಮಾರು ಆರು ಗಂಟೆಗಳ ಕಾಲ ಸ್ಥಗಿತವಾಗಿ ಬಳಕೆದಾರರ ಚಡಪಡಿಕೆಗೆ ಕಾರಣವಾಗಿದ್ದ ಈ ಮೂರು ಅಪ್ಲಿಕೇಷನ್‌‌ಗಳ ಒಡೆಯನಾದ ಫೇಸ್‌ಬುಕ್‌‌ ಸಂಸ್ಥೆಯು, ಸೇವೆಯನ್ನು ಪುನಾರಂಭ ಮಾಡಿದೆ. ಬಳಕೆದಾರರಿಗೆ ಅಡಚಣೆ ಉಂಟು ಮಾಡಿದ್ದಕ್ಕೆ ಫೇಸ್‌ಬುಕ್‌ ಕ್ಷಮೆಯಾಚಿಸಿದೆ.

“ನಮ್ಮನ್ನು ಅವಲಂಭಿಸಿ ವ್ಯವಹರಿಸುವ ದೊಡ್ಡ ಮಟ್ಟದ ಸಮುದಾಯ ಪ್ರಪಂಚದಾದ್ಯಂತ ಇದ್ದು, ಇವರೆನ್ನೆಲ್ಲ ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌‌ಬುಕ್‌‌ ಸಂಸ್ಥೆ ಟ್ವೀಟ್‌ ಮಾಡಿದೆ.

“ನಮ್ಮ ಅಪ್ಲಿಕೇಷನ್‌ಗಳು ಸೇವೆಗಳಿಗೆ ಪ್ರವೇಶಿಸುವಂತೆ ಮರುಸ್ಥಾಪಿಸಲು ನಾವು ಶ್ರಮಿಸುತ್ತಿದ್ದೇವೆ. ಈಗ ಅವು ಬಳಕೆಗೆ ಲಭ್ಯವಿವೆ ಎಂದು ವರದಿ ಮಾಡಲು ಸಂತೋಷವಾಗಿದೆ. ನಮ್ಮೊಂದಿಗೆ ಸಹಕರಿಸಿದಕ್ಕಾಗಿ ಧನ್ಯವಾದಗಳು” ಎಂದು ಫೇಸ್‌ಬುಕ್‌ ಹೇಳಿದೆ.

ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ ಈ ಅಪ್ಲಿಕೇಷನ್‌ಗಳು ಸ್ವಸ್ಥಿತಿಗೆ ಮರಳಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ವೆಬ್‌ಸೈಟ್‌ ಸ್ಥಗಿತದ ವರದಿ ಮಾಡುವ ಡೌನ್‌ಡಿಟೆಕ್ಟರ್‌ ಪ್ರಕಾರ ಸೋಮವಾರ ರಾತ್ರಿ 9.30ರ ವೇಳೆಗೆ ಸುಮಾರು 6,900 ವರದಿಗಳು ಫೇಸ್‌ಬುಕ್‌ ಸ್ಥಗಿತದ ಕುರಿತು ಆಗಿವೆ. ಅದೇ ಸಮಯದಲ್ಲಿ ಸುಮಾರು 30,000 ವರದಿಗಳು ವಾಟ್ಸ್‌ಆಪ್‌ ಸಂಬಂಧಿಸಿದಂತೆ ಆಗಿವೆ. ರಾತ್ರಿ 9.27ರ ವೇಳೆಗೆ 18,739 ವರದಿಗಳು ಇನ್‌ಸ್ಟಾಗ್ರಾಮ್‌ ಸ್ಥಗಿತದ ಕುರಿತಾಗಿವೆ ಎನ್ನಲಾಗಿದೆ.

ಸ್ಥಗಿತ ಆರಂಭವಾದ ಸ್ವಲ್ಪ ಸಮಯದ ನಂತರ ಫೇಸ್‌ಬುಕ್, ತನ್ನ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಬಳಕೆದಾರರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದೆ. ಆದರೆ ಸಮಸ್ಯೆಯ ಸ್ವರೂಪದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಿಲ್ಲ. ಬಳಕೆದಾರರು ತಮಗೆ ಬೇಕಾದದ್ದನ್ನು ಪಡೆಯಲು ಅಗತ್ಯವಿರುವ ಡೊಮೈನ್‌ ನೇಮ್‌ ಸಿಸ್ಟಮ್‌ನಲ್ಲಿ ಉಂಟಾದ ಅಡಚಣೆಯೇ ಈ ಸ್ಥಗಿತಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಹೆಸರು ಹೇಳಲಿಚ್ಛಿಸದ ಫೇಸ್‌ಬುಕ್ ಉದ್ಯೋಗಿಗಳು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ಇಂಟರ್‌ನೆಟ್ ಡೊಮೇನ್‌ಗೆ ಆಂತರಿಕ ಮಾರ್ಗಗಳ (ಇಂಟರ್‌ನೆಟ್ ನೆಟ್‌ವರ್ಕ್‌ನಲ್ಲಿ ಬಳಕೆದಾರರ ಸಂಚಾರಕ್ಕಾಗಿ ಮಾರ್ಗವನ್ನು ಆಯ್ಕೆ ಮಾಡುವ ಪ್ರಕ್ರಿಯೆ) ಸಮಸ್ಯೆ ಉಂಟಾಗಿದೆ ಎಂದು ನಾವು ನಂಬಿದ್ದೇವೆ. ಅದೇ ಡೊಮೇನ್ ಮೇಲೆ ಅವಲಂಬಿತವಾಗಿರುವ ಆಂತರಿಕ ಪರಿಕರಗಳು ಮತ್ತು ಇತರ ಸಂಪನ್ಮೂಲಗಳೂ ಕಾರ್ಯನಿರ್ವಹಿಸದ ಕಾರಣ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು ಎಂದು ಅವರು ತಿಳಿಸಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಹೇಳುವುದಾದರೆ ಫೇಸ್‌ಬುಕ್‌ ಸ್ಥಗಿತದ ಕುರಿತು ಆದ ವರದಿಗಳು ಸ್ಥಗಿತಕ್ಕೆ ಸಂಬಂಧಿಸಿದಂತೆ ಜಾಗತಿಕವಾಗಿ ಆಗಿರುವ ಅತಿದೊಡ್ಡ ವರದಿಯಾಗಿದೆ. ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ 1.4 ಕೋಟಿ ವರದಿಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...