Homeಮುಖಪುಟಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

ಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

- Advertisement -
- Advertisement -

ಫೇಸ್‌ಬುಕ್‌, ವಾಟ್ಸ್‌ಆಪ್‌‌, ಇನ್‌ಸ್ಟಾ ಗ್ರಾಮ್‌ ಸೇವೆ ಸುಮಾರು ಆರು ಗಂಟೆಗಳ ಕಾಲ ಸ್ಥಗಿತವಾಗಿ ಬಳಕೆದಾರರ ಚಡಪಡಿಕೆಗೆ ಕಾರಣವಾಗಿದ್ದ ಈ ಮೂರು ಅಪ್ಲಿಕೇಷನ್‌‌ಗಳ ಒಡೆಯನಾದ ಫೇಸ್‌ಬುಕ್‌‌ ಸಂಸ್ಥೆಯು, ಸೇವೆಯನ್ನು ಪುನಾರಂಭ ಮಾಡಿದೆ. ಬಳಕೆದಾರರಿಗೆ ಅಡಚಣೆ ಉಂಟು ಮಾಡಿದ್ದಕ್ಕೆ ಫೇಸ್‌ಬುಕ್‌ ಕ್ಷಮೆಯಾಚಿಸಿದೆ.

“ನಮ್ಮನ್ನು ಅವಲಂಭಿಸಿ ವ್ಯವಹರಿಸುವ ದೊಡ್ಡ ಮಟ್ಟದ ಸಮುದಾಯ ಪ್ರಪಂಚದಾದ್ಯಂತ ಇದ್ದು, ಇವರೆನ್ನೆಲ್ಲ ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌‌ಬುಕ್‌‌ ಸಂಸ್ಥೆ ಟ್ವೀಟ್‌ ಮಾಡಿದೆ.

“ನಮ್ಮ ಅಪ್ಲಿಕೇಷನ್‌ಗಳು ಸೇವೆಗಳಿಗೆ ಪ್ರವೇಶಿಸುವಂತೆ ಮರುಸ್ಥಾಪಿಸಲು ನಾವು ಶ್ರಮಿಸುತ್ತಿದ್ದೇವೆ. ಈಗ ಅವು ಬಳಕೆಗೆ ಲಭ್ಯವಿವೆ ಎಂದು ವರದಿ ಮಾಡಲು ಸಂತೋಷವಾಗಿದೆ. ನಮ್ಮೊಂದಿಗೆ ಸಹಕರಿಸಿದಕ್ಕಾಗಿ ಧನ್ಯವಾದಗಳು” ಎಂದು ಫೇಸ್‌ಬುಕ್‌ ಹೇಳಿದೆ.

ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ ಈ ಅಪ್ಲಿಕೇಷನ್‌ಗಳು ಸ್ವಸ್ಥಿತಿಗೆ ಮರಳಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ವೆಬ್‌ಸೈಟ್‌ ಸ್ಥಗಿತದ ವರದಿ ಮಾಡುವ ಡೌನ್‌ಡಿಟೆಕ್ಟರ್‌ ಪ್ರಕಾರ ಸೋಮವಾರ ರಾತ್ರಿ 9.30ರ ವೇಳೆಗೆ ಸುಮಾರು 6,900 ವರದಿಗಳು ಫೇಸ್‌ಬುಕ್‌ ಸ್ಥಗಿತದ ಕುರಿತು ಆಗಿವೆ. ಅದೇ ಸಮಯದಲ್ಲಿ ಸುಮಾರು 30,000 ವರದಿಗಳು ವಾಟ್ಸ್‌ಆಪ್‌ ಸಂಬಂಧಿಸಿದಂತೆ ಆಗಿವೆ. ರಾತ್ರಿ 9.27ರ ವೇಳೆಗೆ 18,739 ವರದಿಗಳು ಇನ್‌ಸ್ಟಾಗ್ರಾಮ್‌ ಸ್ಥಗಿತದ ಕುರಿತಾಗಿವೆ ಎನ್ನಲಾಗಿದೆ.

ಸ್ಥಗಿತ ಆರಂಭವಾದ ಸ್ವಲ್ಪ ಸಮಯದ ನಂತರ ಫೇಸ್‌ಬುಕ್, ತನ್ನ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಬಳಕೆದಾರರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದೆ. ಆದರೆ ಸಮಸ್ಯೆಯ ಸ್ವರೂಪದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಿಲ್ಲ. ಬಳಕೆದಾರರು ತಮಗೆ ಬೇಕಾದದ್ದನ್ನು ಪಡೆಯಲು ಅಗತ್ಯವಿರುವ ಡೊಮೈನ್‌ ನೇಮ್‌ ಸಿಸ್ಟಮ್‌ನಲ್ಲಿ ಉಂಟಾದ ಅಡಚಣೆಯೇ ಈ ಸ್ಥಗಿತಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಹೆಸರು ಹೇಳಲಿಚ್ಛಿಸದ ಫೇಸ್‌ಬುಕ್ ಉದ್ಯೋಗಿಗಳು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ಇಂಟರ್‌ನೆಟ್ ಡೊಮೇನ್‌ಗೆ ಆಂತರಿಕ ಮಾರ್ಗಗಳ (ಇಂಟರ್‌ನೆಟ್ ನೆಟ್‌ವರ್ಕ್‌ನಲ್ಲಿ ಬಳಕೆದಾರರ ಸಂಚಾರಕ್ಕಾಗಿ ಮಾರ್ಗವನ್ನು ಆಯ್ಕೆ ಮಾಡುವ ಪ್ರಕ್ರಿಯೆ) ಸಮಸ್ಯೆ ಉಂಟಾಗಿದೆ ಎಂದು ನಾವು ನಂಬಿದ್ದೇವೆ. ಅದೇ ಡೊಮೇನ್ ಮೇಲೆ ಅವಲಂಬಿತವಾಗಿರುವ ಆಂತರಿಕ ಪರಿಕರಗಳು ಮತ್ತು ಇತರ ಸಂಪನ್ಮೂಲಗಳೂ ಕಾರ್ಯನಿರ್ವಹಿಸದ ಕಾರಣ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು ಎಂದು ಅವರು ತಿಳಿಸಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಹೇಳುವುದಾದರೆ ಫೇಸ್‌ಬುಕ್‌ ಸ್ಥಗಿತದ ಕುರಿತು ಆದ ವರದಿಗಳು ಸ್ಥಗಿತಕ್ಕೆ ಸಂಬಂಧಿಸಿದಂತೆ ಜಾಗತಿಕವಾಗಿ ಆಗಿರುವ ಅತಿದೊಡ್ಡ ವರದಿಯಾಗಿದೆ. ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ 1.4 ಕೋಟಿ ವರದಿಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...