Homeಮುಖಪುಟಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

ಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

- Advertisement -
- Advertisement -

ಫೇಸ್‌ಬುಕ್‌, ವಾಟ್ಸ್‌ಆಪ್‌‌, ಇನ್‌ಸ್ಟಾ ಗ್ರಾಮ್‌ ಸೇವೆ ಸುಮಾರು ಆರು ಗಂಟೆಗಳ ಕಾಲ ಸ್ಥಗಿತವಾಗಿ ಬಳಕೆದಾರರ ಚಡಪಡಿಕೆಗೆ ಕಾರಣವಾಗಿದ್ದ ಈ ಮೂರು ಅಪ್ಲಿಕೇಷನ್‌‌ಗಳ ಒಡೆಯನಾದ ಫೇಸ್‌ಬುಕ್‌‌ ಸಂಸ್ಥೆಯು, ಸೇವೆಯನ್ನು ಪುನಾರಂಭ ಮಾಡಿದೆ. ಬಳಕೆದಾರರಿಗೆ ಅಡಚಣೆ ಉಂಟು ಮಾಡಿದ್ದಕ್ಕೆ ಫೇಸ್‌ಬುಕ್‌ ಕ್ಷಮೆಯಾಚಿಸಿದೆ.

“ನಮ್ಮನ್ನು ಅವಲಂಭಿಸಿ ವ್ಯವಹರಿಸುವ ದೊಡ್ಡ ಮಟ್ಟದ ಸಮುದಾಯ ಪ್ರಪಂಚದಾದ್ಯಂತ ಇದ್ದು, ಇವರೆನ್ನೆಲ್ಲ ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌‌ಬುಕ್‌‌ ಸಂಸ್ಥೆ ಟ್ವೀಟ್‌ ಮಾಡಿದೆ.

“ನಮ್ಮ ಅಪ್ಲಿಕೇಷನ್‌ಗಳು ಸೇವೆಗಳಿಗೆ ಪ್ರವೇಶಿಸುವಂತೆ ಮರುಸ್ಥಾಪಿಸಲು ನಾವು ಶ್ರಮಿಸುತ್ತಿದ್ದೇವೆ. ಈಗ ಅವು ಬಳಕೆಗೆ ಲಭ್ಯವಿವೆ ಎಂದು ವರದಿ ಮಾಡಲು ಸಂತೋಷವಾಗಿದೆ. ನಮ್ಮೊಂದಿಗೆ ಸಹಕರಿಸಿದಕ್ಕಾಗಿ ಧನ್ಯವಾದಗಳು” ಎಂದು ಫೇಸ್‌ಬುಕ್‌ ಹೇಳಿದೆ.

ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ ಈ ಅಪ್ಲಿಕೇಷನ್‌ಗಳು ಸ್ವಸ್ಥಿತಿಗೆ ಮರಳಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ವೆಬ್‌ಸೈಟ್‌ ಸ್ಥಗಿತದ ವರದಿ ಮಾಡುವ ಡೌನ್‌ಡಿಟೆಕ್ಟರ್‌ ಪ್ರಕಾರ ಸೋಮವಾರ ರಾತ್ರಿ 9.30ರ ವೇಳೆಗೆ ಸುಮಾರು 6,900 ವರದಿಗಳು ಫೇಸ್‌ಬುಕ್‌ ಸ್ಥಗಿತದ ಕುರಿತು ಆಗಿವೆ. ಅದೇ ಸಮಯದಲ್ಲಿ ಸುಮಾರು 30,000 ವರದಿಗಳು ವಾಟ್ಸ್‌ಆಪ್‌ ಸಂಬಂಧಿಸಿದಂತೆ ಆಗಿವೆ. ರಾತ್ರಿ 9.27ರ ವೇಳೆಗೆ 18,739 ವರದಿಗಳು ಇನ್‌ಸ್ಟಾಗ್ರಾಮ್‌ ಸ್ಥಗಿತದ ಕುರಿತಾಗಿವೆ ಎನ್ನಲಾಗಿದೆ.

ಸ್ಥಗಿತ ಆರಂಭವಾದ ಸ್ವಲ್ಪ ಸಮಯದ ನಂತರ ಫೇಸ್‌ಬುಕ್, ತನ್ನ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಬಳಕೆದಾರರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದೆ. ಆದರೆ ಸಮಸ್ಯೆಯ ಸ್ವರೂಪದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಿಲ್ಲ. ಬಳಕೆದಾರರು ತಮಗೆ ಬೇಕಾದದ್ದನ್ನು ಪಡೆಯಲು ಅಗತ್ಯವಿರುವ ಡೊಮೈನ್‌ ನೇಮ್‌ ಸಿಸ್ಟಮ್‌ನಲ್ಲಿ ಉಂಟಾದ ಅಡಚಣೆಯೇ ಈ ಸ್ಥಗಿತಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಹೆಸರು ಹೇಳಲಿಚ್ಛಿಸದ ಫೇಸ್‌ಬುಕ್ ಉದ್ಯೋಗಿಗಳು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ಇಂಟರ್‌ನೆಟ್ ಡೊಮೇನ್‌ಗೆ ಆಂತರಿಕ ಮಾರ್ಗಗಳ (ಇಂಟರ್‌ನೆಟ್ ನೆಟ್‌ವರ್ಕ್‌ನಲ್ಲಿ ಬಳಕೆದಾರರ ಸಂಚಾರಕ್ಕಾಗಿ ಮಾರ್ಗವನ್ನು ಆಯ್ಕೆ ಮಾಡುವ ಪ್ರಕ್ರಿಯೆ) ಸಮಸ್ಯೆ ಉಂಟಾಗಿದೆ ಎಂದು ನಾವು ನಂಬಿದ್ದೇವೆ. ಅದೇ ಡೊಮೇನ್ ಮೇಲೆ ಅವಲಂಬಿತವಾಗಿರುವ ಆಂತರಿಕ ಪರಿಕರಗಳು ಮತ್ತು ಇತರ ಸಂಪನ್ಮೂಲಗಳೂ ಕಾರ್ಯನಿರ್ವಹಿಸದ ಕಾರಣ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು ಎಂದು ಅವರು ತಿಳಿಸಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಹೇಳುವುದಾದರೆ ಫೇಸ್‌ಬುಕ್‌ ಸ್ಥಗಿತದ ಕುರಿತು ಆದ ವರದಿಗಳು ಸ್ಥಗಿತಕ್ಕೆ ಸಂಬಂಧಿಸಿದಂತೆ ಜಾಗತಿಕವಾಗಿ ಆಗಿರುವ ಅತಿದೊಡ್ಡ ವರದಿಯಾಗಿದೆ. ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ 1.4 ಕೋಟಿ ವರದಿಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...