Homeಮುಖಪುಟಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

ಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

- Advertisement -
- Advertisement -

ಫೇಸ್‌ಬುಕ್‌, ವಾಟ್ಸ್‌ಆಪ್‌‌, ಇನ್‌ಸ್ಟಾ ಗ್ರಾಮ್‌ ಸೇವೆ ಸುಮಾರು ಆರು ಗಂಟೆಗಳ ಕಾಲ ಸ್ಥಗಿತವಾಗಿ ಬಳಕೆದಾರರ ಚಡಪಡಿಕೆಗೆ ಕಾರಣವಾಗಿದ್ದ ಈ ಮೂರು ಅಪ್ಲಿಕೇಷನ್‌‌ಗಳ ಒಡೆಯನಾದ ಫೇಸ್‌ಬುಕ್‌‌ ಸಂಸ್ಥೆಯು, ಸೇವೆಯನ್ನು ಪುನಾರಂಭ ಮಾಡಿದೆ. ಬಳಕೆದಾರರಿಗೆ ಅಡಚಣೆ ಉಂಟು ಮಾಡಿದ್ದಕ್ಕೆ ಫೇಸ್‌ಬುಕ್‌ ಕ್ಷಮೆಯಾಚಿಸಿದೆ.

“ನಮ್ಮನ್ನು ಅವಲಂಭಿಸಿ ವ್ಯವಹರಿಸುವ ದೊಡ್ಡ ಮಟ್ಟದ ಸಮುದಾಯ ಪ್ರಪಂಚದಾದ್ಯಂತ ಇದ್ದು, ಇವರೆನ್ನೆಲ್ಲ ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌‌ಬುಕ್‌‌ ಸಂಸ್ಥೆ ಟ್ವೀಟ್‌ ಮಾಡಿದೆ.

“ನಮ್ಮ ಅಪ್ಲಿಕೇಷನ್‌ಗಳು ಸೇವೆಗಳಿಗೆ ಪ್ರವೇಶಿಸುವಂತೆ ಮರುಸ್ಥಾಪಿಸಲು ನಾವು ಶ್ರಮಿಸುತ್ತಿದ್ದೇವೆ. ಈಗ ಅವು ಬಳಕೆಗೆ ಲಭ್ಯವಿವೆ ಎಂದು ವರದಿ ಮಾಡಲು ಸಂತೋಷವಾಗಿದೆ. ನಮ್ಮೊಂದಿಗೆ ಸಹಕರಿಸಿದಕ್ಕಾಗಿ ಧನ್ಯವಾದಗಳು” ಎಂದು ಫೇಸ್‌ಬುಕ್‌ ಹೇಳಿದೆ.

ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ ಈ ಅಪ್ಲಿಕೇಷನ್‌ಗಳು ಸ್ವಸ್ಥಿತಿಗೆ ಮರಳಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ವೆಬ್‌ಸೈಟ್‌ ಸ್ಥಗಿತದ ವರದಿ ಮಾಡುವ ಡೌನ್‌ಡಿಟೆಕ್ಟರ್‌ ಪ್ರಕಾರ ಸೋಮವಾರ ರಾತ್ರಿ 9.30ರ ವೇಳೆಗೆ ಸುಮಾರು 6,900 ವರದಿಗಳು ಫೇಸ್‌ಬುಕ್‌ ಸ್ಥಗಿತದ ಕುರಿತು ಆಗಿವೆ. ಅದೇ ಸಮಯದಲ್ಲಿ ಸುಮಾರು 30,000 ವರದಿಗಳು ವಾಟ್ಸ್‌ಆಪ್‌ ಸಂಬಂಧಿಸಿದಂತೆ ಆಗಿವೆ. ರಾತ್ರಿ 9.27ರ ವೇಳೆಗೆ 18,739 ವರದಿಗಳು ಇನ್‌ಸ್ಟಾಗ್ರಾಮ್‌ ಸ್ಥಗಿತದ ಕುರಿತಾಗಿವೆ ಎನ್ನಲಾಗಿದೆ.

ಸ್ಥಗಿತ ಆರಂಭವಾದ ಸ್ವಲ್ಪ ಸಮಯದ ನಂತರ ಫೇಸ್‌ಬುಕ್, ತನ್ನ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಬಳಕೆದಾರರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದೆ. ಆದರೆ ಸಮಸ್ಯೆಯ ಸ್ವರೂಪದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಿಲ್ಲ. ಬಳಕೆದಾರರು ತಮಗೆ ಬೇಕಾದದ್ದನ್ನು ಪಡೆಯಲು ಅಗತ್ಯವಿರುವ ಡೊಮೈನ್‌ ನೇಮ್‌ ಸಿಸ್ಟಮ್‌ನಲ್ಲಿ ಉಂಟಾದ ಅಡಚಣೆಯೇ ಈ ಸ್ಥಗಿತಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಹೆಸರು ಹೇಳಲಿಚ್ಛಿಸದ ಫೇಸ್‌ಬುಕ್ ಉದ್ಯೋಗಿಗಳು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ಇಂಟರ್‌ನೆಟ್ ಡೊಮೇನ್‌ಗೆ ಆಂತರಿಕ ಮಾರ್ಗಗಳ (ಇಂಟರ್‌ನೆಟ್ ನೆಟ್‌ವರ್ಕ್‌ನಲ್ಲಿ ಬಳಕೆದಾರರ ಸಂಚಾರಕ್ಕಾಗಿ ಮಾರ್ಗವನ್ನು ಆಯ್ಕೆ ಮಾಡುವ ಪ್ರಕ್ರಿಯೆ) ಸಮಸ್ಯೆ ಉಂಟಾಗಿದೆ ಎಂದು ನಾವು ನಂಬಿದ್ದೇವೆ. ಅದೇ ಡೊಮೇನ್ ಮೇಲೆ ಅವಲಂಬಿತವಾಗಿರುವ ಆಂತರಿಕ ಪರಿಕರಗಳು ಮತ್ತು ಇತರ ಸಂಪನ್ಮೂಲಗಳೂ ಕಾರ್ಯನಿರ್ವಹಿಸದ ಕಾರಣ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು ಎಂದು ಅವರು ತಿಳಿಸಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಹೇಳುವುದಾದರೆ ಫೇಸ್‌ಬುಕ್‌ ಸ್ಥಗಿತದ ಕುರಿತು ಆದ ವರದಿಗಳು ಸ್ಥಗಿತಕ್ಕೆ ಸಂಬಂಧಿಸಿದಂತೆ ಜಾಗತಿಕವಾಗಿ ಆಗಿರುವ ಅತಿದೊಡ್ಡ ವರದಿಯಾಗಿದೆ. ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ 1.4 ಕೋಟಿ ವರದಿಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...